AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವಿಮಾನ ಪ್ರಯಾಣದ ವೇಳೆ ಪಕ್ಕದಲ್ಲಿ ಕುಳಿತ್ತಿದ್ದ ಮಹಿಳೆಯ ತಲೆ ತುಂಬಾ ಹೇನು ಹರಿದಾಡುತ್ತಿರುವುದನ್ನು ಕಂಡು ಪ್ರಯಾಣಿಕನೊಬ್ಬ ಶಾಕ್​​ ಆಗಿದ್ದಾನೆ. ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾನೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು
ಅಕ್ಷತಾ ವರ್ಕಾಡಿ
|

Updated on: Aug 06, 2024 | 12:56 PM

Share

ವಾಷಿಂಗ್ಟನ್‌: ಮಹಿಳೆಯೊಬ್ಬರ ತಲೆತುಂಬ ಹೇನು ಕಾಣಿಸಿದ್ದರಿಂದ ಅಮೆರಿಕದ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿರುವಂಥ ವಿಚಿತ್ರ ಘಟನೆ ನಡೆದಿದೆ. ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಮಹಿಳೆಯ ತಲೆ ತುಂಬಾ ಹರಿದಾಡುತ್ತಿರುವ ಹೇನು ಕಂಡು ಶಾಕ್​​ಗೆ ಒಳಗಾಗಿದ್ದಾರೆ. ಬಳಿಕ ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತಲೆಯಲ್ಲಿ ಒಂದೇ ಒಂದು ಹೇನು ಸೇರಿಕೊಂಡರೂ ವಿಪರೀತ ಕೆರೆತ ಉಂಟಾಗುತ್ತದೆ. ಇದು ದಿನನಿತ್ಯದ ಕೆಲಸಕ್ಕೆ ಸಾಕಷ್ಟು ಅಡ್ಡಿಯುಂಟು ಮಾಡುತ್ತದೆ. ಅಂತದ್ರಲ್ಲಿ ತಲೆ ತುಂಬಾ ಹೇನು ಕಂಡರೆ ಒಂದು ಕ್ಷಣ ತಲೆ ಕಡೆವುದಂತೂ ಖಂಡಿತಾ. ಇದೀಗ ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಸ್ಥಿತಿಯೂ ಹಾಗೆಯೇ ಆಗಿದ್ದು, ಆತ ಕೂರಲಾಗದೇ ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಿಸಿದ್ದಾನೆ. ಲಾಸ್ ಎಂಜಲ್ಸ್‌ನಿಂದ ನ್ಯೂಯಾರ್ಕ್‌ಗೆ ಪ್ರಯಾಣಿಸುತ್ತಿದ್ದ ವಿಮಾನವನ್ನು ಫೋನಿಕ್ಸ್‌ನಲ್ಲಿ ಲ್ಯಾಂಡ್ ಮಾಡಲಾಗಿದೆ.

ಇದನ್ನೂ ಓದಿ: ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

ಈ ವಿಚಿತ್ರ ಘಟನೆಯ ಬಗ್ಗೆ ಟಿಕ್‌ಟಾಕ್ ಕ್ರಿಯೆಟರ್ ಎಥನ್ ಜುಡೆಲ್ಸನ್ ಎಂಬವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಲು ಕಾರಣವೇನು ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದ್ದು, ಒಂದು ಹೇನಿನ ಸಮಸ್ಯೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ