AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 26 ವರ್ಷ ಮನೆಗೆಲಸ ಮಾಡಿದ ಪತ್ನಿಗೆ 79 ಲಕ್ಷ ರೂ. ನೀಡಿದ ಪತಿ

26 ವರ್ಷಗಳಿಂದ ಗೃಹಿಣಿಯಾಗಿ ಮಾಡಿದ ಮನೆಗೆಲಸಕ್ಕೆ ಪತಿ ತನಗೆ ಪರಿಹಾರ ನೀಡುವಂತೆ ಪತ್ನಿ ಕೋರ್ಟ್​​​​ ಮೊರೆ ಹೋಗಿದ್ದಾಳೆ. ಅಂತಿಮವಾಗಿ ನ್ಯಾಯಾಲಯವು 26 ವರ್ಷಗಳಿಂದ ಗೃಹಿಣಿಯಾಗಿ ಮಾಡಿದ ಮನೆಗೆಲಸಕ್ಕೆ ರೂ.79 ಲಕ್ಷ 48 ಸಾವಿರ ಪರಿಹಾರ ನೀಡುವಂತೆ ಪತಿಗೆ ಆದೇಶಿಸಿದೆ.

Viral News: 26 ವರ್ಷ ಮನೆಗೆಲಸ ಮಾಡಿದ ಪತ್ನಿಗೆ 79 ಲಕ್ಷ ರೂ. ನೀಡಿದ ಪತಿ
26 ವರ್ಷ ಮನೆಗೆಲಸ ಮಾಡಿದ ಪತ್ನಿಗೆ 79 ಲಕ್ಷ ರೂ. ನೀಡಿದ ಪತಿImage Credit source: Pinterest
ಅಕ್ಷತಾ ವರ್ಕಾಡಿ
|

Updated on:Mar 19, 2024 | 10:54 AM

Share

ಸ್ಪೇನ್: ಮದುವೆಯಾದ ನಂತರ, ಪ್ರತೀ ಮಹಿಳೆ ತವರು ಮನೆ ಮರೆತು, ತನ್ನ ಜೊತೆಗಾರನ ಮನೆಗೆ ಬರುವುದು, ಬಾಳುವುದು ಆಕೆಯ ಜೀವನದ ಪುಸ್ತಕದ ಎರಡನೇ ಅಧ್ಯಾಯ. ಅಡುಗೆ ಮಾಡುವುದು, ಮಕ್ಕಳ ಪಾಲನೆ ಪೋಷಣೆ ಮಾಡುವುದು ಒಟ್ಟಾರೆ ಮನೆಯ ಜವಾಬ್ದಾರಿ ಹೊತ್ತಿರುತ್ತಾಳೆ. ಆದರೆ ಈ ಎಲ್ಲಾ ಜವಾಬ್ದಾರಿಗಳನ್ನು ಖುಷಿಯಿಂದಲೇ ಮಾಡುತ್ತಾಳೆ ವಿನಃ ಸಂಬಳಕ್ಕಾಗಿ ಅಲ್ಲ. ಆದರೆ ಸ್ಪೇನ್ ನ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಮಹಿಳೆಯೊಬ್ಬಳು ತಾನು 26 ವರ್ಷಗಳಿಂದ ಗೃಹಿಣಿಯಾಗಿ ಮಾಡಿದ ಮನೆಗೆಲಸಕ್ಕೆ ಪತಿ ತನಗೆ ಪರಿಹಾರ ನೀಡುವಂತೆ ಕೋರ್ಟ್​​​​ ಮೊರೆ ಹೋಗಿದ್ದಾಳೆ. ಅಂತಿಮವಾಗಿ ನ್ಯಾಯಾಲಯವು 26 ವರ್ಷಗಳಿಂದ ಗೃಹಿಣಿಯಾಗಿ ಮಾಡಿದ ಮನೆಗೆಲಸಕ್ಕೆ ರೂ.79 ಲಕ್ಷ 48 ಸಾವಿರ ಪರಿಹಾರ ನೀಡುವಂತೆ ಪತಿಗೆ ಆದೇಶಿಸಿದೆ.

ಸ್ಪೇನ್‌ನ ಪಾಂಟೆವೆಡ್ರಾದಲ್ಲಿನ ಪ್ರಾಂತೀಯ ನ್ಯಾಯಾಲಯವು ಇತ್ತೀಚೆಗೆ ಈ ತೀರ್ಪು ನೀಡಿದ್ದು, ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. 79 ಲಕ್ಷದ 48 ಸಾವಿರ ರೂ. ಪರಿಹಾರ ನೀಡಿದ್ದು, ಆದರೆ ದಂಪತಿಗಳ ಹೆಸರನ್ನು ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ದೇವ್ರೆ ನನ್ನ ನೀನೇ ಕಾಪಾಡ್ಬೇಕಪ್ಪ; ದೇವರಿಗೆ ಕೈ ಮುಗಿದು ದೇಗುಲದ ಹುಂಡಿ ಹಣವನ್ನೇ ಎಗರಿಸಿದ ಭೂಪ 

1996 ರಲ್ಲಿ ಮದುವೆಯಾಗಿದ್ದ ಈ ದಂಪತಿಗಳು ಕೆಲ ಭಿನ್ನಾಭಿಪ್ರಾಯದಿಂದ 2022ರಲ್ಲಿ ವಿಚ್ಛೇಧನ ಪಡೆದುಕೊಂಡಿದ್ದರು. ಸುಮಾರು 26 ವರ್ಷದ ದಾಂಪತ್ಯ ಜೀವನದಲ್ಲಿ ಪತ್ನಿ ಮನೆಯ ಕೆಲಸ ಹಾಗೂ ಮಗಳನ್ನು ಬೆಳೆಸುವುದರಲ್ಲಿಯೇ ಜೀವನ ಕಂಡುಕೊಂಡಿದ್ದಳು. ಸ್ವಂತ ಜೀವನ ನಿರ್ವಹಣೆಗೆ ಏನು ಕಂಡುಕೊಂಡಿಲ್ಲದ್ದ ಕಾರಣ ಪತ್ನಿ ನ್ಯಾಯಾಲಯದ ಮೊರೆ ಹೋಗಿ 26 ವರ್ಷಗಳ ಕಾಲ ಮನೆಗೆಲಸ ಮಾಡಿದಕ್ಕೆ ಪತಿಯಿಂದ 79 ಲಕ್ಷ ರೂ. ಪರಿಹಾರ ಪಡೆದುಕೊಂಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:53 am, Tue, 19 March 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು