AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುಮಗ ಶೇರ್ವಾನಿ ಧರಿಸಿದ್ದೇ ತಪ್ಪಾಯ್ತು!; ಮಂಟಪದಲ್ಲಿ ಕಲ್ಲಿನಿಂದ ಹೊಡೆದು ವಧುವಿನ ಮನೆಯವರ ಗಲಾಟೆ

ಮದುಮಗ ತಮ್ಮ ಬುಡಕಟ್ಟು ಸಂಪ್ರದಾಯದಂತೆ 'ಧೋತಿ-ಕುರ್ತಾ' ಧರಿಸಬೇಕೆಂದು ವಧುವಿನ ಸಂಬಂಧಿಕರು ಒತ್ತಾಯಿಸಿದ್ದರು. ಇದಕ್ಕೆ ವರ ಒಪ್ಪಿರಲಿಲ್ಲ.

Viral News: ಮದುಮಗ ಶೇರ್ವಾನಿ ಧರಿಸಿದ್ದೇ ತಪ್ಪಾಯ್ತು!; ಮಂಟಪದಲ್ಲಿ ಕಲ್ಲಿನಿಂದ ಹೊಡೆದು ವಧುವಿನ ಮನೆಯವರ ಗಲಾಟೆ
ವಧು-ವರರ ಮನೆಯವರ ಜಗಳ
TV9 Web
| Edited By: |

Updated on:May 09, 2022 | 5:29 PM

Share

ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬುಡಕಟ್ಟು ವರನೊಬ್ಬ ತನ್ನ ಮದುವೆಯಲ್ಲಿ ‘ಶೇರ್ವಾನಿ’ ಧರಿಸಿದ್ದೇ ದೊಡ್ಡ ಗಲಾಟೆಗೆ ಕಾರಣವಾಗಿದೆ. ಮದುಮಗ ಧೋತಿ- ಕುರ್ತಾ ಧರಿಸುವ ಬದಲು ಶೇರ್ವಾನಿ ಧರಿಸಿರುವುದನ್ನು ನೋಡಿದ ವಧುವಿನ ಕುಟುಂಬಸ್ಥರು ಮಂಟಪದಲ್ಲೇ ಗಲಾಟೆ ಮಾಡಿದ್ದಾರೆ. ಶೇರ್ವಾನಿ ಆ ಮದುವೆಯಲ್ಲಿ ಎರಡು ಕುಟುಂಬಗಳ ನಡುವೆ ವಿವಾದಕ್ಕೆ ಕಾರಣವಾಯಿತು. ಇದಾದ ನಂತರ ಎರಡು ಕಡೆಯ ಕುಟುಂಬಸ್ಥರು ಜಗಳವಾಡಿಕೊಂಡು, ಪರಸ್ಪರ ಕಲ್ಲು ಎಸೆದು ಹೊಡೆದಾಡಿಕೊಂಡಿದ್ದಾರೆ. ಹೀಗಾಗಿ, ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಮದುಮಗ ತಮ್ಮ ಬುಡಕಟ್ಟು ಸಂಪ್ರದಾಯದಂತೆ ‘ಧೋತಿ-ಕುರ್ತಾ’ ಧರಿಸಬೇಕೆಂದು ವಧುವಿನ ಸಂಬಂಧಿಕರು ಒತ್ತಾಯಿಸಿದ್ದರು. ಇದಕ್ಕೆ ವರ ಒಪ್ಪಿರಲಿಲ್ಲ. ಇದೇ ಕಾರಣಕ್ಕೆ ಶನಿವಾರ ಮಂಗಬೈದ ಗ್ರಾಮದಲ್ಲಿ ಈ ಗಲಾಟೆ ನಡೆದಿದೆ. ಧಾರ್ ನಗರದ ನಿವಾಸಿಯಾಗಿರುವ ವರ ಸುಂದರ್‌ಲಾಲ್ ಮದುವೆಗೆ ಶೇರ್ವಾನಿ ಧರಿಸಿದ್ದರು. ಆದರೆ ವಧುವಿನ ಸಂಬಂಧಿಕರು ಧೋತಿ-ಕುರ್ತಾದಲ್ಲಿ ವಿವಾಹವನ್ನು ನಡೆಸಬೇಕೆಂದು ಒತ್ತಾಯಿಸಿದರು ಎಂದು ಧಮ್ನೋದ್ ಪೊಲೀಸ್ ಠಾಣೆಯ ಉಸ್ತುವಾರಿ ಸುಶೀಲ್ ಯದುವಂಶಿ ಹೇಳಿದ್ದಾರೆ.

ಇದು ಎರಡು ಕಡೆಯ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು ಮತ್ತು ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ. ಬಳಿಕ ಎರಡೂ ಕಡೆಯ ಕುಟುಂಬಸ್ಥರು ಪೊಲೀಸರಿಗೆ ದೂರುಗಳನ್ನು ಸಲ್ಲಿಸಿದರು. ಅದರ ಆಧಾರದ ಮೇಲೆ ಕೆಲವು ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (ಅಶ್ಲೀಲ ಕಾಯ್ದೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಧುವಿನ ಸಂಬಂಧಿಕರು ತಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಠಾಣೆಯಲ್ಲಿ ಕೆಲವು ಮಹಿಳೆಯರು ಆರೋಪಿಸಿದ್ದಾರೆ. ನಂತರ ಶನಿವಾರ, ವಧು ಮತ್ತು ವರನ ಕುಟುಂಬಗಳು ಧಾರ್ ನಗರಕ್ಕೆ ಆಗಮಿಸಿ ವಿವಾಹ ವಿಧಿವಿಧಾನಗಳನ್ನು ಪೂರ್ಣಗೊಳಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ವಿವಾದದ ನಡುವೆಯೂ ಈ ಮದುವೆ ಮತ್ತೆ ನಡೆದಿದೆ ಎಂಬುದೇ ಸಮಾಧಾನಕರ ಸಂಗತಿ.

ಇನ್ನಷ್ಟು ಕುತೂಹಲಕಾರಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Mon, 9 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ