AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಅನುಮತಿ ಇಲ್ಲದೆ ಪತ್ನಿ ತವರಿಗೆ ಹೋಗಿದ್ದಕ್ಕೆ ಪೊಲೀಸ್​ ಠಾಣೆ ಗೇಟ್​ ಬಳಿ ತಲಾಖ್​ ಕೊಟ್ಟ ಪತಿ

ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪತ್ನಿ ತಲಾಖ್ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ತನ್ನ ಅನುಮತಿ ಇಲ್ಲದೆ ತವರಿಗೆ ಹೋಗಿದ್ದಕ್ಕೆ ನವ ವಿವಾಹಿತನೊಬ್ಬ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ತನ್ನ ಅನುಮತಿ ಇಲ್ಲದೆ ಪತ್ನಿ ತವರಿಗೆ ಹೋಗಿದ್ದಕ್ಕೆ ಪೊಲೀಸ್​ ಠಾಣೆ ಗೇಟ್​ ಬಳಿ ತಲಾಖ್​ ಕೊಟ್ಟ ಪತಿ
ತಲಾಖ್Image Credit source: Civilspedia.com
ನಯನಾ ರಾಜೀವ್
|

Updated on: Aug 16, 2024 | 10:15 AM

Share

ತ್ರಿವಳಿ ತಲಾಖ್ ವಿರುದ್ಧ ಕಾನೂನು ಬಂದಿದ್ದರೂ ಕೂಡ ಅದರ ಬಗ್ಗೆ ಜನರು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಸಣ್ಣ ಪುಟ್ಟ ವಿಚಾರಗಳಿಗೆ ತಲಾಖ್ ನೀಡುತ್ತಿರುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪತ್ನಿ ತನಗೆ ಹೇಳದೆ ತವರು ಮನೆಗೆ ಹೋಗಿದ್ದಕ್ಕೆ ನವವಿವಾಹಿತನೊಬ್ಬ ಪೊಲೀಸ್​ ಠಾಣೆ ಬಳಿ ಆಕೆಯನ್ನು ಕರೆದೊಯ್ದು ಗೇಟ್​ ಬಳಿ ತಲಾಖೆ ನೀಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.

ಅಬ್ಬಾಸ್ ಎನ್ನುವ ಯುವಕ ತನ್ನ ಪತ್ನಿ ಫಿಜಾಳಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.ಪೊಲೀಸ್​ ಠಾಣೆಯ ಹೊರಗೆ ನಿಂತು ತಲಾಖೆ ನೀಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ, ವಿಚ್ಛೇದನ ನೀಡುವ ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಜನರು ಒತ್ತಾಯಿಸುತ್ತಿದ್ದಾರೆ.

ಅನುಮತಿಯನ್ನು ಪಡೆಯದೆ ತನ್ನ ಪತ್ನಿ ಫಿಜಾ ತನ್ನ ತಾಯಿಯ ಮನೆಗೆ ಹೋಗಿದ್ದಕ್ಕಾಗಿ ವ್ಯಕ್ತಿ ತನ್ನ ಪತ್ನಿ ಫಿಜಾಗೆ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಮೂಲಗಳು ಹೇಳಿವೆ.

ಮತ್ತಷ್ಟು ಓದಿ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಇದರಿಂದ ಯುವಕ ತನ್ನ ಪತ್ನಿ ಫಿಜಾ ಮೇಲೆ ಕೋಪಗೊಂಡಿದ್ದ. ಮೊದಲಿಗೆ, ತ್ರಿವಳಿ ತಲಾಖ್ ನೀಡಿದ ವ್ಯಕ್ತಿಯ ಮನವೊಲಿಸಲು ಗ್ರಾಮದ ಜನರು ಸಾಕಷ್ಟು ಪ್ರಯತ್ನಗಳನ್ನು ಮಾಡಿದರು. ಅನುಮತಿಯಿಲ್ಲದೆ ಪೋಷಕರ ಮನೆಗೆ ಹೋಗಿದ್ದಕ್ಕೆ ಪತ್ನಿಯ ಮೇಲೆ ಕೋಪಗೊಂಡ ಯುವಕ ಯಾವುದೇ ಭಯವಿಲ್ಲದೆ ಪತ್ನಿಯನ್ನು ಮೊರಾದಾಬಾದ್ ಸಂಭಾಲ್ ರಸ್ತೆಯಲ್ಲಿರುವ ಕೊತ್ವಾಲಿ ಮೈನಾಥರ್ ಗೇಟ್‌ಗೆ ಕರೆದೊಯ್ದು ನಂತರ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾನೆ.

ಹೆಂಡತಿ ಹೆಸರನ್ನು ಹೇಳಿ ತ್ರಿವಳಿ ತಲಾಖ್ ನೀಡಿದ್ದಾನೆ. ಆದರೆ ಇದುವರೆಗೂ ಪೊಲೀಸ್​ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಈ ಕಾರಣಕ್ಕಾಗಿ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ವೈರಲ್ ಆಗಿರುವ ವಿಡಿಯೋವನ್ನು ನೋಡಿ ಅವರಿಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ಅವರಿಬ್ಬರೂ ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿತ್ತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!