AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು

ಟ್ರ್ಯಾಕ್ಟರ್ ಚಾಲಕನೊರ್ವ ಸೀಟ್ ಬೆಲ್ಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ದಂಡ ವಿಧಿಸಿದ್ದಾರೆ. ಈ ವಿಚಿತ್ರ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ನಡೆದಿದೆ.

Viral: ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು
ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸ್​​Image Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Apr 05, 2024 | 3:20 PM

ತೆಲಂಗಾಣ: ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ, ಕಾರಿನಲ್ಲಿ ಪ್ರಯಾಣಿಸುವವರು ಚಾಲಕ ಸೇರಿದಂತೆ ಸೀಟ್ ಬೆಲ್ಟ್ ಧರಿಸಬೇಕು ಎಂಬ ಮುಂತಾದ ಸಂಚಾರಿ ನಿಯಮಗಳು ಸಾಮಾನ್ಯ. ಜೊತೆಗೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡ ಕೂಡ ಕಟ್ಟಬೇಕಾಗುತ್ತದೆ. ಆದರೆ ಇದೀಗ ಟ್ರ್ಯಾಕ್ಟರ್ ಚಾಲಕನೊರ್ವನಿಗೆ ಸೀಟ್ ಬೆಲ್ಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ದಂಡ ವಿಧಿಸಿದ್ದಾರೆ. ಈ ವಿಚಿತ್ರ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ನಡೆದಿದೆ.

ಭದ್ರಾದ್ರಿ ಕೊತಗುಡೆಂ ಜಿಲ್ಲೆ ಪಲ್ವಂಚದಲ್ಲಿ ಸೀಟ್ ಬೆಲ್ಟ್ ಧರಿಸದ ಟ್ರ್ಯಾಕ್ಟರ್ ಚಾಲಕನಿಗೆ ಪಲ್ವಂಚ ಪೊಲೀಸರು 100 ರೂಪಾಯಿ ದಂಡ ವಿಧಿಸಿದ್ದಾರೆ. ಪಲ್ವಂಚ ಮಂಡಲ ಜಗನ್ನಾಥಪುರದ ಟ್ರ್ಯಾಕ್ಟರ್ ಚಾಲಕ ನಾಗಿರೆಡ್ಡಿ ಎಂಬಾತನಿಗೆ ಪೊಲೀಸರು ದಂಡ ಹಾಕಿದ್ದಾರೆ.ಇದರಿಂದ ಗಾಬರಿಗೊಂಡ ಟ್ರ್ಯಾಕ್ಟರ್ ಚಾಲಕ ನಾಗಿರೆಡ್ಡಿ, ಅವರಷ್ಟೇ ಅಲ್ಲದೆ ಸುತ್ತಮುತ್ತಲಿನ ಕೃಷಿಕರು ಅಚ್ಚರಿಗೊಂಡಿದ್ದಾರೆ. ಬಳಿಕ ಟ್ರ್ಯಾಕ್ಟರ್ ಶೋರೂಂಗೆ ಕರೆ ಮಾಡಿದ್ದು, ಟ್ರ್ಯಾಕ್ಟರ್ ಗೆ ಸೀಟ್ ಬೆಲ್ಟ್ ಇಲ್ಲ ಎಂದು ಶೋರೂಂನಲ್ಲಿ ಹೇಳಿರುವುದಾಗಿ ಟ್ರ್ಯಾಕ್ಟರ್ ಚಾಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​​ನಲ್ಲಿ ಮಿನಿ ಗಾರ್ಡನ್ ನಿರ್ಮಿಸಿದ ಚಾಲಕ; ಕನ್ನಡಿಗರ ಭಾರೀ ಮೆಚ್ಚುಗೆ

ಈ ಹಿಂದೆ ಮಹಬೂಬಾಬಾದ್ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಟ್ರ್ಯಾಕ್ಟರ್ ಡ್ರೈವರ್‌ಗೆ ಇದೇ ರೀತಿಯ ಚಲನ್ ಬಂದಿತ್ತು. ಮಹಬೂಬಾಬಾದ್ ಜಿಲ್ಲೆಯ ಸೀತಾನಗರಂ ಗ್ರಾಮದ ಟ್ರ್ಯಾಕ್ಟರ್ ಚಾಲಕನಿಗೆ ಹೆಲ್ಮೆಟ್ ಧರಿಸದ ಕಾರಣಕ್ಕೆ ದಂಡ ಹಾಕಲಾಗಿತ್ತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ