AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: 18 ದಿನದ ಮಗುವನ್ನು 1.5 ಲಕ್ಷ ರೂ.ಗೆ ಮಾರಾಟ ಮಾಡಿದ ತಂದೆ

ಹೆಣ್ಣು ಮಗುವನ್ನು ಸಾಕಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ತನ್ನ 18 ದಿನದ ಹಸುಗೂಸನ್ನು ಮಾರಾಟ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ವಿಷಯ ಯಾರಿಗೂ ತಿಳಿಯಬಾರದು ಎಂಬ ಕಾರಣಕ್ಕೆ ಪತ್ನಿಗೆ ಬೆದರಿಕೆ ಹಾಕಿ ಮಧ್ಯವರ್ತಿ ಸಹಾಯದಿಂದ 1.50 ಲಕ್ಷ ರೂ.ಗೆ ಮಗುವನ್ನು ಮಾರಾಟ ಮಾಡಿದ್ದಾನೆ.

Hyderabad: 18 ದಿನದ ಮಗುವನ್ನು 1.5 ಲಕ್ಷ ರೂ.ಗೆ ಮಾರಾಟ ಮಾಡಿದ ತಂದೆ
18 ದಿನದ ಮಗುವನ್ನು ಮಾರಾಟ ಮಾಡಿದ ತಂದೆ( ಸಾಂದರ್ಭಿಕ ಚಿತ್ರ)
ಅಕ್ಷತಾ ವರ್ಕಾಡಿ
|

Updated on: Jul 13, 2024 | 12:52 PM

Share

18 ದಿನದ ಹೆಣ್ಣು ಮಗುವನ್ನು ಹೈದರಾಬಾದ್‌ನ ಬಂಡ್ಲಗುಡ ಪೊಲೀಸರು ಶುಕ್ರವಾರ ಕರ್ನಾಟಕದ ಗುಲ್ಬರ್ಗದಿಂದ ರಕ್ಷಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ಈ ಮಗುವನ್ನು ಸ್ವಂತ ತಂದೆ 1.5 ಲಕ್ಷಕ್ಕೆ ಕರ್ನಾಟಕದ ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದರು. ಮಗುವಿನ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಕಟುಕ ತಂದೆ,ಮಧ್ಯವರ್ತಿ ಮತ್ತು ಖರೀದಿದಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಿನಗೂಲಿ ಕಾರ್ಮಿಕ ಮೊಹಮ್ಮದ್ ಆಸಿಫ್ (40) ಮತ್ತು ಅವರ ಪತ್ನಿ ಅಸ್ಮಾ ಬೇಗಂ (36) ಅವರಿಗೆ ಆರು ವರ್ಷದ ಮಗನಿದ್ದಾನೆ.ಈ ದಂಪತಿಗೆ ಇತ್ತೀಚಿಗಷ್ಟೇ ಹೆಣ್ಣು ಮಗುವೊಂದು ಜನಿಸಿದೆ. ಆದರೆ ಆರ್ಥಿಕವಾಗಿ ದುರ್ಬಲವಾಗಿದ್ದರಿಂದ ಹೆಣ್ಣು ಮಗುವನ್ನು ಸಾಕಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮಗುವಿನ ತಂದೆ ಪತ್ನಿಗೆ ಬೆದರಿಕೆ ಹಾಕಿ ಮಗುವನ್ನು ಮಾರಾಟ ಮಾಡಿದ್ದಾನೆ.

ಇದನ್ನೂ ಓದಿ: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ಮಗುವಿನ ಮಾರಾಟಕ್ಕೆ ಮಧ್ಯವರ್ತಿ ಚಾಂದ್ ಸುಲ್ತಾನ್​​ ಎಂಬಾತ ಸಹಾಯ ಮಾಡಿದ್ದಾನೆ. ಸುಲ್ತಾನ್​​ ತನ್ನ ಕುಟುಂಬದ ಸ್ನೇಹಿತ, ಮಿನಲ್ ಸಾಬ್ ಅವರಿಗೆ 1.50 ಲಕ್ಷ ರೂ. ಮಗುವನ್ನು ಮಾರಾಟ ಮಾಡಿದ್ದು, ಅದರಲ್ಲಿ 50 ಸಾವಿರನ್ನು ತನಗೆ ಇಟ್ಟುಕೊಟ್ಟು, ಉಳಿದ 1ಲಕ್ಷವನ್ನು ಮಗುವಿನ ತಂದೆಗೆ ನೀಡಿದ್ದಾನೆ. ಇದೀಗ ಮಗುವಿನ ತಾಯಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮಗುವನ್ನು ಕರ್ನಾಟಕದಿಂದ ರಕ್ಷಿಸಲಾಗಿದೆ. ಪತಿ, ಮಧ್ಯವರ್ತಿ ಮತ್ತು ಖರೀದಿದಾರರು ಈಗ ಪೊಲೀಸ್ ವಶದಲ್ಲಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು