AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕಿಡ್ನಿ-ಲಿವರ್ ಮಾರಾಟಕ್ಕಿದೆ ಎಂದು ಪೋಸ್ಟರ್​​ ಹಾಕಿದ ಕೇರಳ ವ್ಯಕ್ತಿ, ಹಿಂದಿನ ಕಾರಣವೇನು?

ಕಿಡ್ನಿ-ಲಿವರ್ ಮಾರಾಟಕ್ಕಿದೆ ಎಂದು ಕೇರಳದ ವ್ಯಕ್ತಿಯೊಬ್ಬರು ಪೋಸ್ಟರ್​​ ಹಾಕಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆರಂಭದಲ್ಲಿ ಇದು ಚೇಷ್ಟೆ ಎಂದು ಜನರು ಭಾವಿಸಿದ್ದರು,

Viral News: ಕಿಡ್ನಿ-ಲಿವರ್ ಮಾರಾಟಕ್ಕಿದೆ ಎಂದು ಪೋಸ್ಟರ್​​ ಹಾಕಿದ ಕೇರಳ ವ್ಯಕ್ತಿ, ಹಿಂದಿನ ಕಾರಣವೇನು?
ಕಿಡ್ನಿ-ಲಿವರ್ ಮಾರಾಟಕ್ಕಿದೆ ಪೋಸ್ಟರ್
Follow us
ನಯನಾ ರಾಜೀವ್
|

Updated on:Mar 13, 2023 | 9:01 AM

ಕಿಡ್ನಿ-ಲಿವರ್ ಮಾರಾಟಕ್ಕಿದೆ ಎಂದು ಕೇರಳದ ವ್ಯಕ್ತಿಯೊಬ್ಬರು ಪೋಸ್ಟರ್​​ ಹಾಕಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆರಂಭದಲ್ಲಿ ಇದು ಚೇಷ್ಟೆ ಎಂದು ಜನರು ಭಾವಿಸಿದ್ದರು, ಜೊತೆಗೆ ಕೆಲವರು ಸರ್ಕಾರವನ್ನು ಗುರಿಯಾಗಿಸಲು ಇಂತಹ ಪೋಸ್ಟರ್ ಹಾಕಿದ್ದಾರೆ ಎಂದು ಭಾವಿಸಿದ್ದರು. ಪೋಸ್ಟರ್‌ನಲ್ಲಿ ಎರಡು ಮೊಬೈಲ್ ಸಂಖ್ಯೆಗಳನ್ನು ಸಹ ನೀಡಲಾಗಿದೆ. ಅದಕ್ಕೆ ಕರೆ ಮಾಡಿದಾಗ ಸುದ್ದಿ ನಿಜವೆಂದು ತಿಳಿದುಬಂದಿತ್ತು.

ಈ ಆಘಾತಕಾರಿ ಪ್ರಕರಣ ತಿರುವನಂತಪುರದ ಮಣಕಾಡು ಪುಥೇನ್ ರಸ್ತೆ ಪ್ರದೇಶದಲ್ಲಿ ನಡೆದಿದೆ. ಸುದ್ದಿ ಸಂಸ್ಥೆ ಐಎಎನ್ಎಸ್ ಪ್ರಕಾರ, ಈ ಪ್ರದೇಶದಲ್ಲಿ ವಾಸಿಸುವ 50 ವರ್ಷದ ಸಂತೋಷ್ ಕುಮಾರ್ ಅವರು ಕಿಡ್ನಿ ಮತ್ತು ಲಿವರ್ ಮಾರಾಟಕ್ಕಿದೆ ಎಂದು ಪೋಸ್ಟರ್​ ಹಾಕಿದ ವ್ಯಕ್ತಿ.

ಮತ್ತಷ್ಟು ಓದಿ: Albino Fawn: ಅಪರೂಪದ ಬಿಳಿ ಬಣ್ಣದ ಜಿಂಕೆ ಪತ್ತೆ, ವೈರಲ್​ ಪೋಟೋ ಇಲ್ಲಿದೆ ನೋಡಿ

ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಗೋಣಿಚೀಲ ಎತ್ತುವ ವೇಳೆ ಬೆನ್ನಿಗೆ ಪೆಟ್ಟು ಬಿದ್ದಿತ್ತು. ನಂತರ ಚಿಕಿತ್ಸೆಗೆ ಒಳಗಾಗಬೇಕಾಯಿತು, ಇರುವ ಹಣವೆಲ್ಲಾ ಖಾಲಿಯಾಗಿತ್ತು, ತಮ್ಮ ಕುಟುಂಬಕ್ಕೆ ಸೇರಿದ ಜಮೀನು ಮನಕೋಡು ಜಂಕ್ಷನ್ ಬಳಿ ಇದ್ದು ಅದರಲ್ಲಿ ಒಂದು ಭಾಗವನ್ನು ಮಾರಾಟ ಮಾಡಲು ಬಯಸಿದ್ದೆ, ಆದರೆ ಜಮೀನಿನ ವಿಚಾರದಲ್ಲಿ ಅಣ್ಣನೊಂದಿಗೆ ಜಗಳವಾಗಿತ್ತು. ಆಸ್ತಿ ತಾಯಿಯ ಹೆಸರಿನಲ್ಲಿದ್ದು, ಆರು ಮಂದಿ ಒಡಹುಟ್ಟಿದವರಿಗೆ ಹಂಚಿಕೆ ಮಾಡಲಾಗಿದೆ ಎಂದು ಸಂತೋಷ್ ಸಹೋದರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ:ವೈದ್ಯರನ್ನೇ ಬೆಚ್ಚಿ ಬೀಳಿಸಿತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯ ಸ್ಕ್ಯಾನಿಂಗ್​ ರಿಪೋರ್ಟ್

ತನ್ನ ಹೆಂಡತಿ ಮಕ್ಕಳಿಗೆ ಟ್ಯೂಷನ್ ಹೇಳುತ್ತಿದ್ದಳು ಆದರೆ ಕೊರೊನಾ ನಂತರ ಅದೂ ನಿಂತುಹೋಯಿತು. ಈಗ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ದೇಹದ ವಿವಿಧ ಭಾಗಗಳನ್ನು ಮಾರಾಟ ಮಾಡದೆ ಬೇರೆ ದಾರಿ ಇಲ್ಲ ಎಂದು ಹೇಳಿದ್ದಾರೆ.

ವ್ಯಕ್ತಿ ಹಾಕಿರುವ ಪೋಸ್ಟರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿತ್ರವನ್ನು ಹಂಚಿಕೊಳ್ಳುವಾಗ ಅನೇಕರು ವ್ಯಕ್ತಿಯ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:01 am, Mon, 13 March 23

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್