AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಎಂಗೇಜ್​ಮೆಂಟ್ ಮಾಡಿಕೊಂಡ ಸಲಿಂಗಿ ವೈದ್ಯರು!

Lesbian Marriage: ಮಹಾರಾಷ್ಟ್ರದ ಮಹಿಳಾ ವೈದ್ಯರಾದ ಪರೋಮಿತಾ ಮುಖರ್ಜಿ ಮತ್ತು ಸುರಭಿ ಮಿತ್ರ ಡಿಸೆಂಬರ್ 29ರಂದು ನಾಗ್ಪುರದ ಹೊರವಲಯದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Viral News: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಎಂಗೇಜ್​ಮೆಂಟ್ ಮಾಡಿಕೊಂಡ ಸಲಿಂಗಿ ವೈದ್ಯರು!
ಮದುವೆಯಾಗಲು ಸಜ್ಜಾದ ಸಲಿಂಗಿಗಳು
TV9 Web
| Edited By: |

Updated on: Jan 06, 2022 | 7:04 PM

Share

ನಾಗ್ಪುರ: ‘ಪ್ರೀತಿ ಕುರುಡು’ ಎಂಬ ಮಾತಿದೆ. ಪ್ರೀತಿ ಯಾರ ಮೇಲೆ, ಯಾವಾಗ, ಹೇಗೆ ಹುಟ್ಟುತ್ತದೋ ಹೇಳಲು ಸಾಧ್ಯವಿಲ್ಲ. ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರು ಮಹಿಳಾ ವೈದ್ಯರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಳೆದ ವಾರ ಉಂಗುರ ಬದಲಾಯಿಸಿಕೊಂಡಿರುವ ಈ ಸಲಿಂಗಿಗಳು ಸದ್ಯದಲ್ಲೇ ಗೋವಾದಲ್ಲಿ ಅದ್ದೂರಿಯಾಗಿ ಮದುವೆಯಾಗಲಿದ್ದಾರೆ. ಒಟ್ಟಿಗೇ ವೈದ್ಯರಾಗಿ ಕೆಲಸ ಮಾಡುತ್ತಿದ್ದ ಈ ಮಹಿಳೆಯರು ಜೀವನಪೂರ್ತಿ ಒಟ್ಟಿಗೇ ದಂಪತಿಯಾಗಿ ಬದುಕಲು ನಿರ್ಧರಿಸಿದ್ದಾರೆ. ಈ ಮೂಲಕ ಸಂಪ್ರದಾಯಕ್ಕೆ ಸೆಡ್ಡು ಹೊಡೆದಿರುವ ಈ ಮಹಿಳೆಯರಿಬ್ಬರು ಮದುವೆಯಾಗಿ ಹೊಸ ಜೀವನ ನಡೆಸಲು ಸಜ್ಜಾಗಿದ್ದಾರೆ.

ಮಹಾರಾಷ್ಟ್ರದ ಮಹಿಳಾ ವೈದ್ಯರಾದ ಪರೋಮಿತಾ ಮುಖರ್ಜಿ ಮತ್ತು ಸುರಭಿ ಮಿತ್ರ ಡಿಸೆಂಬರ್ 29ರಂದು ನಾಗ್ಪುರದ ಹೊರವಲಯದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಇಬ್ಬರು ಬೆಂಗಾಲಿ ಮಹಿಳೆಯರು ನೃತ್ಯ, ಸಂಗೀತ, ಡಿಸೈನರ್ ಡ್ರೆಸ್ ಮತ್ತು ಔತಣದೊಂದಿಗೆ ಈ ವಿಶೇಷವಾದ ದಿನವನ್ನು ಆಚರಿಸಿದರು.

“ನಾವು ಈ ಸಂಬಂಧವನ್ನು ಜೀವಮಾನದುದ್ದಕ್ಕೂ ಕಾಪಾಡಿಕೊಳ್ಳುತ್ತೇವೆ. ನಾವು ನಮ್ಮ ಮದುವೆಯನ್ನು ಗೋವಾದಲ್ಲಿ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ” ಎಂದು ಪರೋಮಿತಾ ಮುಖರ್ಜಿ ಎಎನ್‌ಐಗೆ ತಿಳಿಸಿದ್ದಾರೆ.

ನಾನು ಪುರುಷರಿಗಿಂತಲೂ ಮಹಿಳೆಯರ ಬಗ್ಗೆಯೇ ಆಕರ್ಷಿತನಾಗಿದ್ದೆ ಎಂದು 2013ರಿಂದ ನನ್ನ ತಂದೆಗೆ ತಿಳಿದಿತ್ತು. ನಾನು ಇತ್ತೀಚೆಗೆ ನನ್ನ ತಾಯಿಗೆ ಹೇಳಿದಾಗ ಅವರು ಆಘಾತಕ್ಕೊಳಗಾದರು. ಆದರೆ ನಂತರ ಅವರಿಗೆ ನಾನು ಸಂತೋಷವಾಗಿರುವುದಏ ಮುಖ್ಯವಾಗಿದ್ದರಿಂದ ಅವರು ಒಪ್ಪಿಕೊಂಡರು ಎಂದು ಹೇಳಿದ್ದಾರೆ.

“ನನ್ನ ಲೈಂಗಿಕ ದೃಷ್ಟಿಕೋನಕ್ಕೆ ನನ್ನ ಕುಟುಂಬದಿಂದ ಯಾವುದೇ ವಿರೋಧವಿರಲಿಲ್ಲ. ವಾಸ್ತವವಾಗಿ, ನಾನು ನನ್ನ ಹೆತ್ತವರಿಗೆ ಈ ಬಗ್ಗೆ ಹೇಳಿದಾಗ ಅವರು ಸಂತೋಷಪಟ್ಟರು. ನಾನು ಮನೋವೈದ್ಯಳಾಗಿದ್ದೇನೆ. ನನ್ನ ರೀತಿ ಮನಸ್ಥಿತಿ ಹೊಂದಿರುವವರು ಅನಿವಾರ್ಯವಾಗಿ ತಮಗಿಷ್ಟವಿಲ್ಲದ ಜೀವನ ನಡೆಸುತ್ತಿರುವುದನ್ನು ನಾನು ನೋಡಿದ್ದೇನೆ. ಆದರೆ, ನನಗೆ ನನ್ನ ಮನಸಿಗೆ ವಿರುದ್ಧವಾಗಿ ಬದುಕಲು ಇಷ್ಟವಿರಲಿಲ್ಲ. ಈಗ ನಾನು ನನ್ನ ಸಂಗಾತಿಯನ್ನು ಕಂಡುಕೊಂಡಿದ್ದೇನೆ ಎಂದು ಸುರಭಿ ಮಿತ್ರ ಹೇಳಿದ್ದಾರೆ.

ಇದನ್ನೂ ಓದಿ: Viral News: ಮದುವೆಯಾಗಿ 11 ವರ್ಷ ಕಾದರೂ ಮೊದಲ ರಾತ್ರಿಗೆ ಸಿಗಲೇ ಇಲ್ಲ ಮುಹೂರ್ತ; ಆಮೇಲೇನಾಯ್ತು?

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ