AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking: ಜಾಸ್ತಿ ಸಾಂಬಾರು ಕೊಡಿಲಿಲ್ಲವೆಂದು ಹೋಟೆಲ್​​ ಸಿಬ್ಬಂದಿಯ ಕೊಲೆ

ಮಂಗಳವಾರ ರಾತ್ರಿ (ಮಾ.12) ಚೆನ್ನೈ ಪಲ್ಲಾವರಂ ಬಳಿಯ ಪಮ್ಮಲ್ ಮುಖ್ಯ ರಸ್ತೆಯಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ವ್ಯಕ್ತಿಗಳಿಬ್ಬರು ಹೆಚ್ಚುವರಿ ಸಾಂಬಾರ್ ಕೇಳಿದ್ದಾರೆ. ಈ ವೇಳೆ ಹೋಟೆಲ್ ಮೇಲ್ವಿಚಾರಕ ಹೆಚ್ಚುವರಿ ಸಾಂಬಾರ್ ಕೊಡಲು ನಿರಾಕರಿಸಿದ್ದಾನೆ. ಅಷ್ಟರಲ್ಲಿ ಜಗಳ ಹೊಡೆದಾಟದ ವರೆಗೆ ಮುಂದುವರಿದಿದ್ದು, ಹೋಟೆಲ್​​ನ ಸೂಪರ್ ವೈಸರ್ ಹತ್ಯೆಯ ಮೂಲಕ ಜಗಳ ಅಂತ್ಯಗೊಂಡಿದೆ.

Shocking: ಜಾಸ್ತಿ ಸಾಂಬಾರು ಕೊಡಿಲಿಲ್ಲವೆಂದು ಹೋಟೆಲ್​​ ಸಿಬ್ಬಂದಿಯ ಕೊಲೆ
ಜಾಸ್ತಿ ಸಾಂಬಾರು ಕೊಡಿಲಿಲ್ಲವೆಂದು ಹೋಟೆಲ್​​ ಸಿಬ್ಬಂದಿಯ ಕೊಲೆImage Credit source: Pinterest
ಅಕ್ಷತಾ ವರ್ಕಾಡಿ
|

Updated on:Mar 14, 2024 | 12:38 PM

Share

ಚೆನ್ನೈ: ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ವಿಷಯಗಳಿಗೆ ಜಗಳವಾಡಿ ಕಡೆಗೆ ಜಗಳ ಕೊಲೆಯಲ್ಲಿ ಅಂತ್ಯಗೊಳ್ಳುವ ಪ್ರಕರಣಗಳು ಹೆಚ್ಚಾಗಿ ಬಿಟ್ಟಿದೆ. ಇದಕ್ಕೊಂದು ಉತ್ತಮ ನಿರ್ದಶನವೆಂಬಂತೆ ಎರಡು ದಿನಗಳ ಹಿಂದೆಯಷ್ಟೇ ಅಮಾನವೀಯ ಘಟನೆ ಚೆನ್ನೈನಲ್ಲಿ ನಡೆದಿದೆ. ಹೆಚ್ಚುವರಿ ಸಾಂಬಾರ್ ನೀಡಲಿಲ್ಲ ಎಂದು ಕೋಪಗೊಂಡ ವ್ಯಕ್ತಿ ಹೋಟೆಲ್ ನ ಸೂಪರ್ ವೈಸರ್ ನನ್ನೇ ಹತ್ಯೆ ಮಾಡಿದ್ದಾನೆ. ಮಂಗಳವಾರ ರಾತ್ರಿ (ಮಾ.12) ಚೆನ್ನೈ ಪಲ್ಲಾವರಂ ಬಳಿಯ ಪಮ್ಮಲ್ ಮುಖ್ಯ ರಸ್ತೆಯಲ್ಲಿರುವ  ರೆಸ್ಟೋರೆಂಟ್‌ನಲ್ಲಿ ವ್ಯಕ್ತಿಯೊಬ್ಬರು ಹೆಚ್ಚುವರಿ ಸಾಂಬಾರ್ ಕೇಳಿದ್ದಾರೆ. ಈ ವೇಳೆ ಹೋಟೆಲ್ ಮೇಲ್ವಿಚಾರಕ ಹೆಚ್ಚುವರಿ ಸಾಂಬಾರ್ ಕೊಡಲು ನಿರಾಕರಿಸಿದ್ದಾನೆ. ಅಷ್ಟರಲ್ಲಿ ಜಗಳ ಹೊಡೆದಾಟದ ವರೆಗೆ ಮುಂದುವರಿದಿದ್ದು, ಜಗಳ ಹೋಟೆಲ್ ಸೂಪರ್ ವೈಸರ್ ಹತ್ಯೆಯ ಮೂಲಕ ಕೊನೆಗೊಂಡಿದೆ.

ಅನಗಾಪುತ್ತೂರಿನ ಪರಿಗಾರದ ಶಂಕರ್ (55) ಮತ್ತು ಅವರ ಮಗ ಅರುಣ್ ಕುಮಾರ್ (30) ಹೋಟೆಲ್ ಸೂಪರ್ ವೈಸರ್ ಅನ್ನು ಹತ್ಯೆ ಮಾಡಿರುವ ಆರೋಪಿಗಳು. ಶಂಕರ್ ಮತ್ತು ಅವರ ಮಗ ಅರುಣ್ ಕುಮಾರ್ ಹೋಟೆಲ್ ಗೆ ಇಡ್ಲಿ ತಿನ್ನಲು ಹೋಗಿದ್ದರು. ಕೆಲ ಹೊತ್ತಿನ ಬಳಿಕ ಹೆಚ್ಚುವರಿ ಸಾಂಬಾರ್ ನೀಡುವಂತೆ ಸಿಬ್ಬಂದಿಯನ್ನು ಕೇಳಿದ್ದಾರೆ. ಈ ವೇಳೆ ಹೋಟೆಲ್​​ ಸಿಬ್ಬಂದಿ ಹೆಚ್ಚುವರಿ ಸಾಂಬಾರು ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಮಾತುಕತೆ ಜಗಳ, ಹೊಡೆದಾಟವಾಗಿ ಮಾರ್ಪಟ್ಟಾಗ ಹೋಟೆಲ್ ಸೂಪರ್ ವೈಸರ್ ಸ್ಥಳಕ್ಕಾಗಮಿಸಿ ಹಲ್ಲೆ ಮಾಡುವುದನ್ನು ನಿಲ್ಲಿಸುವಂತೆ ಭದ್ರತಾ ಸಿಬ್ಬಂದಿಯನ್ನು ಕೇಳಿಕೊಂಡರೂ ಅರುಣ್ ಕುಮಾರ್ ಸೂಪರ್ ವೈಸರ್​​ಗೆ ತಲೆ, ಹಣೆ ಮತ್ತು ಕತ್ತಿನ ಮೇಲೆ ಹಲ್ಲೆ ನಡೆಸಿದ್ದಾನೆ. ಈವೇಳೆ ಪ್ರಜ್ಞಾಹೀನನಾಗಿ ಬಿದ್ದ ಸೂಪರ್ ವೈಸರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ: ಮೂತ್ರ ಪರೀಕ್ಷೆ ಮಾಡುವ ಸಾಮರ್ಥ್ಯ ಹೊಂದಿರುವ ಹೈಟೆಕ್ ಟಾಯ್ಲೆಟ್; ವಿಡಿಯೋ ವೈರಲ್

ಮಾಹಿತಿ ಪಡೆದ ಶಂಕರನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಶಂಕರ್ ಮತ್ತು ಅರುಣ್ ಕುಮಾರ್ ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮೃತ ಸೂಪರ್ ವೈಸರ್​​ ತಂಜಾವೂರು ಮೂಲದವರಾಗಿದ್ದು, ಚೆನ್ನೈಗೆ ಬಂದು ಕಳೆದ ಕೆಲವು ವರ್ಷಗಳಿಂದ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Thu, 14 March 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ