AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

ಹುಡುಕಾಟ ನಡೆಸುತ್ತಿದ್ದ ಗುಂಪಿನವರು ಕಾಡಿನಲ್ಲಿ ಬೇಹನ್ ಮುಟ್ಲು ಎಂದು ಆತನ ಹೆಸರನ್ನು ಜೋರಾಗಿ ಕೂಗಿದಾಗ ನಾನಿಲ್ಲೇ ಇದ್ದೇನೆ ಎಂದು ಈತ ಹೇಳಿದ್ದಾರೆ. ಆಗ ನಾಪತ್ತೆಯಾಗಿದ್ದು ತಾನೇ ಎಂದು ಆತನಿಗೆ ಗೊತ್ತಾಗಿದೆ!

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!
ಕಾಡಿನಲ್ಲಿ ಹುಡುಕಾಟದ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 01, 2021 | 8:16 PM

ಕುಡಿದ ಅಮಲಿನಲ್ಲಿ ಬಹುತೇಕರಿಗೆ ತಾವು ಏನು ಮಾಡುತ್ತಿದ್ದೇವೆ ಎಂಬುದೇ ಗೊತ್ತಿರುವುದಿಲ್ಲ. ಅದರಂತೆ ಇಲ್ಲೊಬ್ಬ ಕುಡುಕ ತನ್ನ ಜೊತೆಗಿದ್ದವರೆಲ್ಲರೂ ತನ್ನನ್ನೇ ಹುಡುಕುತ್ತಿದ್ದಾರೆ ಎಂಬುದೇ ಗೊತ್ತಿಲ್ಲದೆ ಅವರೊಂದಿಗೆ ಸೇರಿ ತಾನೂ ಹುಡುಕಾಟ ನಡೆಸಿದ್ದಾರೆ. ಈ ರೀತಿಯ ಘಟನೆ ಟರ್ಕಿಯಲ್ಲಿ ನಡೆದಿದೆ. ಟರ್ಕಿಷ್ ವ್ಯಕ್ತಿಯೊಬ್ಬ ತನ್ನ ಗೆಳೆಯರ ಜೊತೆ ಕಾಡಿನಲ್ಲಿ ಪಾರ್ಟಿ ಮಾಡಲು ಹೋಗಿದ್ದರು. ಆದರೆ, ಬೆಳಗಿನ ಜಾವವಾದರೂ ಆತ ಬರದೇ ಇದ್ದಾಗ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಆ ಕಾಡಿನ ಬಳಿಯಿದ್ದ ಸ್ಥಳೀಯರಿಗೆ ಕಾಣೆಯಾಗಿದ್ದವನ ಮಾಹಿತಿ ನೀಡಿ ಹುಡುಕಲು ಹೇಳಿದ್ದರು. ಅದರಂತೆ ಹುಡುಕಲು ಹೋದಾಗ ಅಲ್ಲಿ ಕುಡಿಯುತ್ತಾ ಕುಳಿತಿದ್ದವರು ಕೂಡ ಸ್ಥಳೀಯರೊಂದಿಗೆ ಸೇರಿ ಹುಡುಕಲು ತೊಡಗಿದ್ದರು. ಆ ಗುಂಪಿನಲ್ಲೇ ಸೇರಿಕೊಂಡ ಆ ವ್ಯಕ್ತಿ ಅವರೆಲ್ಲರೂ ತನ್ನನ್ನೇ ಹುಡುಕುತ್ತಿದ್ದಾರೆಂದು ಗೊತ್ತಾಗದೆ ತಾನೂ ಅವರೊಂದಿಗೆ ಹುಡುಕಾಟ ಶುರು ಮಾಡಿದ್ದರು.

50 ವರ್ಷದ ಟರ್ಕಿಷ್ ವ್ಯಕ್ತಿ ಗೆಳೆಯರ ಜೊತೆ ಹೊರಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ರಾತ್ರಿಯಿಂದ ಮನೆಯವರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಆ ದಟ್ಟ ಕಾಡಿನಲ್ಲೇ ಆತ ಸಿಲುಕಿರಬಹುದು ಎಂದು ಅವರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆ ಕಾಡಿನ ಬಳಿಯಿದ್ದ ಸ್ವಯಂಸೇವಕರು ಹಾಗೂ ಸ್ಥಳೀಯರು ಆತನಿಗಾಗಿ ಹುಡುಕಾಟ ನಡೆಸಿದ್ದರು. ವಿಷಯವೇನೆಂದು ತಿಳಿಯದೆ ಆ ಟರ್ಕಿಷ್ ವ್ಯಕ್ತಿ ಕೂಡ ಅವರೊಂದಿಗೆ ಕಾಡಿನಲ್ಲಿ ಅಲೆದು ಹುಡುಕಾಟ ನಡೆಸಿದ್ದಾರೆ. ಆ ಗುಂಪಿನವರಿಗೂ ತಾವು ಹುಡುಕುತ್ತಿರುವ ವ್ಯಕ್ತಿ ತಮ್ಮ ಜೊತೆಗೇ ಇದ್ದಾನೆಂದು ಗೊತ್ತಾಗಿಲ್ಲ.

ಕೊನೆಗೆ ಆ ಗುಂಪಿನವರು ಕಾಡಿನಲ್ಲಿ ಬೇಹನ್ ಮುಟ್ಲು ಎಂದು ಆತನ ಹೆಸರನ್ನು ಜೋರಾಗಿ ಕೂಗಿದಾಗ ನಾನಿಲ್ಲೇ ಇದ್ದೇನೆ ಎಂದು ಈತ ಹೇಳಿದ್ದಾರೆ. ಅದನ್ನು ಕೇಳಿ ಆ ಗುಂಪಿನವರು ಕೋಪಗೊಂಡು ಇಷ್ಟು ಹೊತ್ತು ಯಾಕೆ ನೀನೇ ಅವನು ಎಂದು ಹೇಳಲಿಲ್ಲ ಎಂದು ಗಲಾಟೆ ಮಾಡಿದ್ದಾರೆ. ನೀವು ಯಾರನ್ನು ಹುಡುಕುತ್ತಿದ್ದೀರೆಂದು ನನಗೆ ಗೊತ್ತಿರಲಿಲ್ಲ ಎಂದು ಆತ ಹೇಳಿದ್ದಾರೆ. ಬಳಿಕ ಆತನನ್ನು ಅಲ್ಲಿಂದ ಕರೆದುಕೊಂಡು ಹೋಗಿ ಮನೆಯವರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ: Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Published On - 8:15 pm, Fri, 1 October 21

ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ