AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುಮಗ ಶೇರ್ವಾನಿ ಧರಿಸಿದ್ದೇ ತಪ್ಪಾಯ್ತು!; ಮಂಟಪದಲ್ಲಿ ಕಲ್ಲಿನಿಂದ ಹೊಡೆದು ವಧುವಿನ ಮನೆಯವರ ಗಲಾಟೆ

ಮದುಮಗ ತಮ್ಮ ಬುಡಕಟ್ಟು ಸಂಪ್ರದಾಯದಂತೆ 'ಧೋತಿ-ಕುರ್ತಾ' ಧರಿಸಬೇಕೆಂದು ವಧುವಿನ ಸಂಬಂಧಿಕರು ಒತ್ತಾಯಿಸಿದ್ದರು. ಇದಕ್ಕೆ ವರ ಒಪ್ಪಿರಲಿಲ್ಲ.

Viral News: ಮದುಮಗ ಶೇರ್ವಾನಿ ಧರಿಸಿದ್ದೇ ತಪ್ಪಾಯ್ತು!; ಮಂಟಪದಲ್ಲಿ ಕಲ್ಲಿನಿಂದ ಹೊಡೆದು ವಧುವಿನ ಮನೆಯವರ ಗಲಾಟೆ
ವಧು-ವರರ ಮನೆಯವರ ಜಗಳ
TV9 Web
| Edited By: |

Updated on:May 09, 2022 | 5:29 PM

Share

ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬುಡಕಟ್ಟು ವರನೊಬ್ಬ ತನ್ನ ಮದುವೆಯಲ್ಲಿ ‘ಶೇರ್ವಾನಿ’ ಧರಿಸಿದ್ದೇ ದೊಡ್ಡ ಗಲಾಟೆಗೆ ಕಾರಣವಾಗಿದೆ. ಮದುಮಗ ಧೋತಿ- ಕುರ್ತಾ ಧರಿಸುವ ಬದಲು ಶೇರ್ವಾನಿ ಧರಿಸಿರುವುದನ್ನು ನೋಡಿದ ವಧುವಿನ ಕುಟುಂಬಸ್ಥರು ಮಂಟಪದಲ್ಲೇ ಗಲಾಟೆ ಮಾಡಿದ್ದಾರೆ. ಶೇರ್ವಾನಿ ಆ ಮದುವೆಯಲ್ಲಿ ಎರಡು ಕುಟುಂಬಗಳ ನಡುವೆ ವಿವಾದಕ್ಕೆ ಕಾರಣವಾಯಿತು. ಇದಾದ ನಂತರ ಎರಡು ಕಡೆಯ ಕುಟುಂಬಸ್ಥರು ಜಗಳವಾಡಿಕೊಂಡು, ಪರಸ್ಪರ ಕಲ್ಲು ಎಸೆದು ಹೊಡೆದಾಡಿಕೊಂಡಿದ್ದಾರೆ. ಹೀಗಾಗಿ, ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಮದುಮಗ ತಮ್ಮ ಬುಡಕಟ್ಟು ಸಂಪ್ರದಾಯದಂತೆ ‘ಧೋತಿ-ಕುರ್ತಾ’ ಧರಿಸಬೇಕೆಂದು ವಧುವಿನ ಸಂಬಂಧಿಕರು ಒತ್ತಾಯಿಸಿದ್ದರು. ಇದಕ್ಕೆ ವರ ಒಪ್ಪಿರಲಿಲ್ಲ. ಇದೇ ಕಾರಣಕ್ಕೆ ಶನಿವಾರ ಮಂಗಬೈದ ಗ್ರಾಮದಲ್ಲಿ ಈ ಗಲಾಟೆ ನಡೆದಿದೆ. ಧಾರ್ ನಗರದ ನಿವಾಸಿಯಾಗಿರುವ ವರ ಸುಂದರ್‌ಲಾಲ್ ಮದುವೆಗೆ ಶೇರ್ವಾನಿ ಧರಿಸಿದ್ದರು. ಆದರೆ ವಧುವಿನ ಸಂಬಂಧಿಕರು ಧೋತಿ-ಕುರ್ತಾದಲ್ಲಿ ವಿವಾಹವನ್ನು ನಡೆಸಬೇಕೆಂದು ಒತ್ತಾಯಿಸಿದರು ಎಂದು ಧಮ್ನೋದ್ ಪೊಲೀಸ್ ಠಾಣೆಯ ಉಸ್ತುವಾರಿ ಸುಶೀಲ್ ಯದುವಂಶಿ ಹೇಳಿದ್ದಾರೆ.

ಇದು ಎರಡು ಕಡೆಯ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು ಮತ್ತು ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ. ಬಳಿಕ ಎರಡೂ ಕಡೆಯ ಕುಟುಂಬಸ್ಥರು ಪೊಲೀಸರಿಗೆ ದೂರುಗಳನ್ನು ಸಲ್ಲಿಸಿದರು. ಅದರ ಆಧಾರದ ಮೇಲೆ ಕೆಲವು ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (ಅಶ್ಲೀಲ ಕಾಯ್ದೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಧುವಿನ ಸಂಬಂಧಿಕರು ತಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಠಾಣೆಯಲ್ಲಿ ಕೆಲವು ಮಹಿಳೆಯರು ಆರೋಪಿಸಿದ್ದಾರೆ. ನಂತರ ಶನಿವಾರ, ವಧು ಮತ್ತು ವರನ ಕುಟುಂಬಗಳು ಧಾರ್ ನಗರಕ್ಕೆ ಆಗಮಿಸಿ ವಿವಾಹ ವಿಧಿವಿಧಾನಗಳನ್ನು ಪೂರ್ಣಗೊಳಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ವಿವಾದದ ನಡುವೆಯೂ ಈ ಮದುವೆ ಮತ್ತೆ ನಡೆದಿದೆ ಎಂಬುದೇ ಸಮಾಧಾನಕರ ಸಂಗತಿ.

ಇನ್ನಷ್ಟು ಕುತೂಹಲಕಾರಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Mon, 9 May 22

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು