AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವಿಮಾನ ಪ್ರಯಾಣದ ವೇಳೆ ಪಕ್ಕದಲ್ಲಿ ಕುಳಿತ್ತಿದ್ದ ಮಹಿಳೆಯ ತಲೆ ತುಂಬಾ ಹೇನು ಹರಿದಾಡುತ್ತಿರುವುದನ್ನು ಕಂಡು ಪ್ರಯಾಣಿಕನೊಬ್ಬ ಶಾಕ್​​ ಆಗಿದ್ದಾನೆ. ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾನೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು
ಅಕ್ಷತಾ ವರ್ಕಾಡಿ
|

Updated on: Aug 06, 2024 | 12:56 PM

Share

ವಾಷಿಂಗ್ಟನ್‌: ಮಹಿಳೆಯೊಬ್ಬರ ತಲೆತುಂಬ ಹೇನು ಕಾಣಿಸಿದ್ದರಿಂದ ಅಮೆರಿಕದ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿರುವಂಥ ವಿಚಿತ್ರ ಘಟನೆ ನಡೆದಿದೆ. ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಮಹಿಳೆಯ ತಲೆ ತುಂಬಾ ಹರಿದಾಡುತ್ತಿರುವ ಹೇನು ಕಂಡು ಶಾಕ್​​ಗೆ ಒಳಗಾಗಿದ್ದಾರೆ. ಬಳಿಕ ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತಲೆಯಲ್ಲಿ ಒಂದೇ ಒಂದು ಹೇನು ಸೇರಿಕೊಂಡರೂ ವಿಪರೀತ ಕೆರೆತ ಉಂಟಾಗುತ್ತದೆ. ಇದು ದಿನನಿತ್ಯದ ಕೆಲಸಕ್ಕೆ ಸಾಕಷ್ಟು ಅಡ್ಡಿಯುಂಟು ಮಾಡುತ್ತದೆ. ಅಂತದ್ರಲ್ಲಿ ತಲೆ ತುಂಬಾ ಹೇನು ಕಂಡರೆ ಒಂದು ಕ್ಷಣ ತಲೆ ಕಡೆವುದಂತೂ ಖಂಡಿತಾ. ಇದೀಗ ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಸ್ಥಿತಿಯೂ ಹಾಗೆಯೇ ಆಗಿದ್ದು, ಆತ ಕೂರಲಾಗದೇ ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಿಸಿದ್ದಾನೆ. ಲಾಸ್ ಎಂಜಲ್ಸ್‌ನಿಂದ ನ್ಯೂಯಾರ್ಕ್‌ಗೆ ಪ್ರಯಾಣಿಸುತ್ತಿದ್ದ ವಿಮಾನವನ್ನು ಫೋನಿಕ್ಸ್‌ನಲ್ಲಿ ಲ್ಯಾಂಡ್ ಮಾಡಲಾಗಿದೆ.

ಇದನ್ನೂ ಓದಿ: ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

ಈ ವಿಚಿತ್ರ ಘಟನೆಯ ಬಗ್ಗೆ ಟಿಕ್‌ಟಾಕ್ ಕ್ರಿಯೆಟರ್ ಎಥನ್ ಜುಡೆಲ್ಸನ್ ಎಂಬವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಲು ಕಾರಣವೇನು ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದ್ದು, ಒಂದು ಹೇನಿನ ಸಮಸ್ಯೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು