AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ‘ಉಡುಗೊರೆ ಬೇಡ, ಮೋದಿಗೆ ಮತ ಹಾಕಿ’ ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ

ಮದುವೆಯ ಪತ್ರಿಕೆಗಳಲ್ಲಿ ಆಶೀರ್ವಾದವೇ ಉಡುಗೊರೆ ಎಂದು ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಆದರೆ ಇಲ್ಲೊಂದು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಗೆ ಮತ ಹಾಕಿ ಅದುವೇ ಉಡುಗೊರೆ ಎಂದು ಬರೆಯಲಾಗಿದೆ. ವರನ ತಂದೆಯೊಬ್ಬರು ಮಗನ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಈ ರೀತಿಯಾಗಿ ಮುದ್ರಿಸಿದ್ದು, ಈ ಅಪರೂಪದ ಮದುವೆ ಕಾರ್ಡ್​​ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Viral News: 'ಉಡುಗೊರೆ ಬೇಡ, ಮೋದಿಗೆ ಮತ ಹಾಕಿ' ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ
ಸಾಯಿನಂದಾ
| Edited By: |

Updated on: Mar 26, 2024 | 2:18 PM

Share

ಪ್ರತಿಯೊಬ್ಬರು ಕೂಡ ತಮ್ಮ ಮದುವೆಯ ವಿಶೇಷವಾಗಿರಬೇಕು ಎಂದುಕೊಳ್ಳುತ್ತಾರೆ. ತಮ್ಮ ಮದುವೆಯ ಬಗ್ಗೆ ನಾಲ್ಕು ಜನರು ಮಾತನಾಡಿಕೊಳ್ಳಲಿ ಎಂದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬರು ತನ್ನ ಮಗನ ಮದುವೆಯ ಕಾರ್ಡ್ ನಲ್ಲಿ ಮೋದಿ ಪರ ಪ್ರಚಾರ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು, ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ವರನ ತಂದೆಯೊಬ್ಬರು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ‘ಉಡುಗೊರೆ ಬೇಡ, ಅದರ ಬದಲಿಗೆ ಮೋದಿಗೆ ಮತ ಹಾಕಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ವೈರಲ್ ಆಗಿರುವ ಈ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರದೊಂದಿಗೆ ‘ನರೇಂದ್ರ ಮೋದಿಗೆ ಮತ ನೀಡುವುದು ನೀವು ನೀಡಬಹುದಾದ ಅತ್ಯುತ್ತಮ ಕೊಡುಗೆಯಾಗಿದೆ’ ಎಂದು ಬರೆಯುವ ಮೂಲಕ ಮೋದಿ ಮೇಲಿನ ವಿಶೇಷ ಅಭಿಮಾನವನ್ನು ತೋರಿಸಿದ್ದಾರೆ. ಹೌದು, ನಂದಿಕಾಂತಿ ನರಸಿಂಲು ಮತ್ತು ಅವರ ಪತ್ನಿ ನಂದಿಕಾಂತಿ ನಿರ್ಮಲಾ ಅವರು ತಮ್ಮ ಮಗನ ಆಮಂತ್ರಣ ಪತ್ರಿಕೆಯಲ್ಲಿ ಮನವಿ ಮಾಡಿಕೊಂಡವರು ಎನ್ನಲಾಗಿದೆ. ಮುಂದಿನ ತಿಂಗಳು ಏಪ್ರಿಲ್‌ 4ರಂದು ಸಂಗರೆಡ್ಡಿ ಜಿಲ್ಲೆಯ ಅರುಟ್ಲಾ ಎಂಬ ಗ್ರಾಮದಲ್ಲಿ ಮದುವೆ ನಡೆಯಲಿದೆ.

ಇದನ್ನೂ ಓದಿ: ಮದುವೆ ಹೊಸ್ತಿಲಲ್ಲಿ ತಮ್ಮ ಸಂಬಂಧಕ್ಕೆ ಅಂತ್ಯ ಹಾಡಿದ ಭಾರತ-ಪಾಕ್​​​​​ ಸಲಿಂಗ ಜೋಡಿ

ಈ ಬಗ್ಗೆ ವರನ ತಂದೆ ನಂದಿಕಾಂತಿ ನರಸಿಂಹುಲು ಅವರು ಪ್ರತಿಕ್ರಿಯಿಸಿದ್ದು, ‘ಮೊದಲು ಕುಟುಂಬಸ್ಥರ ಬಳಿ ಇಂತಹದ್ದೊಂದು ಪ್ರಸ್ತಾಪವನ್ನು ಇಟ್ಟೆನು. ನರೇಂದ್ರ ಮೋದಿ ಪರವಾಗಿ ಪ್ರಚಾರ ಮಾಡಲು, ಆಮಂತ್ರಣ ಪತ್ರಿಕೆ ಮೂಲಕವೂ ಜನರ ಮನವೊಲಿಸಲು ನನ್ನ ಕುಟುಂಬಸ್ಥರು ಕೂಡ ಒಪ್ಪಿಗೆಯನ್ನು ಸೂಚಿಸಿದರು. ಕೊನೆಹೆ ಮೋದಿ ಅವರಿಗೆ ಮತ ನೀಡಿ ಎಂಬುದಾಗಿ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆವು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿ ಮೋದಿಯವರಿಗೆ ಗೌರವ ಸೂಚಿಸಲು ಈ ರೀತಿಯ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ