AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ನಿಮಿಷದಲ್ಲಿ 3.5 ಕಿ.ಗ್ರಾಂ ಮೊಸರು ತಿಂದು ದಾಖಲೆ ಮಾಡಿದ ವ್ಯಕ್ತಿ; ಬಿಹಾರದಲ್ಲಿ ಮೊಸರು ತಿನ್ನುವ ಸ್ಪರ್ಧೆ

Bihar : ಹತ್ತು ವರ್ಷಗಳಿಂದ ಪಾಟ್ನಾದಲ್ಲಿ ಈ ಸ್ಪರ್ಧೆ ನಡೆಯುತ್ತಿದೆ. ಈ ವರ್ಷ 500 ಸ್ಪರ್ಧಿಗಳು ಭಾಗವಹಿಸಿದ್ದರು. ಆರೋಗ್ಯಕ್ಕೆ ಮೊಸರಿನ ಮಹತ್ವ ಸಾರುವುದು ಸ್ಪರ್ಧೆಯ ಉದ್ದೇಶ.

3 ನಿಮಿಷದಲ್ಲಿ 3.5 ಕಿ.ಗ್ರಾಂ ಮೊಸರು ತಿಂದು ದಾಖಲೆ ಮಾಡಿದ ವ್ಯಕ್ತಿ; ಬಿಹಾರದಲ್ಲಿ ಮೊಸರು ತಿನ್ನುವ ಸ್ಪರ್ಧೆ
ಸ್ಪರ್ಧಾರ್ಥಿಗಳು ಮೊಸರು ತಿನ್ನುತ್ತಿರುವುದು
TV9 Web
| Updated By: ಶ್ರೀದೇವಿ ಕಳಸದ|

Updated on:Jan 19, 2023 | 5:37 PM

Share

Viral Video : ಬಿಹಾರದ ಪಾಟ್ನಾದಲ್ಲಿ ನಿನ್ನೆ ಮೊಸರು ತಿನ್ನುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಆಹಾ ಮೊಸರು! ಯಾರಿಗೆ ಇಷ್ಟವಿಲ್ಲ? ಕುಡಿದಷ್ಟೂ ಮತ್ತೂ ಬೇಕೆನ್ನಿಸುವ ಸ್ವಾದ ಅದರದು. ಹೀಗೆ ಮೊಸರಿನ ಸ್ವಾದಕ್ಕೆ ಮಾರುಹೋದವರೆಲ್ಲ ಇಲ್ಲಿ ಒಟ್ಟಾಗಿದ್ದರು. ಅಂದರೆ ಒಟ್ಟು 500 ಜನ ಸ್ಪರ್ಧಿಗಳು ಇದರಲ್ಲಿ ಭಾಗವಹಿಸಿದ್ದರು. ಹೆಣ್ಣುಮಕ್ಕಳು, ಗಂಡುಮಕ್ಕಳು, ಮಕ್ಕಳು, ವಯಸ್ಸಾದವು ಹೀಗೆ ಎಲ್ಲರೂ ಉತ್ಸಾಹದಿಂದ ಒಳಗೊಂಡಿದ್ದರು.

ದಹೀ ಖಾವೋ ಸ್ಪರ್ಧೆಯನ್ನು ಪಾಟ್ನಾದಲ್ಲಿ ಕಳೆದ ಹತ್ತುವರ್ಷಗಳಿಂದ ಏರ್ಪಡಿಸುತ್ತ ಬರಲಾಗಿದೆ. ಮಹಿಳೆಯರು, ಪುರುಷರು ಮತ್ತು ಹಿರಿಯ ನಾಗರಿಕರು ಹೀಗೆ ಮೂರು ಗುಂಪುಗಳಲ್ಲಿ ಸ್ಪರ್ಧಾರ್ಥಿಗಳನ್ನು ವಿಂಗಡಿಸಲಾಗಿತ್ತು. ಪುರುಷರ ವಿಭಾಗದಲ್ಲಿ ಅಜಯ್​ ಕುಮಾರ್ 3 ನಿಮಿಷದಲ್ಲಿ 3 ಕಿ.ಗ್ರಾಂ 420 ಗ್ರಾಂ ಮೊಸರನ್ನು ತಿಂದು ಪ್ರಥಮ ಸ್ಥಾನ ಗಳಿಸಿದ್ಧಾರೆ. ಮಹಿಳೆಯರಲ್ಲಿ ಪ್ರೇಮಾ ತಿವಾರಿ 3 ನಿಮಿಷದಲ್ಲಿ 2 ಕಿ.ಗ್ರಾಂ 718 ಗ್ರಾಂ ಮೊಸರು ತಿಂದು ಮೊದಲ ಸ್ಥಾನ ಪಡೆದಿದ್ದಾರೆ. ಹಿರಿಯ ನಾಗರಿಕರಲ್ಲಿ ಶಂಕರ್ ಕಾಂತ್​ 3 ನಿಮಿಷದಲ್ಲಿ 3 ಕಿ.ಗ್ರಾಂ, 647 ಗ್ರಾಂ ಮೊಸರು ತಿಂದು ಅಗ್ರಸ್ಥಾನವೇರಿದ್ದಾರೆ.

ಇದನ್ನೂ ಓದಿ : ಎದುರುಬದುರಾದ ಕಾರ್​ಗಳು ಇಕ್ಕಟ್ಟಾದ ಸೇತುವೆ ಮೇಲೆ ಚಲಿಸಿದ ವಿಡಿಯೋ ವೈರಲ್

ಪಾಟ್ನಾ ಡೈರಿ ಪ್ರಾಜೆಕ್ಟ್‌ನ ಅಧ್ಯಕ್ಷ ಸಂಜಯ್ ಕುಮಾರ್ ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದಿಸಿದರು. ಮೊಸರು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎನ್ನುವುದನ್ನು ತಿಳಿಸುವುದು ಈ ಸ್ಪರ್ಧೆಯ ಉದ್ದೇಶವಾಗಿತ್ತು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:32 pm, Thu, 19 January 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?