AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಯಲ್ಲಿ ಹಾಡಿನ ವಿಚಾರಕ್ಕೆ ಗಲಾಟೆ; ಅತಿಥಿಗೆ ಶೂಟ್ ಮಾಡಿ ಕೊಂದ ಮದುಮಗ!

Murder: ಮದುವೆಯಲ್ಲಿ ಹಾಡುಗಳನ್ನು ನುಡಿಸುವ ವಿವಾದದ ಹಿನ್ನೆಲೆಯಲ್ಲಿ ಮದುವೆಗೆ ಬಂದಿದ್ದ ಅತಿಥಿಯೊಬ್ಬರನ್ನು ವರನು ಗುಂಡಿಕ್ಕಿ ಕೊಂದಿದ್ದಾನೆ.

Viral News: ಮದುವೆಯಲ್ಲಿ ಹಾಡಿನ ವಿಚಾರಕ್ಕೆ ಗಲಾಟೆ; ಅತಿಥಿಗೆ ಶೂಟ್ ಮಾಡಿ ಕೊಂದ ಮದುಮಗ!
ಪ್ರಾತಿನಿಧಿಕ ಚಿತ್ರImage Credit source: google
TV9 Web
| Edited By: |

Updated on:May 10, 2022 | 6:38 PM

Share

ನವದೆಹಲಿ: ಮದುವೆಯಲ್ಲಿ (Wedding) ತನಗಿಷ್ಟವಾದ ಹಾಡುಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಗಲಾಟೆ ಉಂಟಾಗಿ ಮದುವೆಗೆ ಬಂದಿದ್ದ ಅತಿಥಿಯೊಬ್ಬರನ್ನು ವರನೇ ಗುಂಡಿಕ್ಕಿ ಕೊಲೆ (Murder) ಮಾಡಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ಮುಜಾಫರ್‌ನಗರದ ಶಾಹಪುರ್ ಪ್ರದೇಶದಲ್ಲಿ ನಡೆದಿದೆ. ಮದುವೆಯಲ್ಲಿ ಹಾಡುಗಳನ್ನು ನುಡಿಸುವ ವಿವಾದದ ಹಿನ್ನೆಲೆಯಲ್ಲಿ ಮದುವೆಗೆ ಬಂದಿದ್ದ ಅತಿಥಿಯೊಬ್ಬರನ್ನು ವರನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮೃತರನ್ನು ಜಾಫರ್ ಅಲಿ ಎಂದು ಗುರುತಿಸಲಾಗಿದ್ದು, ಅವರು ವಧುವಿನ ಕಡೆಯವರಾಗಿದ್ದಾರೆ. ಮದುವೆ ಮೆರವಣಿಗೆಯಲ್ಲಿ ಡಿಜೆ ಹಾಡುಗಳನ್ನು ನುಡಿಸುವುದನ್ನು ಕೆಲವರು ವಿರೋಧಿಸಿದ್ದರಿಂದ ವರ ಮತ್ತು ವಧುವಿನ ಕಡೆಯ ಜನರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಇದೇ ಜಗಳಕ್ಕೆ ಕಾರಣವಾಗಿ, ಕೊಲೆ ನಡೆದಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಅತುಲ್ ಶ್ರೀವಾಸ್ತವ್ ಹೇಳಿದ್ದಾರೆ. (Source)

ಈ ಗಲಾಟೆಯ ಬಳಿಕ ಕೋಪಗೊಂಡ ಮದುಮಗ ಇಫ್ತಿಕರ್ ಗುಂಡು ಹಾರಿಸಿದ್ದು, ಜಾಫರ್ ಅಲಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಈ ಪ್ರಕರಣದಲ್ಲಿ ಪೊಲೀಸರು ಇಫ್ತಿಕರ್ ನನ್ನು ಬಂಧಿಸಿದ್ದು, ಗ್ರಾಮದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮದುವೆಯಾಗಬೇಕಿದ್ದ ವರ ಇದೀಗ ಕೊಲೆ ಮಾಡಿ, ಜೈಲು ಸೇರಿದ್ದಾನೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Tue, 10 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ