AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ‘ಉಡುಗೊರೆ ಬೇಡ, ಮೋದಿಗೆ ಮತ ಹಾಕಿ’ ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ

ಮದುವೆಯ ಪತ್ರಿಕೆಗಳಲ್ಲಿ ಆಶೀರ್ವಾದವೇ ಉಡುಗೊರೆ ಎಂದು ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಆದರೆ ಇಲ್ಲೊಂದು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಗೆ ಮತ ಹಾಕಿ ಅದುವೇ ಉಡುಗೊರೆ ಎಂದು ಬರೆಯಲಾಗಿದೆ. ವರನ ತಂದೆಯೊಬ್ಬರು ಮಗನ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಈ ರೀತಿಯಾಗಿ ಮುದ್ರಿಸಿದ್ದು, ಈ ಅಪರೂಪದ ಮದುವೆ ಕಾರ್ಡ್​​ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Viral News: 'ಉಡುಗೊರೆ ಬೇಡ, ಮೋದಿಗೆ ಮತ ಹಾಕಿ' ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 26, 2024 | 2:18 PM

ಪ್ರತಿಯೊಬ್ಬರು ಕೂಡ ತಮ್ಮ ಮದುವೆಯ ವಿಶೇಷವಾಗಿರಬೇಕು ಎಂದುಕೊಳ್ಳುತ್ತಾರೆ. ತಮ್ಮ ಮದುವೆಯ ಬಗ್ಗೆ ನಾಲ್ಕು ಜನರು ಮಾತನಾಡಿಕೊಳ್ಳಲಿ ಎಂದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬರು ತನ್ನ ಮಗನ ಮದುವೆಯ ಕಾರ್ಡ್ ನಲ್ಲಿ ಮೋದಿ ಪರ ಪ್ರಚಾರ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು, ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ವರನ ತಂದೆಯೊಬ್ಬರು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ‘ಉಡುಗೊರೆ ಬೇಡ, ಅದರ ಬದಲಿಗೆ ಮೋದಿಗೆ ಮತ ಹಾಕಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ವೈರಲ್ ಆಗಿರುವ ಈ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರದೊಂದಿಗೆ ‘ನರೇಂದ್ರ ಮೋದಿಗೆ ಮತ ನೀಡುವುದು ನೀವು ನೀಡಬಹುದಾದ ಅತ್ಯುತ್ತಮ ಕೊಡುಗೆಯಾಗಿದೆ’ ಎಂದು ಬರೆಯುವ ಮೂಲಕ ಮೋದಿ ಮೇಲಿನ ವಿಶೇಷ ಅಭಿಮಾನವನ್ನು ತೋರಿಸಿದ್ದಾರೆ. ಹೌದು, ನಂದಿಕಾಂತಿ ನರಸಿಂಲು ಮತ್ತು ಅವರ ಪತ್ನಿ ನಂದಿಕಾಂತಿ ನಿರ್ಮಲಾ ಅವರು ತಮ್ಮ ಮಗನ ಆಮಂತ್ರಣ ಪತ್ರಿಕೆಯಲ್ಲಿ ಮನವಿ ಮಾಡಿಕೊಂಡವರು ಎನ್ನಲಾಗಿದೆ. ಮುಂದಿನ ತಿಂಗಳು ಏಪ್ರಿಲ್‌ 4ರಂದು ಸಂಗರೆಡ್ಡಿ ಜಿಲ್ಲೆಯ ಅರುಟ್ಲಾ ಎಂಬ ಗ್ರಾಮದಲ್ಲಿ ಮದುವೆ ನಡೆಯಲಿದೆ.

ಇದನ್ನೂ ಓದಿ: ಮದುವೆ ಹೊಸ್ತಿಲಲ್ಲಿ ತಮ್ಮ ಸಂಬಂಧಕ್ಕೆ ಅಂತ್ಯ ಹಾಡಿದ ಭಾರತ-ಪಾಕ್​​​​​ ಸಲಿಂಗ ಜೋಡಿ

ಈ ಬಗ್ಗೆ ವರನ ತಂದೆ ನಂದಿಕಾಂತಿ ನರಸಿಂಹುಲು ಅವರು ಪ್ರತಿಕ್ರಿಯಿಸಿದ್ದು, ‘ಮೊದಲು ಕುಟುಂಬಸ್ಥರ ಬಳಿ ಇಂತಹದ್ದೊಂದು ಪ್ರಸ್ತಾಪವನ್ನು ಇಟ್ಟೆನು. ನರೇಂದ್ರ ಮೋದಿ ಪರವಾಗಿ ಪ್ರಚಾರ ಮಾಡಲು, ಆಮಂತ್ರಣ ಪತ್ರಿಕೆ ಮೂಲಕವೂ ಜನರ ಮನವೊಲಿಸಲು ನನ್ನ ಕುಟುಂಬಸ್ಥರು ಕೂಡ ಒಪ್ಪಿಗೆಯನ್ನು ಸೂಚಿಸಿದರು. ಕೊನೆಹೆ ಮೋದಿ ಅವರಿಗೆ ಮತ ನೀಡಿ ಎಂಬುದಾಗಿ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆವು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿ ಮೋದಿಯವರಿಗೆ ಗೌರವ ಸೂಚಿಸಲು ಈ ರೀತಿಯ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್