AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 4.1 ಕೆಜಿ ಚಿನ್ನದಿಂದ ವಿನ್ಯಾಸಗೊಳಿಸಲಾದ ವಿಶ್ವದ ಅತ್ಯಂತ ದುಬಾರಿ ಶರ್ಟ್

ನೀವು ಎಂದಾದರೂ ಕೋಟಿ ಬೆಲೆ ಬಾಳುವ ಶರ್ಟ್​​​​ ನೋಡಿದ್ದೀರಾ? ಈ ಶರ್ಟ್​​​ ಅನ್ನು ಸಂಪೂರ್ಣವಾಗಿ 4.1 ಕೆಜಿ ಚಿನ್ನದಿಂದ ವಿನ್ಯಾಸಗೊಳಿಸಲಾಗಿದೆ. ಜೊತೆಗೆ ಈ ದುಬಾರಿ ಶರ್ಟ್​​​ 2016 ರಲ್ಲಿ ಗಿನ್ನೆಸ್ ವಿಶ್ವ ದಾಖಲೆಯ ಪುಟವನ್ನು ಸೇರಿದೆ. 'ದಿ ಮ್ಯಾನ್ ವಿತ್ ದಿ ಗೋಲ್ಡನ್ ಶರ್ಟ್' ಎಂಬ ಖ್ಯಾತಿ ಗಳಿಸಿಕೊಂಡಿರುವ ವ್ಯಕ್ತಿಯ ಬಗ್ಗೆ ಇಲ್ಲಿದೆ ಮಾಹಿತಿ.

Viral News: 4.1 ಕೆಜಿ  ಚಿನ್ನದಿಂದ ವಿನ್ಯಾಸಗೊಳಿಸಲಾದ ವಿಶ್ವದ ಅತ್ಯಂತ ದುಬಾರಿ ಶರ್ಟ್
Guinness record for man with golden shirImage Credit source: instagram
ಅಕ್ಷತಾ ವರ್ಕಾಡಿ
|

Updated on:Feb 20, 2024 | 11:00 AM

Share

ಮಹಾರಾಷ್ಟ್ರ ಮೂಲದ ಪ್ರಸಿದ್ಧ ಉದ್ಯಮಿ ಮತ್ತು ರಾಜಕಾರಣಿ ಪಂಕಜ್ ಪರಾಖ್ ಅವರು 4.1 ಕೆಜಿ ಚಿನ್ನದಿಂದ ವಿನ್ಯಾಸಗೊಳಿಸಲಾದ ವಿಶ್ವದ ಅತ್ಯಂತ ದುಬಾರಿ ಶರ್ಟ್ ಹೊಂದಿರುವ ವ್ಯಕ್ತಿ. ಇವರ ಈ ದುಬಾರಿ ಶರ್ಟ್​​​ನಿಂದಲೇ 2016 ರಲ್ಲಿ ಗಿನ್ನೆಸ್ ವಿಶ್ವ ದಾಖಲೆ ಮಾಡಿದ್ದರು. 4.10 ಕೆಜಿ ತೂಕದ ಗೋಲ್ಡನ್ ಶರ್ಟ್ ಈಗ 1,78,00,000 ಕೋಟಿ ರೂ. ಮೌಲ್ಯದ್ದಾಗಿದೆ ಮತ್ತು ಪರಾಖ್ ಅವರ ಶ್ರೀಮಂತ ಸಂಗ್ರಹದ ಒಂದು ಭಾಗವಾಗಿದೆ. ಇದರಲ್ಲಿ ಚಿನ್ನದ ಗಡಿಯಾರ, ಹಲವಾರು ಚಿನ್ನದ ಸರಗಳು, ದೊಡ್ಡ ಚಿನ್ನದ ಉಂಗುರಗಳು, ಚಿನ್ನದ ಮೊಬೈಲ್ ಕವರ್ ಮತ್ತು ಚಿನ್ನದ ಚೌಕಟ್ಟಿನ ಕನ್ನಡಕಗಳು ಸೇರಿವೆ.

2014 ರಲ್ಲಿ ಪಂಕಜ್ ಪರಾಖ್ ಅವರ 45 ನೇ ಹುಟ್ಟುಹಬ್ಬಕ್ಕೆ ಈ ದುಬಾರಿ ಶರ್ಟ್ ಅನ್ನು ನಾಸಿಕ್‌ನ ಬಫ್ನಾ ಜ್ಯುವೆಲ್ಲರ್ಸ್‌ನಿಂದ ವಿನ್ಯಾಸಗೊಳಿಸಲಾಗಿತ್ತು. 20 ಆಯ್ದ ಕುಶಲಕರ್ಮಿಗಳ ತಂಡವು ಎರಡು ತಿಂಗಳುಗಳಲ್ಲಿ 3,200 ಗಂಟೆಗಳ ಕಾಲ ಶ್ರಮ ವಹಿಸಿ ಈ ಶರ್ಟ್​​​​ ಅನ್ನು ವಿನ್ಯಾಸಗೊಳಿಸಲಾಗಿದೆ. 4.1 ಕೆಜಿ ಚಿನ್ನದಿಂದ ವಿನ್ಯಾಸಗೊಳಿಸಲಾದ ಈ ಶರ್ಟನ್ನು ಒಳಭಾಗದಿಂದ ಆರಾಮದಾಯಕ ಮತ್ತು ದೇಹಕ್ಕೆ ಹಾನಿಯಾಗದಂತೆ ವಿನ್ಯಾಸಗೊಳಿಸಲಾಗಿದೆ. ಒಳಭಾಗದಲ್ಲಿ ಬಟ್ಟೆಯನ್ನು ಹೊಂದಿದ್ದು, ಹೊರಭಾಗದಲ್ಲಿ ಚಿನ್ನದಿಂದ ವಿನ್ಯಾಸಗೊಳಿಸಲಾಗಿದೆ. ಇದರ ಹೊರತಾಗಿ ಈ ಶರ್ಟ್ ಅನ್ನು ವಾಶ್​​​ ಮಾಡಬಹುದಾಗಿದೆ.

ಇದನ್ನೂ ಓದಿ: ಇದು ಸಿಂಗಲ್ಸ್ ಕಷ್ಟ, ಗರ್ಲ್ ಫ್ರೆಂಡ್ ಇಲ್ಲ ಅದಕ್ಕೆ ಬಟ್ಟೆ ಅಂಗಡಿಯ ಗೊಂಬೆ ಜೊತೆ ಬೈಕ್ ರೈಡ್​​ 

ಮುಂಬೈನಿಂದ ಸುಮಾರು 260 ಕಿಮೀ ದೂರದಲ್ಲಿರುವ ಯೋಲಾ ಪಟ್ಟಣದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಉಪ ಮೇಯರ್ ಆಗಿ ಗುರುತಿಸಿಕೊಂಡಿರುವ ಪಂಕಜ್ ಪರಾಖ್. ದುಬಾರಿ ಶರ್ಟ್​​ನಿಂದಲೇ’ದಿ ಮ್ಯಾನ್ ವಿತ್ ದಿ ಗೋಲ್ಡನ್ ಶರ್ಟ್’ ಎಂಬ ಖ್ಯಾತಿಯನ್ನು ಗಳಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Tue, 20 February 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ