AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳದಲ್ಲಿ ಗಂಡನ ನಾಲಗೆ ಕಚ್ಚಿದ ಹೆಂಡತಿ; ತುಂಡಾಗಿ ಕೆಳಗೆ ಬಿದ್ದ ನಾಲಗೆ

Uttar Pradesh : ಉತ್ತರ ಪ್ರದೇಶದಲ್ಲಿ ಈ ವಿಲಕ್ಷಣ ಘಟನೆ ಸಂಭವಿಸಿದೆ. ಹೆಂಡತಿಯ ತವರಿನಲ್ಲಿದ್ದ ಮಕ್ಕಳನ್ನು ನೋಡಲು ಹೋದಾಗ ಗಂಡ ಹೆಂಡತಿಯ ಮಧ್ಯೆ ಜಗಳ ಏರ್ಪಟ್ಟಿದೆ. ಈಗ ಹೆಂಡತಿ ಪೊಲೀಸರ ವಶದಲ್ಲಿದ್ದಾಳೆ.

ಜಗಳದಲ್ಲಿ ಗಂಡನ ನಾಲಗೆ ಕಚ್ಚಿದ ಹೆಂಡತಿ; ತುಂಡಾಗಿ ಕೆಳಗೆ ಬಿದ್ದ ನಾಲಗೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಶ್ರೀದೇವಿ ಕಳಸದ|

Updated on:Jan 28, 2023 | 11:57 AM

Share

Viral News: ಗಂಡ ಹೆಂಡತಿಯ ಮಧ್ಯೆ ಜಗಳ!? ಅಚ್ಚರಿ ಪಡುವಂಥದ್ದೇನೂ ಇಲ್ಲ. ಏಕೆಂದರೆ ಇದು ತೀರಾ ಸಾಮಾನ್ಯ. ಎರಡು ಭಿನ್ನ ವ್ಯಕ್ತಿತ್ವ, ಭಿನ್ನ ಹಿನ್ನೆಲೆಯಿಂದ ಬಂದ ಮನಸುಗಳು ಜೀವನದುದ್ದಕ್ಕೂ ಒಂದೇ ಮನೆಯಲ್ಲಿ, ಒಮ್ಮತದಿಂದ ಕುಟುಂಬದ ನಿಯಮಗಳಿಗೆ ತಕ್ಕಂತೆ ವಾಸಿಸುವುದು ಎಂದರೆ ಅದೊಂದು ಸಾಧನೆಯೇ. ಬದಲಾದ ಜೀವನಶೈಲಿ, ಶೈಕ್ಷಣಿಕ ಅರಿವು, ನಿಲುವು, ನಿರೀಕ್ಷೆಗಳು, ಬದುಕಿನ ಗುರಿ ಹೀಗೆ ಎಲ್ಲವನ್ನೂ ತೂಗಿಸಿಕೊಂಡು ಹೋಗುವುದೆಂದರೆ ಸುಲಭದ ಮಾತಲ್ಲ. ಜಗಳಗಳ ಕಾರಣ, ಪರಿಣಾಮ ಕೇಳಿದಾಗ ಕೆಲವೊಮ್ಮೆ ನಗು ಬರಬಹುದು. ಆದರೆ ಅದರ ಹಿಂದೆ ಗಂಭೀರ ಕಾರಣಗಳಿರುತ್ತವೆ. ಇದೀಗ ವೈರಲ್ ಆಗಿರುವ ಈ ಸುದ್ದಿ ಗಮನಿಸಿ. ಹೆಂಡತಿಯೊಬ್ಬಳು ಜಗಳದಲ್ಲಿ ಗಂಡನ ನಾಲಗೆಯನ್ನೇ ಕಚ್ಚಿಬಿಟ್ಟಿದ್ದಾಳೆ, ಅದು ತುಂಡಾಗಿ ನೆಲಕ್ಕೆ ಬೀಳುವಷ್ಟು ಜೋರಾಗಿ!

ಇದನ್ನೂ ಓದಿ : ‘ನಾ ಬರದಿದ್ದರೆ ಶಾಲೆಯೇನು ಮುಚ್ಚಿ ಹೋಗುವುದಿಲ್ಲ’ ಉತ್ತರ ಪ್ರದೇಶದ ಬಾಲಕನ ರಜಾಚೀಟಿ ವೈರಲ್

ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಲಕ್ನೋದ ಠಾಕೂರ್​ಗಂಜ್​ನಲ್ಲಿ ನಡೆದಿದೆ. ಸಲ್ಮಾ ಎಂಬಾಕೆ ಮಕ್ಕಳೊಂದಿಗೆ ತನ್ನ ತವರಿಗೆ ಹೋಗಿದ್ದಾಳೆ. ಬಹಳ ದಿನಗಳಾದರೂ ಆಕೆ ಮರಳಿ ಬಾರದಿದ್ದಾಗ ಗಂಡ ಮುನ್ನಾ ಆಕೆಯ ತವರಿಗೆ ತೆರಳಿ ಅವರನ್ನು ವಾಪಾಸು ಕರೆತರಲು ಹೋಗಿದ್ದಾನೆ. ಅಲ್ಲಿ ಅವರಿಬ್ಬರ ನಡುವೆ ಮಾತು ತಾರಕಕ್ಕೇರಿ ಜಗಳಕ್ಕೆ ತಿರುಗಿದೆ. ಅವನು ಆಕೆಗೆ ಉಗಿಯುವ ಸಂದರ್ಭದಲ್ಲಿ ಆಕೆ ಬಲವಾಗಿ ಅವನ ನಾಲಗೆಯನ್ನು ಕಚ್ಚಿಬಿಟ್ಟಿದ್ದಾಳೆ. ಅದು ತುಂಡಾಗಿ ಕೆಳಗೆ ಬಿದ್ದಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವನನ್ನು ಪೊಲೀಸರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಸಲ್ಮಾ ಈಗ ಪೊಲೀಸರ ವಶದಲ್ಲಿದ್ದಾಳೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : ನಿದ್ದೆ ಬರ್ತಿದೆ ಅದಕ್ಕೆ ರೈಡ್​ ಕ್ಯಾನ್ಸಲ್​ ಮಾಡಿ; ಉಬರ್ ಡ್ರೈವರ್​ನ ಪ್ರಾಮಾಣಿಕತೆ ಮೆಚ್ಚುತ್ತಿರುವ ನೆಟ್ಟಿಗರು

ಪಶ್ಚಿಮ ವಿಭಾಗದ ಎಡಿಸಿಪಿ ಚಿರಂಜೀವ್ ನಾಥ್ ಸಿಂಘಾ, ‘ಈ ದಂಪತಿಯ ಮಧ್ಯೆ ಹಲವಾರು ವರ್ಷಗಳಿಂದ ಜಗಳಗಳು ನಡೆಯುತ್ತ ಬಂದಿವೆ. ಹೆಂಡತಿ ತನ್ನ ಗಂಡನಿಂದ ದೂರವಾಗಿ ತನ್ನ ತಂದೆತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಳು. ಶುಕ್ರವಾರ ಗಂಡ ತನ್ನ ಮಕ್ಕಳನ್ನು ಭೇಟಿಯಾಗಲು ಇಲ್ಲಿ ಬಂದಾಗ ಈ ದುರ್ಘಟನೆ ನಡೆದಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣದ ಹಿನ್ನೆಲೆಯಲ್ಲಿ ತನಿಖೆಯನ್ನು ಆರಂಭಿಸಲಾಗಿದೆ. ಆರೋಪಿ ಸಲ್ಮಾಳನ್ನು ಬಂಧಿಸಲಾಗಿದೆ’ ಎಂದಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:56 am, Sat, 28 January 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?