AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 17 ದಿನಗಳ ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಕಾದಿತ್ತು ದೊಡ್ಡ ಶಾಕ್!

ಪ್ರವಾಸಕ್ಕೆಂದು ಬೇರೆ ಊರಿಗೆ ಹೋಗಿದ್ದ ಮಹಿಳೆ 17 ದಿನಗಳ ಸುದೀರ್ಘ ಪ್ರಯಾಣದ ನಂತರ ಮನೆಗೆ ಬಂದಳು. ಆದರೆ, ಮನೆಯೊಳಗೆ ಹೋದ ಆ ಮಹಿಳೆಗೆ ಭಾರೀ ಆಘಾತ ಎದುರಾಗಿತ್ತು. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Viral News: 17 ದಿನಗಳ ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಕಾದಿತ್ತು ದೊಡ್ಡ ಶಾಕ್!
ಮೈಕ್ರೋ ಓವನ್​ನಲ್ಲಿ ಕಂಡ ದೃಶ್ಯ
ಸುಷ್ಮಾ ಚಕ್ರೆ
|

Updated on: Jul 24, 2024 | 4:15 PM

Share

17 ದಿನಗಳ ಸುದೀರ್ಘ ಪ್ರವಾಸ ಮುಗಿಸಿ ಮನೆಗೆ ಮರಳಿದ ಮಹಿಳೆಯೊಬ್ಬರಿಗೆ ಭಾರೀ ಶಾಕ್ ಉಂಟಾಗಿದೆ. ತನ್ನ ಮನೆಯ ಅಡುಗೆಮನೆಯಲ್ಲಿ ಮೈಕ್ರೋ ಓವನ್​ನಲ್ಲಿನ ದೃಶ್ಯ ಕಂಡು ಆಕೆ ಬೆಚ್ಚಿಬಿದ್ದಿದ್ದಾಳೆ. ಈ ವೇಳೆ ಆಘಾತದಿಂದ ಸುಧಾರಿಸಿಕೊಂಡು ಆಕೆ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಅಮೆರಿಕದಲ್ಲಿ ಬೆಳಕಿಗೆ ಬಂದಿರುವ ಈ ಘಟನೆ ಸ್ಥಳೀಯವಾಗಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವೈರಲ್ ಆಗಿದೆ.

ಜನಪ್ರಿಯ ಚರ್ಚಾ ವೇದಿಕೆ ರೆಡ್ಡಿಟ್‌ನಲ್ಲಿ ಆ ಮಹಿಳೆ ಉಲ್ಲೇಖಿಸಿರುವ ವಿವರಗಳ ಪ್ರಕಾರ, ಆಕೆ 17 ದಿನಗಳ ಪ್ರವಾಸವನ್ನು ಮುಗಿಸಿ ಇತ್ತೀಚೆಗೆ ಮನೆಗೆ ಮರಳಿದ್ದಾರೆ. ಸ್ವಲ್ಪ ಹೊತ್ತು ಕುಳಿತ ನಂತರ ಅಡುಗೆ ಕೋಣೆಗೆ ಹೋದಳು. ಈ ಪ್ರಕ್ರಿಯೆಯಲ್ಲಿ ಆಕೆ ತನ್ನ ಅಡುಗೆಮನೆಯ ಮೈಕ್ರೊವೇವ್ ಓವನ್‌ನಲ್ಲಿನ ದೃಶ್ಯವನ್ನು ನೋಡಿ ಅವಳು ಆಘಾತಕ್ಕೊಳಗಾದಳು.

ಇದನ್ನೂ ಓದಿ: Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಅಲ್ಲಿ ಆಕೆಗೆ ಮೈಕ್ರೋಓವನ್ ಒಳಗಿನಿಂದ ಮೇಲ್ಭಾಗಕ್ಕೆ ಕೆಲವು ಬಿಳಿ ದಾರಗಳು ನೇತಾಡುತ್ತಿರುವುದು ಕಂಡುಬಂದಿತು. ಮಹಿಳೆಗೆ ಇದೇನೆಂದು ಸ್ವಲ್ಪವೂ ಅರ್ಥವಾಗಲಿಲ್ಲ. ಕ್ಷಣಕಾಲ ಗಾಬರಿಯಾದ ಆಕೆ ಓವನ್​ನ ಬಾಗಿಲು ತೆರೆಯುವ ಧೈರ್ಯ ಮಾಡಲಿಲ್ಲ. ಕೊನೆಗೆ ಅವಳು ಅದರ ಫೋಟೋ ತೆಗೆದುಕೊಂಡು ರೆಡ್ಡಿಟ್​ನಲ್ಲಿ ಪೋಸ್ಟ್ ಮಾಡಿದ್ದಾಳೆ.

ಆ ಫೋಟೋ ನೋಡಿದ ನೆಟಿಜನ್‌ಗಳು ವಿವಿಧ ಕಮೆಂಟ್‌ಗಳನ್ನು ಮಾಡಿದ್ದಾರೆ. ಓವನ್​ ಒಳಗೆ ಕೆಲವು ಶಿಲೀಂಧ್ರಗಳು ಬೆಳೆದಿರಬಹುದು ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಇದು ಸೊಳ್ಳೆಗಳಿಂದ ಉಂಟಾಗಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ