Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ನಿಮಿಷದಲ್ಲಿ 3.5 ಕಿ.ಗ್ರಾಂ ಮೊಸರು ತಿಂದು ದಾಖಲೆ ಮಾಡಿದ ವ್ಯಕ್ತಿ; ಬಿಹಾರದಲ್ಲಿ ಮೊಸರು ತಿನ್ನುವ ಸ್ಪರ್ಧೆ

Bihar : ಹತ್ತು ವರ್ಷಗಳಿಂದ ಪಾಟ್ನಾದಲ್ಲಿ ಈ ಸ್ಪರ್ಧೆ ನಡೆಯುತ್ತಿದೆ. ಈ ವರ್ಷ 500 ಸ್ಪರ್ಧಿಗಳು ಭಾಗವಹಿಸಿದ್ದರು. ಆರೋಗ್ಯಕ್ಕೆ ಮೊಸರಿನ ಮಹತ್ವ ಸಾರುವುದು ಸ್ಪರ್ಧೆಯ ಉದ್ದೇಶ.

3 ನಿಮಿಷದಲ್ಲಿ 3.5 ಕಿ.ಗ್ರಾಂ ಮೊಸರು ತಿಂದು ದಾಖಲೆ ಮಾಡಿದ ವ್ಯಕ್ತಿ; ಬಿಹಾರದಲ್ಲಿ ಮೊಸರು ತಿನ್ನುವ ಸ್ಪರ್ಧೆ
ಸ್ಪರ್ಧಾರ್ಥಿಗಳು ಮೊಸರು ತಿನ್ನುತ್ತಿರುವುದು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jan 19, 2023 | 5:37 PM

Viral Video : ಬಿಹಾರದ ಪಾಟ್ನಾದಲ್ಲಿ ನಿನ್ನೆ ಮೊಸರು ತಿನ್ನುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಆಹಾ ಮೊಸರು! ಯಾರಿಗೆ ಇಷ್ಟವಿಲ್ಲ? ಕುಡಿದಷ್ಟೂ ಮತ್ತೂ ಬೇಕೆನ್ನಿಸುವ ಸ್ವಾದ ಅದರದು. ಹೀಗೆ ಮೊಸರಿನ ಸ್ವಾದಕ್ಕೆ ಮಾರುಹೋದವರೆಲ್ಲ ಇಲ್ಲಿ ಒಟ್ಟಾಗಿದ್ದರು. ಅಂದರೆ ಒಟ್ಟು 500 ಜನ ಸ್ಪರ್ಧಿಗಳು ಇದರಲ್ಲಿ ಭಾಗವಹಿಸಿದ್ದರು. ಹೆಣ್ಣುಮಕ್ಕಳು, ಗಂಡುಮಕ್ಕಳು, ಮಕ್ಕಳು, ವಯಸ್ಸಾದವು ಹೀಗೆ ಎಲ್ಲರೂ ಉತ್ಸಾಹದಿಂದ ಒಳಗೊಂಡಿದ್ದರು.

ದಹೀ ಖಾವೋ ಸ್ಪರ್ಧೆಯನ್ನು ಪಾಟ್ನಾದಲ್ಲಿ ಕಳೆದ ಹತ್ತುವರ್ಷಗಳಿಂದ ಏರ್ಪಡಿಸುತ್ತ ಬರಲಾಗಿದೆ. ಮಹಿಳೆಯರು, ಪುರುಷರು ಮತ್ತು ಹಿರಿಯ ನಾಗರಿಕರು ಹೀಗೆ ಮೂರು ಗುಂಪುಗಳಲ್ಲಿ ಸ್ಪರ್ಧಾರ್ಥಿಗಳನ್ನು ವಿಂಗಡಿಸಲಾಗಿತ್ತು. ಪುರುಷರ ವಿಭಾಗದಲ್ಲಿ ಅಜಯ್​ ಕುಮಾರ್ 3 ನಿಮಿಷದಲ್ಲಿ 3 ಕಿ.ಗ್ರಾಂ 420 ಗ್ರಾಂ ಮೊಸರನ್ನು ತಿಂದು ಪ್ರಥಮ ಸ್ಥಾನ ಗಳಿಸಿದ್ಧಾರೆ. ಮಹಿಳೆಯರಲ್ಲಿ ಪ್ರೇಮಾ ತಿವಾರಿ 3 ನಿಮಿಷದಲ್ಲಿ 2 ಕಿ.ಗ್ರಾಂ 718 ಗ್ರಾಂ ಮೊಸರು ತಿಂದು ಮೊದಲ ಸ್ಥಾನ ಪಡೆದಿದ್ದಾರೆ. ಹಿರಿಯ ನಾಗರಿಕರಲ್ಲಿ ಶಂಕರ್ ಕಾಂತ್​ 3 ನಿಮಿಷದಲ್ಲಿ 3 ಕಿ.ಗ್ರಾಂ, 647 ಗ್ರಾಂ ಮೊಸರು ತಿಂದು ಅಗ್ರಸ್ಥಾನವೇರಿದ್ದಾರೆ.

ಇದನ್ನೂ ಓದಿ : ಎದುರುಬದುರಾದ ಕಾರ್​ಗಳು ಇಕ್ಕಟ್ಟಾದ ಸೇತುವೆ ಮೇಲೆ ಚಲಿಸಿದ ವಿಡಿಯೋ ವೈರಲ್

ಪಾಟ್ನಾ ಡೈರಿ ಪ್ರಾಜೆಕ್ಟ್‌ನ ಅಧ್ಯಕ್ಷ ಸಂಜಯ್ ಕುಮಾರ್ ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದಿಸಿದರು. ಮೊಸರು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎನ್ನುವುದನ್ನು ತಿಳಿಸುವುದು ಈ ಸ್ಪರ್ಧೆಯ ಉದ್ದೇಶವಾಗಿತ್ತು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:32 pm, Thu, 19 January 23

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್