AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ

"ಬ್ಯೂಟಿಷಿಯನ್ ನನ್ನ ಚರ್ಮದ ಬಗ್ಗೆ ಯಾವುದೇ ಪರೀಕ್ಷೆ ಮಾಡಿಸಿಲ್ಲ. ಚಿಕಿತ್ಸೆಯ ನಂತರ, ಆರಂಭದಲ್ಲಿ ಮುಖವು ಚೆನ್ನಾಗಿತ್ತು, ಆದರೆ ಮರುದಿನ ಬೆಳಿಗ್ಗೆ ನನ್ನ ಎಡಗಣ್ಣು ತುಂಬಾ ಊದಿಕೊಂಡಿದೆ" ಎಂದು ಮಹಿಳೆ ಹೇಳಿರುವುದು ವರದಿಯಾಗಿದೆ. ಚರ್ಮದ ಅಲರ್ಜಿ ಪರೀಕ್ಷೆಯನ್ನು ಮಾಡಿಸದೇ ಬ್ಯೂಟಿಷನ್​​ ನೇರವಾಗಿ ಹುಬ್ಬುಗಳಿಗೆ ಬಣ್ಣ ಬಳಿದಿರುವುದೇ ಮಹಿಳೆಯ ಈ ಸ್ಥಿತಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ
ಡೇನಿಯಲ್ ಹಬಾರ್ಡ್
ಅಕ್ಷತಾ ವರ್ಕಾಡಿ
|

Updated on: Apr 22, 2024 | 11:09 AM

Share

ಬ್ಯೂಟಿ ಪಾರ್ಲರ್‌ ಮಹಿಳೆಯ ಅಚ್ಚು ಮೆಚ್ಚಿನ ತಾಣ. ಯಾವುದೇ ವಿಶೇಷ ಕಾರ್ಯಕ್ರಮಗಳಿರಲಿ ಮಹಿಳೆಯರು ತಮ್ಮ ಅಂದ ಚೆಂದವನ್ನು ಹೆಚ್ಚಿಸಲು ಮೊದಲು ಹೋಗುವುದು ಬ್ಯೂಟಿ ಪಾರ್ಲರ್​​ಗೆ. ಸಾಮಾನ್ಯವಾಗಿ ಪಾರ್ಲರ್​​ಗೆ ಹೋದರೆ ಮುಖದ ಅಂದ ಹೆಚ್ಚುತ್ತದೆ. ಆದರೆ ಇಲ್ಲೊಬ್ಬಳು ಯುವತಿ ಪಾರ್ಲರ್​​ಗೆ ಹೋಗಿ ಬಂದ ಮರುದಿನ ಮುಖ ವಿಚಿತ್ರವಾಗಿದ್ದು, ಕಣ್ಣು ಸಂಪೂರ್ಣವಾಗಿ ಊದಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಮಹಿಳೆಯ ಹೆಸರು ಡೇನಿಯಲ್ ಹಬಾರ್ಡ್. ಮಿರರ್ ವರದಿಯ ಪ್ರಕಾರ, ಡೇನಿಯಲ್ ಮಾಲ್ಟಾದಲ್ಲಿ 12 ಪೌಂಡ್‌ಗಳ ಅಂದರೆ ಸುಮಾರು 1237 ರೂಪಾಯಿ ಮೌಲ್ಯದ ಸೌಂದರ್ಯ ಚಿಕಿತ್ಸೆಯನ್ನು ಬುಕ್ ಮಾಡಿದ್ದಳು. “ಬ್ಯೂಟಿಷಿಯನ್ ನನ್ನ ಚರ್ಮದ ಬಗ್ಗೆ ಯಾವುದೇ ಪರೀಕ್ಷೆ ಮಾಡಿಸಿಲ್ಲ. ಆದರೂ ಚಿಕಿತ್ಸೆಯ ನಂತರ, ಆರಂಭದಲ್ಲಿ ಮುಖವು ಚೆನ್ನಾಗಿತ್ತು, ಆದರೆ ಮರುದಿನ ಬೆಳಿಗ್ಗೆ ನನ್ನ ಎಡಗಣ್ಣು ತುಂಬಾ ಊದಿಕೊಂಡಿದೆ” ಎಂದು ಮಹಿಳೆ ಹೇಳಿರುವುದು ವರದಿಯಾಗಿದೆ.

ಇದನ್ನೂ ಓದಿ: Viral Video: ತಮಾಷೆ ನೆಪದಲ್ಲಿ ಮದುವೆ ಮಂಟಪದಲ್ಲಿ ಪುರೋಹಿತರಿಗೆ ಅವಮಾನ ಮಾಡಿದ ಯುವಕರು

ಚರ್ಮದ ಅಲರ್ಜಿ ಪರೀಕ್ಷೆಯನ್ನು ಮಾಡಿಸದೇ ಬ್ಯೂಟಿಷನ್​​ ನೇರವಾಗಿ ಹುಬ್ಬುಗಳಿಗೆ ಬಣ್ಣ ಬಳಿಯಲು ಪ್ರಾರಂಭಿಸಿದ್ದಾಳೆ. ಇದರಿಂದ ಮರುದಿನ ಬೆಳಗ್ಗೆ ಏಳುತ್ತಿದ್ದಂತೆ ಕಣ್ಣು ಸಂಪೂರ್ಣವಾಗಿ ಊದಿಕೊಂಡಿದ್ದು, ಇದೀಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರಾಯಲ್ ಬ್ಲಾಕ್‌ಬರ್ನ್ ಆಸ್ಪತ್ರೆಯಲ್ಲಿ ಅಲರ್ಜಿಯ ಪ್ರತಿಕ್ರಿಯೆಗೆ ಚಿಕಿತ್ಸೆ ನೀಡಲು ಸ್ಟೀರಾಯ್ಡ್‌ಗಳನ್ನು ನೀಡಲಾಗಿದ್ದು, ಸದ್ಯ ಗುಣಮುಖರಾಗುತ್ತಿದ್ದಾಳೆ.  ಇದಾದ ಬಳಿಕ ಮತ್ತೊಮ್ಮೆ ಬ್ಯೂಟಿಪಾರ್ಲರ್‌ಗೆ ತೆರಳಿ ದೂರು ನೀಡಿ ನಷ್ಟದ ಹಣ ವಾಪಸು ಪಡೆಯಲು ಮುಂದಾದರೂ ಬ್ಯೂಟಿಷಿಯನ್ ತನ್ನ ತಪ್ಪಿಗೆ ಪಶ್ಚಾತ್ತಾಪ ಪಡಲಿಲ್ಲ, ಕ್ಷಮೆ ಯಾಚಿಸಲಿಲ್ಲ. ಆದ್ದರಿಂದ ಬ್ಯೂಟಿ ಪಾರ್ಲರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಡೇನಿಯಲ್ ವಕೀಲರನ್ನು ಸಂಪರ್ಕಿಸಿದ್ದಾಳೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ