AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಶ್ರೀಕೃಷ್ಣನ ಮೂರ್ತಿಯನ್ನೇ ಮದುವೆಯಾದ 23ರ ಯುವತಿ

ಪ್ರಾರಂಭದಲ್ಲಿ ಪೋಷಕರು ಮತ್ತು ಸಂಬಂಧಿಕರು ಮದುವೆಗೆ ಒಪ್ಪಿಕೊಳ್ಳಲಿಲ್ಲ. ಕೊನೆಗೆ ಎಲ್ಲರನ್ನೂ ಒಪ್ಪಿಸಿ ಬಂಧುಗಳ ಸಮ್ಮುಖದಲ್ಲಿ ವೈಭವದಿಂದ ಶ್ರೀಕೃಷ್ಣನ ಮೂರ್ತಿಯನ್ನು ವಿವಾಹವಾಗಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

Viral News: ಶ್ರೀಕೃಷ್ಣನ ಮೂರ್ತಿಯನ್ನೇ ಮದುವೆಯಾದ  23ರ ಯುವತಿ
ಅಕ್ಷತಾ ವರ್ಕಾಡಿ
|

Updated on: Apr 20, 2024 | 6:10 PM

Share

ಬಾಲ್ಯದಿಂದಲೂ ಶ್ರೀಕೃಷ್ಣನನ್ನು ಆರಾಧಿಸುತ್ತಾ ಬೆಳೆದ ಯುವತಿಯೊಬ್ಬಳು ಇದೀಗ ಶ್ರೀ ಕೃಷ್ಣನ ಮೂರ್ತಿಯನ್ನೇ ವಿವಾಹವಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಈಕೆಯ ಕೃಷ್ಣನ ಮೇಲಿರುವ ಪ್ರೀತಿಯನ್ನು ಕಂಡು ಪ್ರಾರಂಭದಲ್ಲಿ ಪೋಷಕರು ಮತ್ತು ಸಂಬಂಧಿಕರು ಮದುವೆಗೆ ಒಪ್ಪಿಕೊಳ್ಳಲಿಲ್ಲ. ಕೊನೆಗೆ ಎಲ್ಲರನ್ನೂ ಒಪ್ಪಿಸಿ ಬಂಧುಗಳ ಸಮ್ಮುಖದಲ್ಲಿ ವೈಭವದಿಂದ ಶ್ರೀಕೃಷ್ಣನ ಮೂರ್ತಿಯನ್ನು ವಿವಾಹವಾಗಿದ್ದಾಳೆ.

ಗ್ವಾಲಿಯರ್ ನಗರದ ನ್ಯೂ ಬ್ರಜ್ ವಿಹಾರ್ ಕಾಲೋನಿಯ ಶಿವಾನಿ ಪರಿಹಾರ್ (23) ಬಿಕಾಂ ಮುಗಿಸಿದ್ದಾರೆ. ಆಕೆಯ ತಂದೆ ರಾಮ್ ಪ್ರತಾಪ್ ಪರಿಹಾರ್ ಮತ್ತು ತಾಯಿ ಮೀರಾ ಪರಿಹಾರ್ ಅವರು ಮದುವೆಯನ್ನು ಪ್ರಾರಂಭದಲ್ಲಿ ವಿರೋಧಿಸಿದ್ದರು. ಆದರೆ ಅವರ ಮಗಳ ಹಠಮಾರಿತನದಿಂದಾಗಿ ಅವರೂ ಕೊನೆಗೆ ಒಪ್ಪಬೇಕಾಯಿತು. ಎಪ್ರಿಲ್ 18 ರಂದು ಶಿವಾನಿಯ ವಿವಾಹವು ಕೃಷ್ಣನೊಂದಿಗೆ ಸಾಂಪ್ರದಾಯಿಕ ರೀತಿಯಲ್ಲಿ ನೆರವೇರಿತು.

ಇದನ್ನೂ ಓದಿ: ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ

ಏಪ್ರಿಲ್ 15ರಂದು ಶಿವಾನಿ ಮದುವೆ ಸಂಭ್ರಮ ಶುರುವಾಗಿತ್ತು. ಮೊದಲ ದಿನ 16 ರಂದು ಮಂಟಪಕ್ಕೆ ಹಳದಿ ಹೂ ಹಾಕುವ ಕಾರ್ಯಕ್ರಮ, ಏಪ್ರಿಲ್ 17 ರಂದು ಮದುವೆ ಮೆರವಣಿಗೆ ಮತ್ತು ಏಪ್ರಿಲ್ 18 ರಂದು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಮದುವೆ ನಡೆಯಿತು. ಶಿವಾನಿಯ ಪೋಷಕರು ತಮ್ಮ ಮಗಳನ್ನು ಸಂತೋಷದಿಂದ ಕಳುಹಿಸುತ್ತಾರೆ. ಇಂತಹ ಅಪರೂಪದ ವಿವಾಹ ಸಮಾರಂಭವನ್ನು ಕಣ್ತುಂಬಿಕೊಳ್ಳಲು ನೂರಾರು ಮಂದಿ ನೆರೆದಿದ್ದರು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ