ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾದ ಯುವಕ; ಪರೀಕ್ಷೆಗೆ ಒಳಪಡಿಸಿದಾಗ ವೈದ್ಯರೇ ಶಾಕ್​​

ಆಸ್ಪತ್ರೆಯ ಹಿರಿಯ ವೈದ್ಯ ರಾಜೇಂದ್ರ ಮಂಡಿಯಾ ಅವರ ಪ್ರಕಾರ "21 ವರ್ಷದ ಯುವಕ ಆಸ್ಪತ್ರೆಗೆ ತೀವ್ರ ಹೊಟ್ಟೆ ನೋವಿನಿಂದ ಬಂದಿದ್ದ. ಆತನಿಗೆ ಎಕ್ಸ್ ರೇ, ಸಿಟಿ ಸ್ಕ್ಯಾನ್ ನಂತಹ ಪರೀಕ್ಷೆಗಳನ್ನು ನಡೆಸಲಾಯಿತು. ಈ ಪರೀಕ್ಷೆಗಳಲ್ಲಿ ಆತನ ಹೊಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಕಬ್ಬಿಣದ ವಸ್ತುಗಳು ಇರುವುದು ಪತ್ತೆಯಾಗಿದೆ".

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾದ ಯುವಕ; ಪರೀಕ್ಷೆಗೆ ಒಳಪಡಿಸಿದಾಗ ವೈದ್ಯರೇ ಶಾಕ್​​

Updated on: May 30, 2024 | 11:49 AM

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬನನ್ನು ಪರೀಕ್ಷೆಗೆ ಒಳಪಡಿಸಿದಾಗ ಅವನ ಹೊಟ್ಟೆಯಲ್ಲಿ ಕಬ್ಬಿಣದ ವಸ್ತುಗಳ ರಾಶಿ ಕಂಡು ವೈದ್ಯರೇ ಶಾಕ್​​ ಆಗಿದ್ದಾರೆ. ಕೂಡಲೇ ಯುವಕನಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಆತನ ಪ್ರಾಣ ಉಳಿಸಲಾಗಿದೆ.

ಸವಾಯಿ ಮಾನ್ಸಿಂಗ್ ಆಸ್ಪತ್ರೆಯ ಹಿರಿಯ ವೈದ್ಯ ರಾಜೇಂದ್ರ ಮಂಡಿಯಾ ಅವರ ಪ್ರಕಾರ “21 ವರ್ಷದ ಯುವಕ ಆಸ್ಪತ್ರೆಗೆ ತೀವ್ರ ಹೊಟ್ಟೆ ನೋವಿನಿಂದ ಬಂದಿದ್ದ. ಆತನಿಗೆ ಎಕ್ಸ್ ರೇ, ಸಿಟಿ ಸ್ಕ್ಯಾನ್ ನಂತಹ ಪರೀಕ್ಷೆಗಳನ್ನು ನಡೆಸಲಾಯಿತು. ಈ ಪರೀಕ್ಷೆಗಳಲ್ಲಿ ಆತನ ಹೊಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಕಬ್ಬಿಣದ ವಸ್ತುಗಳು ಇರುವುದು ಪತ್ತೆಯಾಗಿದರಿಂದ ಲ್ಯಾಪರೊಸ್ಕೋಪಿ ಮತ್ತು ಕೊಲೊನೋಸ್ಕೋಪಿ ನಡೆಸಿ ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಆತನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ಹೊರತೆಗೆಯಲಾಯಿತು” ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮದುವೆಯಾದ ಎರಡೇ ದಿನದಲ್ಲೇ ಮಗುವಿಗೆ ಜನ್ಮ ನೀಡಿದ ಯುವತಿ; ಶಾಕ್​​ಗೆ ಒಳಗಾಗ ವರನ ಕುಟುಂಬ

ಕಬ್ಬಿಣದ ಮೊಳೆಗಳು, ಸೂಜಿಗಳು,  ಕೀಗಳು, ಮೊಳೆಗಳು ಮತ್ತು ಸೂಜಿಗಳು ಮುಂತಾದ ಅನೇಕ ವಸ್ತುಗಳನ್ನು ಆತನ ಹೊಟ್ಟೆಯಿಂದ ತೆಗೆದುಹಾಕಲಾಗಿದೆ. ವಾಸ್ತವವಾಗಿ, ಸಂತ್ರಸ್ತೆಯ ಮಾನಸಿಕ ಸ್ಥಿತಿ ಚೆನ್ನಾಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ ಮತ್ತು ಈ ಪ್ರಕ್ರಿಯೆಯಲ್ಲಿ ಅವನು ಕಬ್ಬಿಣದ ವಸ್ತುಗಳನ್ನು ನುಂಗಿದ್ದಾನೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us