AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಭಾರತದ ಜಾಗತಿಕ ಚಿತ್ರಣವಾಗಬೇಕು’ ಉದ್ಯಮಿ ಆನಂದ ಮಹೀಂದ್ರಾ ಟ್ವೀಟ್

Turkey : ಈಗಷ್ಟೇ ಅಲ್ಲ, ಅನೇಕ ವರ್ಷಗಳಿಂದ ಭಾರತೀಯ ಸೇನೆಯು ಜಗತ್ತಿನಾದ್ಯಂತ ಸಂಭವಿಸಿದ ವಿಕೋಪ ನಿರ್ವಹಣೆಗೆ ಕೈಜೋಡಿಸಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

‘ಇದು ಭಾರತದ ಜಾಗತಿಕ ಚಿತ್ರಣವಾಗಬೇಕು’ ಉದ್ಯಮಿ ಆನಂದ ಮಹೀಂದ್ರಾ ಟ್ವೀಟ್
ಉದ್ಯಮಿ ಆನಂದ ಮಹೀಂದ್ರಾ (ಎಡ). ಟರ್ಕಿಯ ಬಾಲಕಿಯೊಂದಿಗೆ ಡಾ. ಬೀನಾ ತಿವಾರಿ.
TV9 Web
| Edited By: |

Updated on:Feb 15, 2023 | 12:38 PM

Share

Viral News : ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಈಗಾಗಲೇ 40,000ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಉಳಿದವರನ್ನು ಸೂಕ್ತ ಕಾಲಾವಕಾಶದಲ್ಲಿ ರಕ್ಷಿಸುವುದು ವೈದ್ಯಜಗತ್ತಿಗೆ ಮತ್ತು ಸೇನೆಯವರಿಗೆ ಸವಾಲೇ. ಪ್ರಕೃತಿ ವಿಕೋಪಗಳು ಉಂಟಾದಾಗೆಲ್ಲ ಇದೊಂದು ಅಗ್ನಿಪರೀಕ್ಷೆಯೇ. ಆದರೆ ವೈದ್ಯವೃತ್ತಿ ಎನ್ನುವುದು ಎಲ್ಲವನ್ನೂ ಮೀರಿದ್ದು. ಜೀವ ಉಳಿಸುವುದಷ್ಟೇ ಅದಕ್ಕೆ ಗುರಿ.

ಭಾರತೀಯ ಸೇನೆಯ ಮೇಜರ್​ ಬೀನಾ ತಿವಾರಿ ಅವರನ್ನು ಟರ್ಕಿಯ ಇಸ್ಕೆಂಡರುನ್​​ನಲ್ಲಿ ರಕ್ಷಣಾಸೇವೆಗೆ ನೇಮಿಸಲಾಗಿದೆ. ಹೀಗೆ ಈ ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆ ನೀಡುತ್ತಿರುವಾಗ ತೆಗೆದ ಚಿತ್ರ ಇದಾಗಿದೆ. ಈ ಚಿತ್ರವನ್ನು ನೋಡಿ ಪ್ರಭಾವಿತರಾದ ಆನಂದ ಮಹೀಂದ್ರಾ, ‘ ನಾವು ಇಡೀ ಜಗತ್ತಿನಲ್ಲಿಯೇ ದೊಡ್ಡದಾದಂಥ ಸೇನಾವೃಂದವನ್ನು ಹೊಂದಿದ್ದೇವೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ದಶಕಗಳಿಂದಲೂ ಉತ್ತಮ ಅನುಭವವನ್ನು ಇದು ಹೊಂದಿದೆ. ಇದು ಹೀಗೆಯೇ ಸಾಗಬೇಕು. ಇದು ಭಾರತದ ಜಾಗತಿಕ ಚಿತ್ರಣವಾಗಬೇಕು.’  ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ದೇವಿ ಪ್ರತ್ಯಂಗಿರಾಳನ್ನು ಚೆನ್ನೈಗೆ ಕರೆತಂದ ಮೇಕಪ್​ ಕಲಾವಿದ ದೀಪನ್; ವಿಡಿಯೋ ವೈರಲ್

ಅನೇಕರು ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಈ ಟ್ವೀಟ್​ ನೋಡಿದವರ ಸಂಖ್ಯೆ 10 ಲಕ್ಷವನ್ನು ತಲುಪಲಿದೆ. 37,000 ಜನರು ಇದನ್ನು ಇಷ್ಟಪಟ್ಟಿದ್ದಾರೆ. ಸುಮಾರು 2,500 ಜನರು ರೀಟ್ವೀಟ್ ಮಾಡಿದ್ದಾರೆ. ನಿಜಕ್ಕೂ ನಮ್ಮ ಯೋಧರ ಈ ಬೆಂಬಲವನ್ನು ಶ್ಲಾಘಿಸುತ್ತೇನೆ, ಧನ್ಯವಾದ ಎಂದಿದ್ದಾರೆ ಒಬ್ಬರು. ನಮ್ಮ ಯೋಧರು ವೃತ್ತಿಪರರು, ರಕ್ಷಣಾ ಕಾರ್ಯಾಚರಣೆ ಫಲವಾಗಿ ಪ್ರಪಂಚದಾದ್ಯಂತ ಅನೇಕ ಪುರಸ್ಕಾರಗಳನ್ನು ಗಳಿಸಿದ್ದಾರೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನು ಓದಿ : ಮುಂಬೈ ಪೊಲೀಸರೇ, ನೀವು ನನ್ನ ಪ್ರೇಮಿಯಾಗುವಿರಾ?

ನಿಜವಾಗಲೂ ಇದು ಹೆಮ್ಮೆಯ ಕ್ಷಣ. ಬೀನಾ ತಿವಾರಿಯವರಿಗೆ ಧನ್ಯವಾದ ಎಂದಿದ್ದಾರೆ ಅನೇಕರು. ಇದೇನು ಮೊದಲ ಸಲವಲ್ಲ, ಭಾರತೀಯ ಸೇನೆ ಅನೇಕ ವರ್ಷಗಳಿಂದ ಜಗತ್ತಿನ ಅನೇಕ ಪ್ರಕೋಪಗಳ ಸಂದರ್ಭದಲ್ಲಿ ಕೈಜೋಡಿಸಿದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಮಗುವಿನ ಮುಖದ ಮೇಲಿನ ಕಳೆಯೇ ಎಲ್ಲವನ್ನೂ ಹೇಳುತ್ತದೆ, ಸೇನೆಯು ಚಿಕಿತ್ಸೆಯೊಂದಿಗೆ ಸಾಕಷ್ಟು ಪ್ರೀತಿಯನ್ನೂ ಧಾರೆ ಎರೆದಿದೆ ಎಂದು… ಹೀಗೆಂದಿದ್ದಾರೆ ಮಗದೊಬ್ಬರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 12:33 pm, Wed, 15 February 23

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!