AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಕೆಳಗೆ ಕುಳಿತು ಪ್ರಯಾಣಿಕರೊಬ್ಬರನ್ನು ಸಾಂತ್ವನಗೊಳಿಸಿದ ಸಿಬ್ಬಂದಿ

Flight Attendant : ಫ್ಲೈಟ್​ ಅಟೆಂಡೆಂಟ್​ ಆದವರು ಉಳಿದ ಕೆಲಸಗಳಂತೆ ಕರ್ತವ್ಯವನ್ನಷ್ಟೇ ಮಾಡಿದರೆ ಸಾಲದು. ಪ್ರಯಾಣಿಕರ ಪ್ರಯಾಣ ಆರಾಮಾಗಿ ಸಾಗಬೇಕೆಂದರೆ ಹೆಚ್ಚು ತಾಳ್ಮೆ ಬೇಕು. ಸಹಾನುಭೂತಿ ಬೇಕು. ಇದಕ್ಕೆ ಸಾಕ್ಷಿ ಈ ಘಟನೆ.

ವಿಮಾನದಲ್ಲಿ ಕೆಳಗೆ ಕುಳಿತು ಪ್ರಯಾಣಿಕರೊಬ್ಬರನ್ನು ಸಾಂತ್ವನಗೊಳಿಸಿದ ಸಿಬ್ಬಂದಿ
ಡೆಲ್ಟಾ ಏರ್​ಲೈನ್ಸ್​ನ ಡೀನ್​ ಶಾನನ್ ಪ್ರಯಾಣಿಕರನ್ನು ಸಂತೈಸುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Jan 27, 2023 | 9:55 AM

Share

Viral Video : ಭಯ. ಅನೇಕರಿಗೆ ಅನೇಕ ಭಯಗಳಿವೆ. ಪಟ್ಟಿ ಮಾಡುತ್ತಾ ಹೋದರೆ ಮನಃಶಾಸ್ತ್ರದಲ್ಲಿ ಒಂದೊಂದಕ್ಕೂ ಒಂದೊಂದು ವಿಶ್ಲೇಷಣೆ ಇದೆ. ಇದೀಗ ವೈರಲ್ ಆಗುತ್ತಿರುವ ಈ ಫೋಟೋ ನೋಡಿ. ಫ್ಲೈಟ್​ ಅಟೆಂಡೆಂಟ್​ ಕೆಳಗೆ ಕುಳಿತು ಪ್ರಯಾಣಿಕರೊಬ್ಬರ ಕೈ ಹಿಡಿದು ಸಂತೈಸುತ್ತಿದ್ದಾರೆ. ಇಲ್ಲಿರುವ ಈ ಯುವತಿಗೆ ವಿಮಾನ ಪ್ರಯಾಣವೆಂದರೆ. ವಿಮಾನ ಮೇಲೆ ಹಾರುತ್ತಿದ್ದಂತೆ ಆಕೆ ಗಾಬರಿಗೆ ಒಳಗಾಗಿದ್ದಾಳೆ. ಆಗ ಫ್ಲೈಟ್​ ಅಟೆಂಡೆಂಟ್​ ಆಕೆಗೆ ಸಮಾಧಾನ ಹೇಳುತ್ತ ಪ್ರಯಾಣ ಸುಖಕರವಾಗಿ ಆಗುವಂತೆ ಸಹಕರಿಸಿದ್ದಾರೆ.

ಡೆಲ್ಟಾ ಏರ್​ಲೈನ್ಸ್​ನಲ್ಲಿ ಈ ಹೃದಯಸ್ಪರ್ಶಿ ಘಟನೆ ನಡೆದಿದೆ. ಫ್ಲೈಟ್​ ಅಟೆಂಡೆಂಟ್​ ಡೀನ್ ಶಾನನ್​ ಮಹಿಳಾ ಪ್ರಯಾಣಿಕರನ್ನು ಸಂತೈಸುತ್ತಿರುವ ಈ ಫೋಟೋ ಅನ್ನು ಜನವರಿ 14ರಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಲಾಗಿದೆ. 12,000ಕ್ಕೂ ಹೆಚ್ಚು ಜನರು ಈ ಪೋಸ್ಟ್​ಗೆ ಲೈಕ್​ ಮಾಡಿದ್ದಾರೆ. 1,200 ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. 11,000 ಕ್ಕೂ ಹೆಚ್ಚು ಜನರು ಈ ಪೋಸ್ಟ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : ಇಂಗ್ಲಿಷ್​ ಅಕ್ಷರಗಳಲ್ಲಿ ತಾಜ್​ಮಹಲ್​ ರಚಿಸಿದ ಯುವಕನ ವಿಡಿಯೋ ವೈರಲ್

ಕರುಣೆಯುಳ್ಳ ಇಂಥ ವಿಮಾನ ಸಿಬ್ಬಂದಿಯ ಅವಶ್ಯಕತೆ ಈ ಜಗತ್ತಿಗೆ ಬಹಳ ಇದೆ ಎಂದು ಅನೇಕರು ಹೇಳಿದ್ದಾರೆ. ಇಡೀ ಪ್ರಯಾಣದುದ್ದಕ್ಕೂ ಆಕೆಯಲ್ಲಿ ಆತ್ಮವಿಶ್ವಾಸ ತುಂಬಿದ ನಿಮ್ಮ ಮಾನವೀಯತೆ ಶ್ಲಾಘನೀಯ ಎಂದಿದ್ದಾರೆ ಒಬ್ಬರು. ಇಂಥ ಆಪ್ತಭಾವವನ್ನು ಎಲ್ಲರೂ ಎಲ್ಲರಿಗೂ ಕೊಡಲು ಆಗುವುದಿಲ್ಲ ಅದು ಅವರ ವ್ಯಕ್ತಿತ್ವದಲ್ಲಿಯೇ ಮಿಳಿತಗೊಂಡಿರಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಈ ಜಗತ್ತಿಗೆ ಇಂಥ ಸಹಾನುಭೂತಿಯನ್ನು ವ್ಯಕ್ತಪಡಿಸುವ ಜೀವಗಳ ಅಗತ್ಯವಿದೆ. ನಿಮ್ಮಂಥವರ ಸಂತತಿ ಹೆಚ್ಚಲಿ ಎಂದು ಮಗದೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ : ಬೇಟೆಯಾಡಲು ಪ್ರಯತ್ನಿಸಿದ ಮೊಸಳೆಯನ್ನು ದಡಕ್ಕೆ ಎಳೆದು ತಂದ ಎಮ್ಮೆಯ ವಿಡಿಯೋ ವೈರಲ್

ಕೆಲ ಕೆಲಸಗಳು ಕರ್ತವ್ಯಕ್ಕಿಂತ ಮಿಗಿಲಾದುದನ್ನು ಬೇಡುತ್ತವೆ. ಪ್ರೀತಿ, ಕರುಣೆ, ಸಹಾನುಭೂತಿ, ಸಹಾಯ ಮನೋಭಾವ ತುಸು ಹೆಚ್ಚೇ ಬೇಕಾಗುತ್ತದೆ. ಎಂಥ ಪರಿಸ್ಥಿತಿಯನ್ನೂ ಎಂಥ ವ್ಯಕ್ತಿಯನ್ನೂ ನಿಭಾಯಿಸಲು ಹೆಚ್ಚು ತಾಳ್ಮೆ ಬೇಕಾಗುತ್ತದೆ. ಎಲ್ಲಕ್ಕಿಂಥ ಮುಖ್ಯವಾಗಿ ನಿಸ್ವಾರ್ಥ ಮನೋಗತವಾಗಿರಬೇಕು. ಸಹಾಯ ಮತ್ತು ಸೇವಾ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಇಂಥ ಎಲ್ಲ ಗುಣಗಳು ಅಗತ್ಯವಾಗಿ ಬೇಕು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 9:50 am, Fri, 27 January 23

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ