AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ

"ಬ್ಯೂಟಿಷಿಯನ್ ನನ್ನ ಚರ್ಮದ ಬಗ್ಗೆ ಯಾವುದೇ ಪರೀಕ್ಷೆ ಮಾಡಿಸಿಲ್ಲ. ಚಿಕಿತ್ಸೆಯ ನಂತರ, ಆರಂಭದಲ್ಲಿ ಮುಖವು ಚೆನ್ನಾಗಿತ್ತು, ಆದರೆ ಮರುದಿನ ಬೆಳಿಗ್ಗೆ ನನ್ನ ಎಡಗಣ್ಣು ತುಂಬಾ ಊದಿಕೊಂಡಿದೆ" ಎಂದು ಮಹಿಳೆ ಹೇಳಿರುವುದು ವರದಿಯಾಗಿದೆ. ಚರ್ಮದ ಅಲರ್ಜಿ ಪರೀಕ್ಷೆಯನ್ನು ಮಾಡಿಸದೇ ಬ್ಯೂಟಿಷನ್​​ ನೇರವಾಗಿ ಹುಬ್ಬುಗಳಿಗೆ ಬಣ್ಣ ಬಳಿದಿರುವುದೇ ಮಹಿಳೆಯ ಈ ಸ್ಥಿತಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ
ಡೇನಿಯಲ್ ಹಬಾರ್ಡ್
ಅಕ್ಷತಾ ವರ್ಕಾಡಿ
|

Updated on: Apr 22, 2024 | 11:09 AM

Share

ಬ್ಯೂಟಿ ಪಾರ್ಲರ್‌ ಮಹಿಳೆಯ ಅಚ್ಚು ಮೆಚ್ಚಿನ ತಾಣ. ಯಾವುದೇ ವಿಶೇಷ ಕಾರ್ಯಕ್ರಮಗಳಿರಲಿ ಮಹಿಳೆಯರು ತಮ್ಮ ಅಂದ ಚೆಂದವನ್ನು ಹೆಚ್ಚಿಸಲು ಮೊದಲು ಹೋಗುವುದು ಬ್ಯೂಟಿ ಪಾರ್ಲರ್​​ಗೆ. ಸಾಮಾನ್ಯವಾಗಿ ಪಾರ್ಲರ್​​ಗೆ ಹೋದರೆ ಮುಖದ ಅಂದ ಹೆಚ್ಚುತ್ತದೆ. ಆದರೆ ಇಲ್ಲೊಬ್ಬಳು ಯುವತಿ ಪಾರ್ಲರ್​​ಗೆ ಹೋಗಿ ಬಂದ ಮರುದಿನ ಮುಖ ವಿಚಿತ್ರವಾಗಿದ್ದು, ಕಣ್ಣು ಸಂಪೂರ್ಣವಾಗಿ ಊದಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಮಹಿಳೆಯ ಹೆಸರು ಡೇನಿಯಲ್ ಹಬಾರ್ಡ್. ಮಿರರ್ ವರದಿಯ ಪ್ರಕಾರ, ಡೇನಿಯಲ್ ಮಾಲ್ಟಾದಲ್ಲಿ 12 ಪೌಂಡ್‌ಗಳ ಅಂದರೆ ಸುಮಾರು 1237 ರೂಪಾಯಿ ಮೌಲ್ಯದ ಸೌಂದರ್ಯ ಚಿಕಿತ್ಸೆಯನ್ನು ಬುಕ್ ಮಾಡಿದ್ದಳು. “ಬ್ಯೂಟಿಷಿಯನ್ ನನ್ನ ಚರ್ಮದ ಬಗ್ಗೆ ಯಾವುದೇ ಪರೀಕ್ಷೆ ಮಾಡಿಸಿಲ್ಲ. ಆದರೂ ಚಿಕಿತ್ಸೆಯ ನಂತರ, ಆರಂಭದಲ್ಲಿ ಮುಖವು ಚೆನ್ನಾಗಿತ್ತು, ಆದರೆ ಮರುದಿನ ಬೆಳಿಗ್ಗೆ ನನ್ನ ಎಡಗಣ್ಣು ತುಂಬಾ ಊದಿಕೊಂಡಿದೆ” ಎಂದು ಮಹಿಳೆ ಹೇಳಿರುವುದು ವರದಿಯಾಗಿದೆ.

ಇದನ್ನೂ ಓದಿ: Viral Video: ತಮಾಷೆ ನೆಪದಲ್ಲಿ ಮದುವೆ ಮಂಟಪದಲ್ಲಿ ಪುರೋಹಿತರಿಗೆ ಅವಮಾನ ಮಾಡಿದ ಯುವಕರು

ಚರ್ಮದ ಅಲರ್ಜಿ ಪರೀಕ್ಷೆಯನ್ನು ಮಾಡಿಸದೇ ಬ್ಯೂಟಿಷನ್​​ ನೇರವಾಗಿ ಹುಬ್ಬುಗಳಿಗೆ ಬಣ್ಣ ಬಳಿಯಲು ಪ್ರಾರಂಭಿಸಿದ್ದಾಳೆ. ಇದರಿಂದ ಮರುದಿನ ಬೆಳಗ್ಗೆ ಏಳುತ್ತಿದ್ದಂತೆ ಕಣ್ಣು ಸಂಪೂರ್ಣವಾಗಿ ಊದಿಕೊಂಡಿದ್ದು, ಇದೀಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರಾಯಲ್ ಬ್ಲಾಕ್‌ಬರ್ನ್ ಆಸ್ಪತ್ರೆಯಲ್ಲಿ ಅಲರ್ಜಿಯ ಪ್ರತಿಕ್ರಿಯೆಗೆ ಚಿಕಿತ್ಸೆ ನೀಡಲು ಸ್ಟೀರಾಯ್ಡ್‌ಗಳನ್ನು ನೀಡಲಾಗಿದ್ದು, ಸದ್ಯ ಗುಣಮುಖರಾಗುತ್ತಿದ್ದಾಳೆ.  ಇದಾದ ಬಳಿಕ ಮತ್ತೊಮ್ಮೆ ಬ್ಯೂಟಿಪಾರ್ಲರ್‌ಗೆ ತೆರಳಿ ದೂರು ನೀಡಿ ನಷ್ಟದ ಹಣ ವಾಪಸು ಪಡೆಯಲು ಮುಂದಾದರೂ ಬ್ಯೂಟಿಷಿಯನ್ ತನ್ನ ತಪ್ಪಿಗೆ ಪಶ್ಚಾತ್ತಾಪ ಪಡಲಿಲ್ಲ, ಕ್ಷಮೆ ಯಾಚಿಸಲಿಲ್ಲ. ಆದ್ದರಿಂದ ಬ್ಯೂಟಿ ಪಾರ್ಲರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಡೇನಿಯಲ್ ವಕೀಲರನ್ನು ಸಂಪರ್ಕಿಸಿದ್ದಾಳೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ