AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ‘ಉಡುಗೊರೆ ಬೇಡ, ಮೋದಿಗೆ ಮತ ಹಾಕಿ’ ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ

ಮದುವೆಯ ಪತ್ರಿಕೆಗಳಲ್ಲಿ ಆಶೀರ್ವಾದವೇ ಉಡುಗೊರೆ ಎಂದು ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಆದರೆ ಇಲ್ಲೊಂದು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಗೆ ಮತ ಹಾಕಿ ಅದುವೇ ಉಡುಗೊರೆ ಎಂದು ಬರೆಯಲಾಗಿದೆ. ವರನ ತಂದೆಯೊಬ್ಬರು ಮಗನ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಈ ರೀತಿಯಾಗಿ ಮುದ್ರಿಸಿದ್ದು, ಈ ಅಪರೂಪದ ಮದುವೆ ಕಾರ್ಡ್​​ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Viral News: 'ಉಡುಗೊರೆ ಬೇಡ, ಮೋದಿಗೆ ಮತ ಹಾಕಿ' ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ
ಸಾಯಿನಂದಾ
| Edited By: |

Updated on: Mar 26, 2024 | 2:18 PM

Share

ಪ್ರತಿಯೊಬ್ಬರು ಕೂಡ ತಮ್ಮ ಮದುವೆಯ ವಿಶೇಷವಾಗಿರಬೇಕು ಎಂದುಕೊಳ್ಳುತ್ತಾರೆ. ತಮ್ಮ ಮದುವೆಯ ಬಗ್ಗೆ ನಾಲ್ಕು ಜನರು ಮಾತನಾಡಿಕೊಳ್ಳಲಿ ಎಂದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬರು ತನ್ನ ಮಗನ ಮದುವೆಯ ಕಾರ್ಡ್ ನಲ್ಲಿ ಮೋದಿ ಪರ ಪ್ರಚಾರ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು, ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ವರನ ತಂದೆಯೊಬ್ಬರು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ‘ಉಡುಗೊರೆ ಬೇಡ, ಅದರ ಬದಲಿಗೆ ಮೋದಿಗೆ ಮತ ಹಾಕಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ವೈರಲ್ ಆಗಿರುವ ಈ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರದೊಂದಿಗೆ ‘ನರೇಂದ್ರ ಮೋದಿಗೆ ಮತ ನೀಡುವುದು ನೀವು ನೀಡಬಹುದಾದ ಅತ್ಯುತ್ತಮ ಕೊಡುಗೆಯಾಗಿದೆ’ ಎಂದು ಬರೆಯುವ ಮೂಲಕ ಮೋದಿ ಮೇಲಿನ ವಿಶೇಷ ಅಭಿಮಾನವನ್ನು ತೋರಿಸಿದ್ದಾರೆ. ಹೌದು, ನಂದಿಕಾಂತಿ ನರಸಿಂಲು ಮತ್ತು ಅವರ ಪತ್ನಿ ನಂದಿಕಾಂತಿ ನಿರ್ಮಲಾ ಅವರು ತಮ್ಮ ಮಗನ ಆಮಂತ್ರಣ ಪತ್ರಿಕೆಯಲ್ಲಿ ಮನವಿ ಮಾಡಿಕೊಂಡವರು ಎನ್ನಲಾಗಿದೆ. ಮುಂದಿನ ತಿಂಗಳು ಏಪ್ರಿಲ್‌ 4ರಂದು ಸಂಗರೆಡ್ಡಿ ಜಿಲ್ಲೆಯ ಅರುಟ್ಲಾ ಎಂಬ ಗ್ರಾಮದಲ್ಲಿ ಮದುವೆ ನಡೆಯಲಿದೆ.

ಇದನ್ನೂ ಓದಿ: ಮದುವೆ ಹೊಸ್ತಿಲಲ್ಲಿ ತಮ್ಮ ಸಂಬಂಧಕ್ಕೆ ಅಂತ್ಯ ಹಾಡಿದ ಭಾರತ-ಪಾಕ್​​​​​ ಸಲಿಂಗ ಜೋಡಿ

ಈ ಬಗ್ಗೆ ವರನ ತಂದೆ ನಂದಿಕಾಂತಿ ನರಸಿಂಹುಲು ಅವರು ಪ್ರತಿಕ್ರಿಯಿಸಿದ್ದು, ‘ಮೊದಲು ಕುಟುಂಬಸ್ಥರ ಬಳಿ ಇಂತಹದ್ದೊಂದು ಪ್ರಸ್ತಾಪವನ್ನು ಇಟ್ಟೆನು. ನರೇಂದ್ರ ಮೋದಿ ಪರವಾಗಿ ಪ್ರಚಾರ ಮಾಡಲು, ಆಮಂತ್ರಣ ಪತ್ರಿಕೆ ಮೂಲಕವೂ ಜನರ ಮನವೊಲಿಸಲು ನನ್ನ ಕುಟುಂಬಸ್ಥರು ಕೂಡ ಒಪ್ಪಿಗೆಯನ್ನು ಸೂಚಿಸಿದರು. ಕೊನೆಹೆ ಮೋದಿ ಅವರಿಗೆ ಮತ ನೀಡಿ ಎಂಬುದಾಗಿ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆವು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿ ಮೋದಿಯವರಿಗೆ ಗೌರವ ಸೂಚಿಸಲು ಈ ರೀತಿಯ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!