AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಬರ್ತಿದೆ ಅದಕ್ಕೆ ರೈಡ್​ ಕ್ಯಾನ್ಸಲ್​ ಮಾಡಿ; ಉಬರ್ ಡ್ರೈವರ್​ನ ಪ್ರಾಮಾಣಿಕತೆ ಮೆಚ್ಚುತ್ತಿರುವ ನೆಟ್ಟಿಗರು

Uber : ಎಷ್ಟೊತ್ತಾದರೂ ಬಾರದ ಕ್ಯಾಬ್​ ಬಗ್ಗೆ, ವಿನಾಕಾರಣ ಕ್ಯಾನ್ಸಲ್ ಮಾಡುವ ಡ್ರೈವರ್​ಗಳ ಬಗ್ಗೆ ಕೋಪ ಎಂದೂ ಕಡಿಮೆಯಾಗುವುದೇ ಇಲ್ಲ. ಆದರೆ ಈ ಬೆಂಗಳೂರಿನ ಕ್ಯಾಬ್​ ಡ್ರೈವರ್ ಬಗ್ಗೆ ನಿಮಗೆ ಕೋಪ ಖಂಡಿತ ಬಾರದು!

ನಿದ್ದೆ ಬರ್ತಿದೆ ಅದಕ್ಕೆ ರೈಡ್​ ಕ್ಯಾನ್ಸಲ್​ ಮಾಡಿ; ಉಬರ್ ಡ್ರೈವರ್​ನ ಪ್ರಾಮಾಣಿಕತೆ ಮೆಚ್ಚುತ್ತಿರುವ ನೆಟ್ಟಿಗರು
ಡ್ರೈವರ್​ನ ಸಂದೇಶ
TV9 Web
| Edited By: |

Updated on: Jan 28, 2023 | 10:36 AM

Share

Viral News : ನಮ್ಮ ಓಡಾಟಗಳಿಗೆ ಇಷ್ಟೆಲ್ಲ ಅನುಕೂಲಗಳು ಸೃಷ್ಟಿಯಾದರೂ ಪರದಾಡುವುದು ಮಾತ್ರ ತಪ್ಪಿಲ್ಲ. ಓಲಾ, ಉಬರ್​ ಕ್ಯಾಬ್​ಗಳನ್ನು ಕಾಯುವುದು, ಬುಕ್ ಮಾಡುವುದು, ಡ್ರೈವರ್​ಗಳು ಅದನ್ನು ಕಾನ್ಸಲ್​ ಮಾಡುವುದು ಹೀಗೆ ಏನಾದರೂ ಒಂದು ತಕರಾರು ಇದ್ದೇ ಇರುತ್ತದೆ. ಹಾಗಾಗಿ ಇಂಥ ಯಾತನೆಗಳಿಂದ ಮುಕ್ತಿಯೇ ಇಲ್ಲವೆ ಎನ್ನುವಂತೆ ಪರಿಸ್ಥಿತಿಗಳು ನಿರ್ಮಾಣವಾಗುತ್ತಾ ಹೋಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ವಿಷಯ ಏನೆಂದರೆ, ಬೆಂಗಳೂರಿನ ಮಹಿಳೆಯೊಬ್ಬರು ಉಬರ್ ಬುಕ್ ಮಾಡುತ್ತಾರೆ. ಆದರೆ ಡ್ರೈವರ್​, ತನಗೆ ನಿದ್ದೆ ಬಂದಿದೆ ಹಾಗಾಗಿ ಈ ರೈಡ್ ಕ್ಯಾನ್ಸಲ್ ಮಾಡಿ’ ಎಂದು ಮೆಸೇಜ್ ಕಳಿಸುತ್ತಾನೆ. ‘

ಆಶಿ ಎನ್ನುವ ಟ್ವಿಟರ್​ ಖಾತೆದಾರರು ಭರತ್​ ಎಂಬ ಉಬರ್ ಡ್ರೈವರ್ ಚಾಟ್​ನ ಸ್ಕ್ರೀನ್​ ಶಾಟ್​ ಹಂಚಿಕೊಂಡಿದ್ದಾರೆ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದಾನೆ ಅದರಲ್ಲೇನಿದೆ? ಎಂದು ಡ್ರೈವರ್​ನನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಜನವರಿ 26ರಂದು ಈ ಟ್ವೀಟ್​ ಮಾಡಲಾಗಿದೆ. ಈತನಕ 3 ಲಕ್ಷಕ್ಕೂ ಹೆಚ್ಚು ಜನರು ಇದನ್ನು ಓದಿದ್ದಾರೆ. 4,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸುಮಾರು 200 ಜನರು ರೀಟ್ವೀಟ್ ಮಾಡಿ ಚರ್ಚಿಸಿದ್ದಾರೆ.

ಇದನ್ನೂ ಓದಿ : ಇಂಗ್ಲಿಷ್​ ಅಕ್ಷರಗಳಲ್ಲಿ ತಾಜ್​ಮಹಲ್​ ರಚಿಸಿದ ಯುವಕನ ವಿಡಿಯೋ ವೈರಲ್

ಸದ್ಯ ಈ ವ್ಯಕ್ತಿ ಪ್ರಾಮಾಣಿಕನಾಗಿದ್ದಾನೆ. ಹಿಂದೊಮ್ಮೆ ನಾನು ಬೆಂಗಳೂರು ವಿಮಾನ ನಿಲ್ದಾಣದಿಂದ ಕ್ಯಾಬ್​ನಲ್ಲಿ ಮನೆಗೆ ಬರುತ್ತಿರುವಾಗ ಒಬ್ಬ ಡ್ರೈವರ್ ದಾರಿಮಧ್ಯೆ, ಮೇಡಮ್​ ನನಗೆ ನಿದ್ದೆ ಬರುತ್ತಿದೆ, ಇನ್ನು ಗಾಡಿ ಓಡಿಸಲಾಗದು ಎಂದುಬಿಟ್ಟ. ಆಗ ಬೆಳಗಿನ ಜಾವ 3ಗಂಟೆ. ನಾನೋ ಜೆಟ್​​ಲ್ಯಾಗ್​ನಿಂದ ನರಕವನ್ನು ಅನುಭವಿಸುತ್ತಿದ್ದೆ ಎಂದು ಒಬ್ಬರು ಹೇಳಿದ್ದಾರೆ. ​

ಇದನ್ನೂ ಓದಿ : ನಾಯಿಮರಿ ತನ್ನ ಜನನ ಪ್ರಮಾಣ ಪತ್ರಕ್ಕೆ ಕಾಲ್ಬೆರಳು ಒತ್ತಿ ಸಹಿ ಮಾಡಿರುವ ವಿಡಿಯೋ ವೈರಲ್

ಹಿಂದೊಮ್ಮೆ ಆಟೋ ಡ್ರೈವರ್ ಯೂಟ್ಯೂಬ್​ ನೋಡುತ್ತಿದ್ದರು. ಅದಕ್ಕಾಗಿ ನನಗೆ ಅವರು ಡ್ರಾಪ್​ ಕೊಡಲಿಲ್ಲ ಎಂದು ಮತ್ತೊಬ್ಬರು ನೆನಪಿಸಿಕೊಂಡಿದ್ದಾರೆ. ಒಬ್ಬ ಕ್ಯಾಬ್​​ ಡ್ರೈವರ್ ರೈಡ್​ ಸ್ವೀಕರಿಸಿದರು. ಆದರೆ ಐದು ನಿಮಿಷಗಳಾದರೂ ಅವರು ಬರಲೇ ಇಲ್ಲ. ನಂತರ ಫೋನ್ ಮಾಡಿದೆ. ಅದಕ್ಕವರು, ನೀವು ಫೋನ್ ಮಾಡಲೆಂದು ಕಾಯುತ್ತಿದ್ದೆ ಎಂದರು. ಹೀಗೆ ಮಗದೊಬ್ಬರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಈ ಡ್ರೈವರ್ ನಿಜವಾದ ಕಾರಣವನ್ನು ನೇರವಾಗಿ ಹೇಳಿದ್ದಾನಲ್ಲ, ಅವನು ಕರುಣೆ ತೋರಿದ್ದಕ್ಕೆ ಬಹಳ ಖುಷಿಯಾಗಿದೆ! ಎಂದಿದ್ಧಾರೆ ಇನ್ನೂ ಒಬ್ಬರು. ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್