AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಬರ್ತಿದೆ ಅದಕ್ಕೆ ರೈಡ್​ ಕ್ಯಾನ್ಸಲ್​ ಮಾಡಿ; ಉಬರ್ ಡ್ರೈವರ್​ನ ಪ್ರಾಮಾಣಿಕತೆ ಮೆಚ್ಚುತ್ತಿರುವ ನೆಟ್ಟಿಗರು

Uber : ಎಷ್ಟೊತ್ತಾದರೂ ಬಾರದ ಕ್ಯಾಬ್​ ಬಗ್ಗೆ, ವಿನಾಕಾರಣ ಕ್ಯಾನ್ಸಲ್ ಮಾಡುವ ಡ್ರೈವರ್​ಗಳ ಬಗ್ಗೆ ಕೋಪ ಎಂದೂ ಕಡಿಮೆಯಾಗುವುದೇ ಇಲ್ಲ. ಆದರೆ ಈ ಬೆಂಗಳೂರಿನ ಕ್ಯಾಬ್​ ಡ್ರೈವರ್ ಬಗ್ಗೆ ನಿಮಗೆ ಕೋಪ ಖಂಡಿತ ಬಾರದು!

ನಿದ್ದೆ ಬರ್ತಿದೆ ಅದಕ್ಕೆ ರೈಡ್​ ಕ್ಯಾನ್ಸಲ್​ ಮಾಡಿ; ಉಬರ್ ಡ್ರೈವರ್​ನ ಪ್ರಾಮಾಣಿಕತೆ ಮೆಚ್ಚುತ್ತಿರುವ ನೆಟ್ಟಿಗರು
ಡ್ರೈವರ್​ನ ಸಂದೇಶ
TV9 Web
| Edited By: |

Updated on: Jan 28, 2023 | 10:36 AM

Share

Viral News : ನಮ್ಮ ಓಡಾಟಗಳಿಗೆ ಇಷ್ಟೆಲ್ಲ ಅನುಕೂಲಗಳು ಸೃಷ್ಟಿಯಾದರೂ ಪರದಾಡುವುದು ಮಾತ್ರ ತಪ್ಪಿಲ್ಲ. ಓಲಾ, ಉಬರ್​ ಕ್ಯಾಬ್​ಗಳನ್ನು ಕಾಯುವುದು, ಬುಕ್ ಮಾಡುವುದು, ಡ್ರೈವರ್​ಗಳು ಅದನ್ನು ಕಾನ್ಸಲ್​ ಮಾಡುವುದು ಹೀಗೆ ಏನಾದರೂ ಒಂದು ತಕರಾರು ಇದ್ದೇ ಇರುತ್ತದೆ. ಹಾಗಾಗಿ ಇಂಥ ಯಾತನೆಗಳಿಂದ ಮುಕ್ತಿಯೇ ಇಲ್ಲವೆ ಎನ್ನುವಂತೆ ಪರಿಸ್ಥಿತಿಗಳು ನಿರ್ಮಾಣವಾಗುತ್ತಾ ಹೋಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ವಿಷಯ ಏನೆಂದರೆ, ಬೆಂಗಳೂರಿನ ಮಹಿಳೆಯೊಬ್ಬರು ಉಬರ್ ಬುಕ್ ಮಾಡುತ್ತಾರೆ. ಆದರೆ ಡ್ರೈವರ್​, ತನಗೆ ನಿದ್ದೆ ಬಂದಿದೆ ಹಾಗಾಗಿ ಈ ರೈಡ್ ಕ್ಯಾನ್ಸಲ್ ಮಾಡಿ’ ಎಂದು ಮೆಸೇಜ್ ಕಳಿಸುತ್ತಾನೆ. ‘

ಆಶಿ ಎನ್ನುವ ಟ್ವಿಟರ್​ ಖಾತೆದಾರರು ಭರತ್​ ಎಂಬ ಉಬರ್ ಡ್ರೈವರ್ ಚಾಟ್​ನ ಸ್ಕ್ರೀನ್​ ಶಾಟ್​ ಹಂಚಿಕೊಂಡಿದ್ದಾರೆ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದಾನೆ ಅದರಲ್ಲೇನಿದೆ? ಎಂದು ಡ್ರೈವರ್​ನನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಜನವರಿ 26ರಂದು ಈ ಟ್ವೀಟ್​ ಮಾಡಲಾಗಿದೆ. ಈತನಕ 3 ಲಕ್ಷಕ್ಕೂ ಹೆಚ್ಚು ಜನರು ಇದನ್ನು ಓದಿದ್ದಾರೆ. 4,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸುಮಾರು 200 ಜನರು ರೀಟ್ವೀಟ್ ಮಾಡಿ ಚರ್ಚಿಸಿದ್ದಾರೆ.

ಇದನ್ನೂ ಓದಿ : ಇಂಗ್ಲಿಷ್​ ಅಕ್ಷರಗಳಲ್ಲಿ ತಾಜ್​ಮಹಲ್​ ರಚಿಸಿದ ಯುವಕನ ವಿಡಿಯೋ ವೈರಲ್

ಸದ್ಯ ಈ ವ್ಯಕ್ತಿ ಪ್ರಾಮಾಣಿಕನಾಗಿದ್ದಾನೆ. ಹಿಂದೊಮ್ಮೆ ನಾನು ಬೆಂಗಳೂರು ವಿಮಾನ ನಿಲ್ದಾಣದಿಂದ ಕ್ಯಾಬ್​ನಲ್ಲಿ ಮನೆಗೆ ಬರುತ್ತಿರುವಾಗ ಒಬ್ಬ ಡ್ರೈವರ್ ದಾರಿಮಧ್ಯೆ, ಮೇಡಮ್​ ನನಗೆ ನಿದ್ದೆ ಬರುತ್ತಿದೆ, ಇನ್ನು ಗಾಡಿ ಓಡಿಸಲಾಗದು ಎಂದುಬಿಟ್ಟ. ಆಗ ಬೆಳಗಿನ ಜಾವ 3ಗಂಟೆ. ನಾನೋ ಜೆಟ್​​ಲ್ಯಾಗ್​ನಿಂದ ನರಕವನ್ನು ಅನುಭವಿಸುತ್ತಿದ್ದೆ ಎಂದು ಒಬ್ಬರು ಹೇಳಿದ್ದಾರೆ. ​

ಇದನ್ನೂ ಓದಿ : ನಾಯಿಮರಿ ತನ್ನ ಜನನ ಪ್ರಮಾಣ ಪತ್ರಕ್ಕೆ ಕಾಲ್ಬೆರಳು ಒತ್ತಿ ಸಹಿ ಮಾಡಿರುವ ವಿಡಿಯೋ ವೈರಲ್

ಹಿಂದೊಮ್ಮೆ ಆಟೋ ಡ್ರೈವರ್ ಯೂಟ್ಯೂಬ್​ ನೋಡುತ್ತಿದ್ದರು. ಅದಕ್ಕಾಗಿ ನನಗೆ ಅವರು ಡ್ರಾಪ್​ ಕೊಡಲಿಲ್ಲ ಎಂದು ಮತ್ತೊಬ್ಬರು ನೆನಪಿಸಿಕೊಂಡಿದ್ದಾರೆ. ಒಬ್ಬ ಕ್ಯಾಬ್​​ ಡ್ರೈವರ್ ರೈಡ್​ ಸ್ವೀಕರಿಸಿದರು. ಆದರೆ ಐದು ನಿಮಿಷಗಳಾದರೂ ಅವರು ಬರಲೇ ಇಲ್ಲ. ನಂತರ ಫೋನ್ ಮಾಡಿದೆ. ಅದಕ್ಕವರು, ನೀವು ಫೋನ್ ಮಾಡಲೆಂದು ಕಾಯುತ್ತಿದ್ದೆ ಎಂದರು. ಹೀಗೆ ಮಗದೊಬ್ಬರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಈ ಡ್ರೈವರ್ ನಿಜವಾದ ಕಾರಣವನ್ನು ನೇರವಾಗಿ ಹೇಳಿದ್ದಾನಲ್ಲ, ಅವನು ಕರುಣೆ ತೋರಿದ್ದಕ್ಕೆ ಬಹಳ ಖುಷಿಯಾಗಿದೆ! ಎಂದಿದ್ಧಾರೆ ಇನ್ನೂ ಒಬ್ಬರು. ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್