AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ

"ಬ್ಯೂಟಿಷಿಯನ್ ನನ್ನ ಚರ್ಮದ ಬಗ್ಗೆ ಯಾವುದೇ ಪರೀಕ್ಷೆ ಮಾಡಿಸಿಲ್ಲ. ಚಿಕಿತ್ಸೆಯ ನಂತರ, ಆರಂಭದಲ್ಲಿ ಮುಖವು ಚೆನ್ನಾಗಿತ್ತು, ಆದರೆ ಮರುದಿನ ಬೆಳಿಗ್ಗೆ ನನ್ನ ಎಡಗಣ್ಣು ತುಂಬಾ ಊದಿಕೊಂಡಿದೆ" ಎಂದು ಮಹಿಳೆ ಹೇಳಿರುವುದು ವರದಿಯಾಗಿದೆ. ಚರ್ಮದ ಅಲರ್ಜಿ ಪರೀಕ್ಷೆಯನ್ನು ಮಾಡಿಸದೇ ಬ್ಯೂಟಿಷನ್​​ ನೇರವಾಗಿ ಹುಬ್ಬುಗಳಿಗೆ ಬಣ್ಣ ಬಳಿದಿರುವುದೇ ಮಹಿಳೆಯ ಈ ಸ್ಥಿತಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ
ಡೇನಿಯಲ್ ಹಬಾರ್ಡ್
ಅಕ್ಷತಾ ವರ್ಕಾಡಿ
|

Updated on: Apr 22, 2024 | 11:09 AM

Share

ಬ್ಯೂಟಿ ಪಾರ್ಲರ್‌ ಮಹಿಳೆಯ ಅಚ್ಚು ಮೆಚ್ಚಿನ ತಾಣ. ಯಾವುದೇ ವಿಶೇಷ ಕಾರ್ಯಕ್ರಮಗಳಿರಲಿ ಮಹಿಳೆಯರು ತಮ್ಮ ಅಂದ ಚೆಂದವನ್ನು ಹೆಚ್ಚಿಸಲು ಮೊದಲು ಹೋಗುವುದು ಬ್ಯೂಟಿ ಪಾರ್ಲರ್​​ಗೆ. ಸಾಮಾನ್ಯವಾಗಿ ಪಾರ್ಲರ್​​ಗೆ ಹೋದರೆ ಮುಖದ ಅಂದ ಹೆಚ್ಚುತ್ತದೆ. ಆದರೆ ಇಲ್ಲೊಬ್ಬಳು ಯುವತಿ ಪಾರ್ಲರ್​​ಗೆ ಹೋಗಿ ಬಂದ ಮರುದಿನ ಮುಖ ವಿಚಿತ್ರವಾಗಿದ್ದು, ಕಣ್ಣು ಸಂಪೂರ್ಣವಾಗಿ ಊದಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಮಹಿಳೆಯ ಹೆಸರು ಡೇನಿಯಲ್ ಹಬಾರ್ಡ್. ಮಿರರ್ ವರದಿಯ ಪ್ರಕಾರ, ಡೇನಿಯಲ್ ಮಾಲ್ಟಾದಲ್ಲಿ 12 ಪೌಂಡ್‌ಗಳ ಅಂದರೆ ಸುಮಾರು 1237 ರೂಪಾಯಿ ಮೌಲ್ಯದ ಸೌಂದರ್ಯ ಚಿಕಿತ್ಸೆಯನ್ನು ಬುಕ್ ಮಾಡಿದ್ದಳು. “ಬ್ಯೂಟಿಷಿಯನ್ ನನ್ನ ಚರ್ಮದ ಬಗ್ಗೆ ಯಾವುದೇ ಪರೀಕ್ಷೆ ಮಾಡಿಸಿಲ್ಲ. ಆದರೂ ಚಿಕಿತ್ಸೆಯ ನಂತರ, ಆರಂಭದಲ್ಲಿ ಮುಖವು ಚೆನ್ನಾಗಿತ್ತು, ಆದರೆ ಮರುದಿನ ಬೆಳಿಗ್ಗೆ ನನ್ನ ಎಡಗಣ್ಣು ತುಂಬಾ ಊದಿಕೊಂಡಿದೆ” ಎಂದು ಮಹಿಳೆ ಹೇಳಿರುವುದು ವರದಿಯಾಗಿದೆ.

ಇದನ್ನೂ ಓದಿ: Viral Video: ತಮಾಷೆ ನೆಪದಲ್ಲಿ ಮದುವೆ ಮಂಟಪದಲ್ಲಿ ಪುರೋಹಿತರಿಗೆ ಅವಮಾನ ಮಾಡಿದ ಯುವಕರು

ಚರ್ಮದ ಅಲರ್ಜಿ ಪರೀಕ್ಷೆಯನ್ನು ಮಾಡಿಸದೇ ಬ್ಯೂಟಿಷನ್​​ ನೇರವಾಗಿ ಹುಬ್ಬುಗಳಿಗೆ ಬಣ್ಣ ಬಳಿಯಲು ಪ್ರಾರಂಭಿಸಿದ್ದಾಳೆ. ಇದರಿಂದ ಮರುದಿನ ಬೆಳಗ್ಗೆ ಏಳುತ್ತಿದ್ದಂತೆ ಕಣ್ಣು ಸಂಪೂರ್ಣವಾಗಿ ಊದಿಕೊಂಡಿದ್ದು, ಇದೀಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರಾಯಲ್ ಬ್ಲಾಕ್‌ಬರ್ನ್ ಆಸ್ಪತ್ರೆಯಲ್ಲಿ ಅಲರ್ಜಿಯ ಪ್ರತಿಕ್ರಿಯೆಗೆ ಚಿಕಿತ್ಸೆ ನೀಡಲು ಸ್ಟೀರಾಯ್ಡ್‌ಗಳನ್ನು ನೀಡಲಾಗಿದ್ದು, ಸದ್ಯ ಗುಣಮುಖರಾಗುತ್ತಿದ್ದಾಳೆ.  ಇದಾದ ಬಳಿಕ ಮತ್ತೊಮ್ಮೆ ಬ್ಯೂಟಿಪಾರ್ಲರ್‌ಗೆ ತೆರಳಿ ದೂರು ನೀಡಿ ನಷ್ಟದ ಹಣ ವಾಪಸು ಪಡೆಯಲು ಮುಂದಾದರೂ ಬ್ಯೂಟಿಷಿಯನ್ ತನ್ನ ತಪ್ಪಿಗೆ ಪಶ್ಚಾತ್ತಾಪ ಪಡಲಿಲ್ಲ, ಕ್ಷಮೆ ಯಾಚಿಸಲಿಲ್ಲ. ಆದ್ದರಿಂದ ಬ್ಯೂಟಿ ಪಾರ್ಲರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಡೇನಿಯಲ್ ವಕೀಲರನ್ನು ಸಂಪರ್ಕಿಸಿದ್ದಾಳೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ