AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಕೆ.ಜಿ ತೂಕದ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ 71 ಸಾವಿರ ರೂ ಬಹುಮಾನ

ಇದೀಗಾ ಮೀರತ್‌ನ ಬೃಹತ್​​ ಗಾತ್ರದ ಸಮೋಸಾ ಭಾರೀ ಸುದ್ದಿಯಲ್ಲಿದೆ. ಈ ಸಮೋಸಾವನ್ನು ನೀವು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ, 71,000 ರೂಪಾಯಿ ನಗದು ನೀಡಲಾಗುವುದು ಎಂದು ಸ್ವತಃ ಹೋಟೆಲ್​​ ಮಾಲೀಕರು ಘೋಷಿಸಿದ್ದಾರೆ.

12 ಕೆ.ಜಿ ತೂಕದ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ 71 ಸಾವಿರ ರೂ ಬಹುಮಾನ
ಬಾಹುಬಲಿ ಸಮೋಸಾImage Credit source: tribuneindia.com
ಅಕ್ಷತಾ ವರ್ಕಾಡಿ
|

Updated on:Jun 18, 2023 | 5:53 PM

Share

ಮೀರತ್‌: ಸಾಮಾನ್ಯವಾಗಿ ನೀವು 10, 15 ರೂಪಾಯಿಗಳ ಸಮೋಸಾವನ್ನು ತಿಂದಿರುತ್ತೀರಿ. ಆದರೆ ಎಂದಾದರೂ 12 ಕೆ.ಜಿ ತೂಕದ ಬೃಹತ್​​ ಸಮೋಸಾವನ್ನು ನೋಡಿದ್ದೀರಾ? ಇದೀಗಾ ಮೀರತ್‌ನ ಬೃಹತ್​​ ಗಾತ್ರದ ಸಮೋಸಾ ಭಾರೀ ಸುದ್ದಿಯಲ್ಲಿದೆ. ಈ ಸಮೋಸಾವನ್ನು ನೀವು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ, 71,000 ರೂಪಾಯಿ ನಗದು ನೀಡಲಾಗುವುದು ಎಂದು ಸ್ವತಃ ಹೋಟೆಲ್​​ ಮಾಲೀಕರು ಘೋಷಿಸಿದ್ದಾರೆ.

ಲಾಲ್ಕುರ್ತಿ ಮೂಲದ ಕೌಶಲ್ ಸ್ವೀಟ್ಸ್‌ನಲ್ಲಿ ಈ ವಿಭಿನ್ನ ಸಮೋಸಾವನ್ನು ತಯಾರಿಸಲಾಗಿದೆ. 12 ಕೆಜಿಯ ‘ ಈ ಬಾಹುಬಲಿ’ ಸಮೋಸಾ ತಯಾರಿಸಲು ಮೂವರು ಬಾಣಸಿಗರು ಹಾಗೂ ಎಣ್ಣೆಯಲ್ಲಿ ಫ್ರೈ ಮಾಡಲು 90 ನಿಮಿಷ ತೆಗೆದುಕೊಂಡಿದ್ದಾರೆ. ತಯಾರಿಸಲು ಆರು ಗಂಟೆಗಳು ಬೇಕಾಗಿದೆ. ಮತ್ತೊಂದು ವಿಶೇಷತೆ ನೀವಿದನ್ನು ಹುಟ್ಟು ಹಬ್ಬದಂದು ಕೇಕ್​​ ಬದಲಾಗಿ ಈ ಸಮೋಸಾವನ್ನು ಕತ್ತರಿಸಬಹುದು ಎಂದು ಮಾಲೀಕರಾದ ಶುಭಂ ಕೌಶಲ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ

ಆಲೂಗಡ್ಡೆ, ಬಟಾಣಿ, ಮಸಾಲೆ ಪದಾರ್ಥಗಳು, ಪನೀರ್ ಮತ್ತು ಡ್ರೈ ಫ್ರೂಟ್ಸ್ ಸೇರಿಸಿ ಈ ಸಮೋಸಾ ತಯಾರಿಸಿದ್ದು, ಇದರ ಬೆಲೆ 1,500 ರೂ. ದೇಶದಲ್ಲೇ ಅತಿ ದೊಡ್ಡದಾದ ಸಮೋಸಾ ಇದಾಗಿದೆ. ಸೋಶಿಯಲ್​​ ಮೀಡಿಯಾಗಳಲ್ಲಿ ಈ ಸಮೋಸಾ ಸುದ್ದಿ ಹರಿದಾಡುತ್ತಿದ್ದಂತೆ ಈಗಾಗಲೇ ಸುಮಾರು 40-50 ಆರ್ಡರ್‌ಗಳು ಬಂದಿವೆ ಎಂದು ಕೌಶಲ್ ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:52 pm, Sun, 18 June 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ