AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಬರ್ತಿದೆ ಅದಕ್ಕೆ ರೈಡ್​ ಕ್ಯಾನ್ಸಲ್​ ಮಾಡಿ; ಉಬರ್ ಡ್ರೈವರ್​ನ ಪ್ರಾಮಾಣಿಕತೆ ಮೆಚ್ಚುತ್ತಿರುವ ನೆಟ್ಟಿಗರು

Uber : ಎಷ್ಟೊತ್ತಾದರೂ ಬಾರದ ಕ್ಯಾಬ್​ ಬಗ್ಗೆ, ವಿನಾಕಾರಣ ಕ್ಯಾನ್ಸಲ್ ಮಾಡುವ ಡ್ರೈವರ್​ಗಳ ಬಗ್ಗೆ ಕೋಪ ಎಂದೂ ಕಡಿಮೆಯಾಗುವುದೇ ಇಲ್ಲ. ಆದರೆ ಈ ಬೆಂಗಳೂರಿನ ಕ್ಯಾಬ್​ ಡ್ರೈವರ್ ಬಗ್ಗೆ ನಿಮಗೆ ಕೋಪ ಖಂಡಿತ ಬಾರದು!

ನಿದ್ದೆ ಬರ್ತಿದೆ ಅದಕ್ಕೆ ರೈಡ್​ ಕ್ಯಾನ್ಸಲ್​ ಮಾಡಿ; ಉಬರ್ ಡ್ರೈವರ್​ನ ಪ್ರಾಮಾಣಿಕತೆ ಮೆಚ್ಚುತ್ತಿರುವ ನೆಟ್ಟಿಗರು
ಡ್ರೈವರ್​ನ ಸಂದೇಶ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jan 28, 2023 | 10:36 AM

Viral News : ನಮ್ಮ ಓಡಾಟಗಳಿಗೆ ಇಷ್ಟೆಲ್ಲ ಅನುಕೂಲಗಳು ಸೃಷ್ಟಿಯಾದರೂ ಪರದಾಡುವುದು ಮಾತ್ರ ತಪ್ಪಿಲ್ಲ. ಓಲಾ, ಉಬರ್​ ಕ್ಯಾಬ್​ಗಳನ್ನು ಕಾಯುವುದು, ಬುಕ್ ಮಾಡುವುದು, ಡ್ರೈವರ್​ಗಳು ಅದನ್ನು ಕಾನ್ಸಲ್​ ಮಾಡುವುದು ಹೀಗೆ ಏನಾದರೂ ಒಂದು ತಕರಾರು ಇದ್ದೇ ಇರುತ್ತದೆ. ಹಾಗಾಗಿ ಇಂಥ ಯಾತನೆಗಳಿಂದ ಮುಕ್ತಿಯೇ ಇಲ್ಲವೆ ಎನ್ನುವಂತೆ ಪರಿಸ್ಥಿತಿಗಳು ನಿರ್ಮಾಣವಾಗುತ್ತಾ ಹೋಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ವಿಷಯ ಏನೆಂದರೆ, ಬೆಂಗಳೂರಿನ ಮಹಿಳೆಯೊಬ್ಬರು ಉಬರ್ ಬುಕ್ ಮಾಡುತ್ತಾರೆ. ಆದರೆ ಡ್ರೈವರ್​, ತನಗೆ ನಿದ್ದೆ ಬಂದಿದೆ ಹಾಗಾಗಿ ಈ ರೈಡ್ ಕ್ಯಾನ್ಸಲ್ ಮಾಡಿ’ ಎಂದು ಮೆಸೇಜ್ ಕಳಿಸುತ್ತಾನೆ. ‘

ಆಶಿ ಎನ್ನುವ ಟ್ವಿಟರ್​ ಖಾತೆದಾರರು ಭರತ್​ ಎಂಬ ಉಬರ್ ಡ್ರೈವರ್ ಚಾಟ್​ನ ಸ್ಕ್ರೀನ್​ ಶಾಟ್​ ಹಂಚಿಕೊಂಡಿದ್ದಾರೆ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದಾನೆ ಅದರಲ್ಲೇನಿದೆ? ಎಂದು ಡ್ರೈವರ್​ನನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಜನವರಿ 26ರಂದು ಈ ಟ್ವೀಟ್​ ಮಾಡಲಾಗಿದೆ. ಈತನಕ 3 ಲಕ್ಷಕ್ಕೂ ಹೆಚ್ಚು ಜನರು ಇದನ್ನು ಓದಿದ್ದಾರೆ. 4,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸುಮಾರು 200 ಜನರು ರೀಟ್ವೀಟ್ ಮಾಡಿ ಚರ್ಚಿಸಿದ್ದಾರೆ.

ಇದನ್ನೂ ಓದಿ : ಇಂಗ್ಲಿಷ್​ ಅಕ್ಷರಗಳಲ್ಲಿ ತಾಜ್​ಮಹಲ್​ ರಚಿಸಿದ ಯುವಕನ ವಿಡಿಯೋ ವೈರಲ್

ಸದ್ಯ ಈ ವ್ಯಕ್ತಿ ಪ್ರಾಮಾಣಿಕನಾಗಿದ್ದಾನೆ. ಹಿಂದೊಮ್ಮೆ ನಾನು ಬೆಂಗಳೂರು ವಿಮಾನ ನಿಲ್ದಾಣದಿಂದ ಕ್ಯಾಬ್​ನಲ್ಲಿ ಮನೆಗೆ ಬರುತ್ತಿರುವಾಗ ಒಬ್ಬ ಡ್ರೈವರ್ ದಾರಿಮಧ್ಯೆ, ಮೇಡಮ್​ ನನಗೆ ನಿದ್ದೆ ಬರುತ್ತಿದೆ, ಇನ್ನು ಗಾಡಿ ಓಡಿಸಲಾಗದು ಎಂದುಬಿಟ್ಟ. ಆಗ ಬೆಳಗಿನ ಜಾವ 3ಗಂಟೆ. ನಾನೋ ಜೆಟ್​​ಲ್ಯಾಗ್​ನಿಂದ ನರಕವನ್ನು ಅನುಭವಿಸುತ್ತಿದ್ದೆ ಎಂದು ಒಬ್ಬರು ಹೇಳಿದ್ದಾರೆ. ​

ಇದನ್ನೂ ಓದಿ : ನಾಯಿಮರಿ ತನ್ನ ಜನನ ಪ್ರಮಾಣ ಪತ್ರಕ್ಕೆ ಕಾಲ್ಬೆರಳು ಒತ್ತಿ ಸಹಿ ಮಾಡಿರುವ ವಿಡಿಯೋ ವೈರಲ್

ಹಿಂದೊಮ್ಮೆ ಆಟೋ ಡ್ರೈವರ್ ಯೂಟ್ಯೂಬ್​ ನೋಡುತ್ತಿದ್ದರು. ಅದಕ್ಕಾಗಿ ನನಗೆ ಅವರು ಡ್ರಾಪ್​ ಕೊಡಲಿಲ್ಲ ಎಂದು ಮತ್ತೊಬ್ಬರು ನೆನಪಿಸಿಕೊಂಡಿದ್ದಾರೆ. ಒಬ್ಬ ಕ್ಯಾಬ್​​ ಡ್ರೈವರ್ ರೈಡ್​ ಸ್ವೀಕರಿಸಿದರು. ಆದರೆ ಐದು ನಿಮಿಷಗಳಾದರೂ ಅವರು ಬರಲೇ ಇಲ್ಲ. ನಂತರ ಫೋನ್ ಮಾಡಿದೆ. ಅದಕ್ಕವರು, ನೀವು ಫೋನ್ ಮಾಡಲೆಂದು ಕಾಯುತ್ತಿದ್ದೆ ಎಂದರು. ಹೀಗೆ ಮಗದೊಬ್ಬರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಈ ಡ್ರೈವರ್ ನಿಜವಾದ ಕಾರಣವನ್ನು ನೇರವಾಗಿ ಹೇಳಿದ್ದಾನಲ್ಲ, ಅವನು ಕರುಣೆ ತೋರಿದ್ದಕ್ಕೆ ಬಹಳ ಖುಷಿಯಾಗಿದೆ! ಎಂದಿದ್ಧಾರೆ ಇನ್ನೂ ಒಬ್ಬರು. ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ