AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

ಹುಡುಕಾಟ ನಡೆಸುತ್ತಿದ್ದ ಗುಂಪಿನವರು ಕಾಡಿನಲ್ಲಿ ಬೇಹನ್ ಮುಟ್ಲು ಎಂದು ಆತನ ಹೆಸರನ್ನು ಜೋರಾಗಿ ಕೂಗಿದಾಗ ನಾನಿಲ್ಲೇ ಇದ್ದೇನೆ ಎಂದು ಈತ ಹೇಳಿದ್ದಾರೆ. ಆಗ ನಾಪತ್ತೆಯಾಗಿದ್ದು ತಾನೇ ಎಂದು ಆತನಿಗೆ ಗೊತ್ತಾಗಿದೆ!

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!
ಕಾಡಿನಲ್ಲಿ ಹುಡುಕಾಟದ ದೃಶ್ಯ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 01, 2021 | 8:16 PM

Share

ಕುಡಿದ ಅಮಲಿನಲ್ಲಿ ಬಹುತೇಕರಿಗೆ ತಾವು ಏನು ಮಾಡುತ್ತಿದ್ದೇವೆ ಎಂಬುದೇ ಗೊತ್ತಿರುವುದಿಲ್ಲ. ಅದರಂತೆ ಇಲ್ಲೊಬ್ಬ ಕುಡುಕ ತನ್ನ ಜೊತೆಗಿದ್ದವರೆಲ್ಲರೂ ತನ್ನನ್ನೇ ಹುಡುಕುತ್ತಿದ್ದಾರೆ ಎಂಬುದೇ ಗೊತ್ತಿಲ್ಲದೆ ಅವರೊಂದಿಗೆ ಸೇರಿ ತಾನೂ ಹುಡುಕಾಟ ನಡೆಸಿದ್ದಾರೆ. ಈ ರೀತಿಯ ಘಟನೆ ಟರ್ಕಿಯಲ್ಲಿ ನಡೆದಿದೆ. ಟರ್ಕಿಷ್ ವ್ಯಕ್ತಿಯೊಬ್ಬ ತನ್ನ ಗೆಳೆಯರ ಜೊತೆ ಕಾಡಿನಲ್ಲಿ ಪಾರ್ಟಿ ಮಾಡಲು ಹೋಗಿದ್ದರು. ಆದರೆ, ಬೆಳಗಿನ ಜಾವವಾದರೂ ಆತ ಬರದೇ ಇದ್ದಾಗ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಆ ಕಾಡಿನ ಬಳಿಯಿದ್ದ ಸ್ಥಳೀಯರಿಗೆ ಕಾಣೆಯಾಗಿದ್ದವನ ಮಾಹಿತಿ ನೀಡಿ ಹುಡುಕಲು ಹೇಳಿದ್ದರು. ಅದರಂತೆ ಹುಡುಕಲು ಹೋದಾಗ ಅಲ್ಲಿ ಕುಡಿಯುತ್ತಾ ಕುಳಿತಿದ್ದವರು ಕೂಡ ಸ್ಥಳೀಯರೊಂದಿಗೆ ಸೇರಿ ಹುಡುಕಲು ತೊಡಗಿದ್ದರು. ಆ ಗುಂಪಿನಲ್ಲೇ ಸೇರಿಕೊಂಡ ಆ ವ್ಯಕ್ತಿ ಅವರೆಲ್ಲರೂ ತನ್ನನ್ನೇ ಹುಡುಕುತ್ತಿದ್ದಾರೆಂದು ಗೊತ್ತಾಗದೆ ತಾನೂ ಅವರೊಂದಿಗೆ ಹುಡುಕಾಟ ಶುರು ಮಾಡಿದ್ದರು.

50 ವರ್ಷದ ಟರ್ಕಿಷ್ ವ್ಯಕ್ತಿ ಗೆಳೆಯರ ಜೊತೆ ಹೊರಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ರಾತ್ರಿಯಿಂದ ಮನೆಯವರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಆ ದಟ್ಟ ಕಾಡಿನಲ್ಲೇ ಆತ ಸಿಲುಕಿರಬಹುದು ಎಂದು ಅವರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆ ಕಾಡಿನ ಬಳಿಯಿದ್ದ ಸ್ವಯಂಸೇವಕರು ಹಾಗೂ ಸ್ಥಳೀಯರು ಆತನಿಗಾಗಿ ಹುಡುಕಾಟ ನಡೆಸಿದ್ದರು. ವಿಷಯವೇನೆಂದು ತಿಳಿಯದೆ ಆ ಟರ್ಕಿಷ್ ವ್ಯಕ್ತಿ ಕೂಡ ಅವರೊಂದಿಗೆ ಕಾಡಿನಲ್ಲಿ ಅಲೆದು ಹುಡುಕಾಟ ನಡೆಸಿದ್ದಾರೆ. ಆ ಗುಂಪಿನವರಿಗೂ ತಾವು ಹುಡುಕುತ್ತಿರುವ ವ್ಯಕ್ತಿ ತಮ್ಮ ಜೊತೆಗೇ ಇದ್ದಾನೆಂದು ಗೊತ್ತಾಗಿಲ್ಲ.

ಕೊನೆಗೆ ಆ ಗುಂಪಿನವರು ಕಾಡಿನಲ್ಲಿ ಬೇಹನ್ ಮುಟ್ಲು ಎಂದು ಆತನ ಹೆಸರನ್ನು ಜೋರಾಗಿ ಕೂಗಿದಾಗ ನಾನಿಲ್ಲೇ ಇದ್ದೇನೆ ಎಂದು ಈತ ಹೇಳಿದ್ದಾರೆ. ಅದನ್ನು ಕೇಳಿ ಆ ಗುಂಪಿನವರು ಕೋಪಗೊಂಡು ಇಷ್ಟು ಹೊತ್ತು ಯಾಕೆ ನೀನೇ ಅವನು ಎಂದು ಹೇಳಲಿಲ್ಲ ಎಂದು ಗಲಾಟೆ ಮಾಡಿದ್ದಾರೆ. ನೀವು ಯಾರನ್ನು ಹುಡುಕುತ್ತಿದ್ದೀರೆಂದು ನನಗೆ ಗೊತ್ತಿರಲಿಲ್ಲ ಎಂದು ಆತ ಹೇಳಿದ್ದಾರೆ. ಬಳಿಕ ಆತನನ್ನು ಅಲ್ಲಿಂದ ಕರೆದುಕೊಂಡು ಹೋಗಿ ಮನೆಯವರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ: Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Published On - 8:15 pm, Fri, 1 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ