AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಬಳಿಯ ಗ್ರಾಮೀಣ ಭಾಗದ ರೈತನ ಜಮೀನಿನಲ್ಲಿ 'ಸ್ಪೇಸ್‌ಎಕ್ಸ್' ಕ್ಯಾಪ್ಸೂಲ್‌ನ ತುಣುಕು ಪತ್ತೆಯಾಗಿದೆ. iದು ಸುಮಾರು 3 ಮೀಟರ್ ಉದ್ದ ಮತ್ತು 20 ರಿಂದ 30 ಕೆಜಿ ತೂಕವಿದೆ.

Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
ಸ್ಪೇಸ್​ಎಕ್ಸ್ ಕ್ಯಾಪ್ಸುಲ್ ತುಣುಕು
Follow us
TV9 Web
| Updated By: Rakesh Nayak Manchi

Updated on:Aug 05, 2022 | 2:23 PM

ರೈತರೊಬ್ಬರು ಮುಂಜಾನೆ ಎದ್ದು ಹೊಲಕ್ಕೆ ಹೋದಾಗ ಎದುರಾದ ದೈತ್ಯ ಕಪ್ಪಾದ ವಸ್ತುವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಅದಾಗ್ಯೂ ಅದೇನೆಂದು ನೋಡಲು ಗಾಬರಿಯಿಂದಲೇ ಹತ್ತಿರಕ್ಕೆ ಹೋದಾಗ ತುಣುಕು ವಸ್ತು ಎಂದು ಕಂಡುಕೊಂಡರು. ಆದರೆ ಏನು ಅದು ಎಂದು ಅರ್ಥವಾಗದೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಅಧಿಕಾರಿಗಳು, ಅದು  ‘ಸ್ಪೇಸ್‌ಎಕ್ಸ್‘ ಕ್ಯಾಪ್ಸೂಲ್‌ನ ತುಣುಕು ಎಂದು ದೃಢಪಡಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಬಳಿಯ ಗ್ರಾಮೀಣ ಭಾಗದ ರೈತ ಮಿಕ್ ಮೈನರ್ಸ್ ಅವರ ಜಮೀನಿನಲ್ಲಿ ಈ ಸ್ಪೇಸ್‌ಎಕ್ಸ್ ಕ್ಯಾಪ್ಸೂಲ್‌ನ ತುಣುಕು ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, ಈ ತುಣುಕು ಜು.9ರಂದು ಬಿದ್ದಿದ್ದು, ರೈತ ಇದನ್ನು ಕೆಲವು ದಿನಗಳ ನಂತರ ಗುರುತಿಸಿದ್ದಾರೆ. ಈ ತುಣುಕು ಸುಮಾರು 3 ಮೀಟರ್ ಉದ್ದ ಮತ್ತು 20 ರಿಂದ 30 ಕೆಜಿ ತೂಕವಿರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಸ್ಟ್ರೇಲಿಯಾದ ಮೌಂಟ್ ಸ್ಟ್ರೋಮ್ಲೋ ಅಬ್ಸರ್ವೇಟರಿಯ ಖಗೋಳ ಭೌತಶಾಸ್ತ್ರಜ್ಞ ಡಾ.ಬ್ರಾಡ್ ಟಕರ್ ಅವಶೇಷಗಳನ್ನು ಪರೀಕ್ಷಿಸಿ ಇದೊಂದು ಅದ್ಭುತ ಆವಿಷ್ಕಾರ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಇಂತಹ ಅವಶೇಷಗಳು ಸಮುದ್ರದಲ್ಲಿ ಬೀಳುತ್ತವೆ, ಆದರೆ ಭೂಮಿಗೆ ಬೀಳುವುದು ತುಂಬಾ ವಿರಳವಾಗಿದೆ. ರೈತರ ಹೊಲದ ಬಳಿ ಶೋಧ ಕಾರ್ಯಾಚರಣೆ ನಡೆಸಿದಾಗ ಇನ್ನೂ 2 ಅವಶೇಷಗಳು ಪತ್ತೆಯಾಗಿವೆ. ಆಸ್ಟ್ರೇಲಿಯನ್ ಬಾಹ್ಯಾಕಾಶ ಸಂಸ್ಥೆ ಸಾರ್ವಜನಿಕರಿಗೆ ಅಂತಹ ಯಾವುದೇ ದೃಶ್ಯಗಳು ಕಂಡುಬಂದಲ್ಲಿ ತಕ್ಷಣವೇ ತಿಳಿಸುವಂತೆ ಮನವಿ ಮಾಡಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Fri, 5 August 22

ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು