ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ

"ಬ್ಯೂಟಿಷಿಯನ್ ನನ್ನ ಚರ್ಮದ ಬಗ್ಗೆ ಯಾವುದೇ ಪರೀಕ್ಷೆ ಮಾಡಿಸಿಲ್ಲ. ಚಿಕಿತ್ಸೆಯ ನಂತರ, ಆರಂಭದಲ್ಲಿ ಮುಖವು ಚೆನ್ನಾಗಿತ್ತು, ಆದರೆ ಮರುದಿನ ಬೆಳಿಗ್ಗೆ ನನ್ನ ಎಡಗಣ್ಣು ತುಂಬಾ ಊದಿಕೊಂಡಿದೆ" ಎಂದು ಮಹಿಳೆ ಹೇಳಿರುವುದು ವರದಿಯಾಗಿದೆ. ಚರ್ಮದ ಅಲರ್ಜಿ ಪರೀಕ್ಷೆಯನ್ನು ಮಾಡಿಸದೇ ಬ್ಯೂಟಿಷನ್​​ ನೇರವಾಗಿ ಹುಬ್ಬುಗಳಿಗೆ ಬಣ್ಣ ಬಳಿದಿರುವುದೇ ಮಹಿಳೆಯ ಈ ಸ್ಥಿತಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ
ಡೇನಿಯಲ್ ಹಬಾರ್ಡ್
Follow us
|

Updated on: Apr 22, 2024 | 11:09 AM

ಬ್ಯೂಟಿ ಪಾರ್ಲರ್‌ ಮಹಿಳೆಯ ಅಚ್ಚು ಮೆಚ್ಚಿನ ತಾಣ. ಯಾವುದೇ ವಿಶೇಷ ಕಾರ್ಯಕ್ರಮಗಳಿರಲಿ ಮಹಿಳೆಯರು ತಮ್ಮ ಅಂದ ಚೆಂದವನ್ನು ಹೆಚ್ಚಿಸಲು ಮೊದಲು ಹೋಗುವುದು ಬ್ಯೂಟಿ ಪಾರ್ಲರ್​​ಗೆ. ಸಾಮಾನ್ಯವಾಗಿ ಪಾರ್ಲರ್​​ಗೆ ಹೋದರೆ ಮುಖದ ಅಂದ ಹೆಚ್ಚುತ್ತದೆ. ಆದರೆ ಇಲ್ಲೊಬ್ಬಳು ಯುವತಿ ಪಾರ್ಲರ್​​ಗೆ ಹೋಗಿ ಬಂದ ಮರುದಿನ ಮುಖ ವಿಚಿತ್ರವಾಗಿದ್ದು, ಕಣ್ಣು ಸಂಪೂರ್ಣವಾಗಿ ಊದಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಮಹಿಳೆಯ ಹೆಸರು ಡೇನಿಯಲ್ ಹಬಾರ್ಡ್. ಮಿರರ್ ವರದಿಯ ಪ್ರಕಾರ, ಡೇನಿಯಲ್ ಮಾಲ್ಟಾದಲ್ಲಿ 12 ಪೌಂಡ್‌ಗಳ ಅಂದರೆ ಸುಮಾರು 1237 ರೂಪಾಯಿ ಮೌಲ್ಯದ ಸೌಂದರ್ಯ ಚಿಕಿತ್ಸೆಯನ್ನು ಬುಕ್ ಮಾಡಿದ್ದಳು. “ಬ್ಯೂಟಿಷಿಯನ್ ನನ್ನ ಚರ್ಮದ ಬಗ್ಗೆ ಯಾವುದೇ ಪರೀಕ್ಷೆ ಮಾಡಿಸಿಲ್ಲ. ಆದರೂ ಚಿಕಿತ್ಸೆಯ ನಂತರ, ಆರಂಭದಲ್ಲಿ ಮುಖವು ಚೆನ್ನಾಗಿತ್ತು, ಆದರೆ ಮರುದಿನ ಬೆಳಿಗ್ಗೆ ನನ್ನ ಎಡಗಣ್ಣು ತುಂಬಾ ಊದಿಕೊಂಡಿದೆ” ಎಂದು ಮಹಿಳೆ ಹೇಳಿರುವುದು ವರದಿಯಾಗಿದೆ.

ಇದನ್ನೂ ಓದಿ: Viral Video: ತಮಾಷೆ ನೆಪದಲ್ಲಿ ಮದುವೆ ಮಂಟಪದಲ್ಲಿ ಪುರೋಹಿತರಿಗೆ ಅವಮಾನ ಮಾಡಿದ ಯುವಕರು

ಚರ್ಮದ ಅಲರ್ಜಿ ಪರೀಕ್ಷೆಯನ್ನು ಮಾಡಿಸದೇ ಬ್ಯೂಟಿಷನ್​​ ನೇರವಾಗಿ ಹುಬ್ಬುಗಳಿಗೆ ಬಣ್ಣ ಬಳಿಯಲು ಪ್ರಾರಂಭಿಸಿದ್ದಾಳೆ. ಇದರಿಂದ ಮರುದಿನ ಬೆಳಗ್ಗೆ ಏಳುತ್ತಿದ್ದಂತೆ ಕಣ್ಣು ಸಂಪೂರ್ಣವಾಗಿ ಊದಿಕೊಂಡಿದ್ದು, ಇದೀಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರಾಯಲ್ ಬ್ಲಾಕ್‌ಬರ್ನ್ ಆಸ್ಪತ್ರೆಯಲ್ಲಿ ಅಲರ್ಜಿಯ ಪ್ರತಿಕ್ರಿಯೆಗೆ ಚಿಕಿತ್ಸೆ ನೀಡಲು ಸ್ಟೀರಾಯ್ಡ್‌ಗಳನ್ನು ನೀಡಲಾಗಿದ್ದು, ಸದ್ಯ ಗುಣಮುಖರಾಗುತ್ತಿದ್ದಾಳೆ.  ಇದಾದ ಬಳಿಕ ಮತ್ತೊಮ್ಮೆ ಬ್ಯೂಟಿಪಾರ್ಲರ್‌ಗೆ ತೆರಳಿ ದೂರು ನೀಡಿ ನಷ್ಟದ ಹಣ ವಾಪಸು ಪಡೆಯಲು ಮುಂದಾದರೂ ಬ್ಯೂಟಿಷಿಯನ್ ತನ್ನ ತಪ್ಪಿಗೆ ಪಶ್ಚಾತ್ತಾಪ ಪಡಲಿಲ್ಲ, ಕ್ಷಮೆ ಯಾಚಿಸಲಿಲ್ಲ. ಆದ್ದರಿಂದ ಬ್ಯೂಟಿ ಪಾರ್ಲರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಡೇನಿಯಲ್ ವಕೀಲರನ್ನು ಸಂಪರ್ಕಿಸಿದ್ದಾಳೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ