Viral Video: ಆಕಸ್ಮಿಕವಾಗಿ ಕೋಲಿನಿಂದ ವಿದ್ಯುತ್ ಲೈನ್ ಸ್ಪರ್ಶಿಸಿದ ವ್ಯಕ್ತಿ ಸಾವು; ಆಘಾತಕಾರಿ ಘಟನೆಯ ವಿಡಿಯೋ ವೈರಲ್

ಉತ್ತರ ಪ್ರದೇಶ ರಾಜ್ಯದ ಮಹೋಬಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ದೇವಸ್ಥಾನದ ರಥೋತ್ಸವದ ಪ್ರಯುಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಾಗ ಆಕಸ್ಮಿಕವಾಗಿ ಮರದ ಕೋಲಿನಿಂದ ತನ್ನ ಮನೆಯ ಅಂಗಳದ ಮೇಲಿದ್ದ 33 ಕೆವಿ ವಿದ್ಯುತ್ ತಂತಿಯನ್ನು ಮುಟ್ಟಿದ್ದಾನೆ. ಆಗ ಕರೆಂಟ್ ಲೈನ್​ನಿಂದ ಶಾಕ್ ಹೊಡೆದು ಆ ಯುವಕ ಮೃತಪಟ್ಟಿದ್ದಾನೆ.

Viral Video: ಆಕಸ್ಮಿಕವಾಗಿ ಕೋಲಿನಿಂದ ವಿದ್ಯುತ್ ಲೈನ್ ಸ್ಪರ್ಶಿಸಿದ ವ್ಯಕ್ತಿ ಸಾವು; ಆಘಾತಕಾರಿ ಘಟನೆಯ ವಿಡಿಯೋ ವೈರಲ್
ಆಕಸ್ಮಿಕವಾಗಿ ಕೋಲಿನಿಂದ ವಿದ್ಯುತ್ ಲೈನ್ ಸ್ಪರ್ಶಿಸಿದ ವ್ಯಕ್ತಿ ಸಾವು

Updated on: Jul 04, 2024 | 3:49 PM

ನೊಯ್ಡಾ: ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬರು ಮರದ ಕೋಲಿನಿಂದ ತನ್ನ ಮನೆಯ ಮುಂದೆ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬುಧವಾರ ಸಂಜೆ ದೇವಸ್ಥಾನದ ರಥೋತ್ಸವಕ್ಕೆ ಸಿದ್ಧತೆ ನಡೆಸಿದ್ದ ದೇವೇಂದ್ರ ಎಂಬ ವ್ಯಕ್ತಿ ಕೋಲಿನಿಂದ ಆಕಸ್ಮಿಕವಾಗಿ ಲೈನನ್ನು ಮುಟ್ಟಿದ್ದ. ಆತನಿಗೇ ತಿಳಿಯದಂತೆ ಬಿದಿರಿನ ಕೋಲಿಗೆ ಕರೆಂಟ್ ಲೈನ್ ತಾಗಿ ಈ ಘಟನೆ ನಡೆದಿದೆ.

ಇತ್ತೀಚೆಗೆ ಸುರಿದ ಮಳೆಯಿಂದ ತೇವವಾಗಿದ್ದ ಕಂಬವು 33KV ವಿದ್ಯುತ್ ತಂತಿಗೆ ತಾಗುತ್ತಿದ್ದಂತೆ ಆತನಿಗೆ ಕರೆಂಟ್ ಹೊಡೆದಿದೆ. ಎಲ್ಲರೂ ಪೂಜೆಯ ತಯಾರಿಯಲ್ಲಿ ನಿರತರಾಗಿದ್ದರು. ಆ ವೇಳೆ ಈ ಘಟನೆ ನಡೆದಿದೆ. ಎಲ್ಲರೂ ನೋಡನೋಡುತ್ತಿದ್ದಂತೆ ದೇವೇಂದ್ರನಿಗೆ ವಿದ್ಯುತ್ ಸ್ಪರ್ಶವಾಯಿತು. ಇದೆಲ್ಲವೂ ಕಣ್ಮುಚ್ಚಿ ಬಿಡುವಷ್ಟರಲ್ಲಿ ಸಂಭವಿಸಿತು ಎಂದು ಕಂಗಾಲಾದ ಕುಟುಂಬದ ಸದಸ್ಯರು ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಜೈಲಧಿಕಾರಿ ಜೊತೆ ಕೈದಿಯ ಲೈಂಗಿಕ ಕ್ರಿಯೆಯ ವಿಡಿಯೋ ವೈರಲ್

ಕರೆಂಟ್ ಹೊಡೆದಿದ್ದರಿಂದ ಕೆಳಗೆ ಬಿದ್ದಿದ್ದ ದೇವೇಂದ್ರನನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಅವರು ಬರುವಷ್ಟರಲ್ಲಿ ಮಾರ್ಗದಲ್ಲಿಯೇ ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಭೀಕರ ಘಟನೆಯನ್ನು ಸೆರೆ ಹಿಡಿದಿರುವ ಒಂದು ನಿಮಿಷದ ಸಿಸಿಟಿವಿ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ಕೆಲವೇ ಸೆಕೆಂಡುಗಳಲ್ಲಿ ದೇವೇಂದ್ರ ಕುಸಿದು ಬೀಳುವುದನ್ನು ದೃಶ್ಯಾವಳಿ ತೋರಿಸುತ್ತದೆ.

ಇದನ್ನೂ ಓದಿ: Shocking Video: ಪಿಕ್ನಿಕ್ ಹೋದ ಒಂದೇ ಕುಟುಂಬದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್

ನೊಂದ ಕುಟುಂಬವು ಮನೆಗಳ ಬಳಿ ಹಾದುಹೋಗುವ ಬಹಿರಂಗವಾದ ಹೈ-ವೋಲ್ಟೇಜ್ ಲೈನ್‌ನ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ದೇವೇಂದ್ರನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us