AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಬಳಿಯ ಗ್ರಾಮೀಣ ಭಾಗದ ರೈತನ ಜಮೀನಿನಲ್ಲಿ 'ಸ್ಪೇಸ್‌ಎಕ್ಸ್' ಕ್ಯಾಪ್ಸೂಲ್‌ನ ತುಣುಕು ಪತ್ತೆಯಾಗಿದೆ. iದು ಸುಮಾರು 3 ಮೀಟರ್ ಉದ್ದ ಮತ್ತು 20 ರಿಂದ 30 ಕೆಜಿ ತೂಕವಿದೆ.

Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
ಸ್ಪೇಸ್​ಎಕ್ಸ್ ಕ್ಯಾಪ್ಸುಲ್ ತುಣುಕು
TV9 Web
| Edited By: |

Updated on:Aug 05, 2022 | 2:23 PM

Share

ರೈತರೊಬ್ಬರು ಮುಂಜಾನೆ ಎದ್ದು ಹೊಲಕ್ಕೆ ಹೋದಾಗ ಎದುರಾದ ದೈತ್ಯ ಕಪ್ಪಾದ ವಸ್ತುವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಅದಾಗ್ಯೂ ಅದೇನೆಂದು ನೋಡಲು ಗಾಬರಿಯಿಂದಲೇ ಹತ್ತಿರಕ್ಕೆ ಹೋದಾಗ ತುಣುಕು ವಸ್ತು ಎಂದು ಕಂಡುಕೊಂಡರು. ಆದರೆ ಏನು ಅದು ಎಂದು ಅರ್ಥವಾಗದೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಅಧಿಕಾರಿಗಳು, ಅದು  ‘ಸ್ಪೇಸ್‌ಎಕ್ಸ್‘ ಕ್ಯಾಪ್ಸೂಲ್‌ನ ತುಣುಕು ಎಂದು ದೃಢಪಡಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಬಳಿಯ ಗ್ರಾಮೀಣ ಭಾಗದ ರೈತ ಮಿಕ್ ಮೈನರ್ಸ್ ಅವರ ಜಮೀನಿನಲ್ಲಿ ಈ ಸ್ಪೇಸ್‌ಎಕ್ಸ್ ಕ್ಯಾಪ್ಸೂಲ್‌ನ ತುಣುಕು ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, ಈ ತುಣುಕು ಜು.9ರಂದು ಬಿದ್ದಿದ್ದು, ರೈತ ಇದನ್ನು ಕೆಲವು ದಿನಗಳ ನಂತರ ಗುರುತಿಸಿದ್ದಾರೆ. ಈ ತುಣುಕು ಸುಮಾರು 3 ಮೀಟರ್ ಉದ್ದ ಮತ್ತು 20 ರಿಂದ 30 ಕೆಜಿ ತೂಕವಿರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಸ್ಟ್ರೇಲಿಯಾದ ಮೌಂಟ್ ಸ್ಟ್ರೋಮ್ಲೋ ಅಬ್ಸರ್ವೇಟರಿಯ ಖಗೋಳ ಭೌತಶಾಸ್ತ್ರಜ್ಞ ಡಾ.ಬ್ರಾಡ್ ಟಕರ್ ಅವಶೇಷಗಳನ್ನು ಪರೀಕ್ಷಿಸಿ ಇದೊಂದು ಅದ್ಭುತ ಆವಿಷ್ಕಾರ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಇಂತಹ ಅವಶೇಷಗಳು ಸಮುದ್ರದಲ್ಲಿ ಬೀಳುತ್ತವೆ, ಆದರೆ ಭೂಮಿಗೆ ಬೀಳುವುದು ತುಂಬಾ ವಿರಳವಾಗಿದೆ. ರೈತರ ಹೊಲದ ಬಳಿ ಶೋಧ ಕಾರ್ಯಾಚರಣೆ ನಡೆಸಿದಾಗ ಇನ್ನೂ 2 ಅವಶೇಷಗಳು ಪತ್ತೆಯಾಗಿವೆ. ಆಸ್ಟ್ರೇಲಿಯನ್ ಬಾಹ್ಯಾಕಾಶ ಸಂಸ್ಥೆ ಸಾರ್ವಜನಿಕರಿಗೆ ಅಂತಹ ಯಾವುದೇ ದೃಶ್ಯಗಳು ಕಂಡುಬಂದಲ್ಲಿ ತಕ್ಷಣವೇ ತಿಳಿಸುವಂತೆ ಮನವಿ ಮಾಡಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Fri, 5 August 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ