AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಅನುಮತಿ ಇಲ್ಲದೆ ಪತ್ನಿ ತವರಿಗೆ ಹೋಗಿದ್ದಕ್ಕೆ ಪೊಲೀಸ್​ ಠಾಣೆ ಗೇಟ್​ ಬಳಿ ತಲಾಖ್​ ಕೊಟ್ಟ ಪತಿ

ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪತ್ನಿ ತಲಾಖ್ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ತನ್ನ ಅನುಮತಿ ಇಲ್ಲದೆ ತವರಿಗೆ ಹೋಗಿದ್ದಕ್ಕೆ ನವ ವಿವಾಹಿತನೊಬ್ಬ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ತನ್ನ ಅನುಮತಿ ಇಲ್ಲದೆ ಪತ್ನಿ ತವರಿಗೆ ಹೋಗಿದ್ದಕ್ಕೆ ಪೊಲೀಸ್​ ಠಾಣೆ ಗೇಟ್​ ಬಳಿ ತಲಾಖ್​ ಕೊಟ್ಟ ಪತಿ
ತಲಾಖ್Image Credit source: Civilspedia.com
ನಯನಾ ರಾಜೀವ್
|

Updated on: Aug 16, 2024 | 10:15 AM

Share

ತ್ರಿವಳಿ ತಲಾಖ್ ವಿರುದ್ಧ ಕಾನೂನು ಬಂದಿದ್ದರೂ ಕೂಡ ಅದರ ಬಗ್ಗೆ ಜನರು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಸಣ್ಣ ಪುಟ್ಟ ವಿಚಾರಗಳಿಗೆ ತಲಾಖ್ ನೀಡುತ್ತಿರುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪತ್ನಿ ತನಗೆ ಹೇಳದೆ ತವರು ಮನೆಗೆ ಹೋಗಿದ್ದಕ್ಕೆ ನವವಿವಾಹಿತನೊಬ್ಬ ಪೊಲೀಸ್​ ಠಾಣೆ ಬಳಿ ಆಕೆಯನ್ನು ಕರೆದೊಯ್ದು ಗೇಟ್​ ಬಳಿ ತಲಾಖೆ ನೀಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.

ಅಬ್ಬಾಸ್ ಎನ್ನುವ ಯುವಕ ತನ್ನ ಪತ್ನಿ ಫಿಜಾಳಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.ಪೊಲೀಸ್​ ಠಾಣೆಯ ಹೊರಗೆ ನಿಂತು ತಲಾಖೆ ನೀಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ, ವಿಚ್ಛೇದನ ನೀಡುವ ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಜನರು ಒತ್ತಾಯಿಸುತ್ತಿದ್ದಾರೆ.

ಅನುಮತಿಯನ್ನು ಪಡೆಯದೆ ತನ್ನ ಪತ್ನಿ ಫಿಜಾ ತನ್ನ ತಾಯಿಯ ಮನೆಗೆ ಹೋಗಿದ್ದಕ್ಕಾಗಿ ವ್ಯಕ್ತಿ ತನ್ನ ಪತ್ನಿ ಫಿಜಾಗೆ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಮೂಲಗಳು ಹೇಳಿವೆ.

ಮತ್ತಷ್ಟು ಓದಿ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಇದರಿಂದ ಯುವಕ ತನ್ನ ಪತ್ನಿ ಫಿಜಾ ಮೇಲೆ ಕೋಪಗೊಂಡಿದ್ದ. ಮೊದಲಿಗೆ, ತ್ರಿವಳಿ ತಲಾಖ್ ನೀಡಿದ ವ್ಯಕ್ತಿಯ ಮನವೊಲಿಸಲು ಗ್ರಾಮದ ಜನರು ಸಾಕಷ್ಟು ಪ್ರಯತ್ನಗಳನ್ನು ಮಾಡಿದರು. ಅನುಮತಿಯಿಲ್ಲದೆ ಪೋಷಕರ ಮನೆಗೆ ಹೋಗಿದ್ದಕ್ಕೆ ಪತ್ನಿಯ ಮೇಲೆ ಕೋಪಗೊಂಡ ಯುವಕ ಯಾವುದೇ ಭಯವಿಲ್ಲದೆ ಪತ್ನಿಯನ್ನು ಮೊರಾದಾಬಾದ್ ಸಂಭಾಲ್ ರಸ್ತೆಯಲ್ಲಿರುವ ಕೊತ್ವಾಲಿ ಮೈನಾಥರ್ ಗೇಟ್‌ಗೆ ಕರೆದೊಯ್ದು ನಂತರ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾನೆ.

ಹೆಂಡತಿ ಹೆಸರನ್ನು ಹೇಳಿ ತ್ರಿವಳಿ ತಲಾಖ್ ನೀಡಿದ್ದಾನೆ. ಆದರೆ ಇದುವರೆಗೂ ಪೊಲೀಸ್​ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಈ ಕಾರಣಕ್ಕಾಗಿ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ವೈರಲ್ ಆಗಿರುವ ವಿಡಿಯೋವನ್ನು ನೋಡಿ ಅವರಿಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ಅವರಿಬ್ಬರೂ ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿತ್ತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು