Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

ಹುಡುಕಾಟ ನಡೆಸುತ್ತಿದ್ದ ಗುಂಪಿನವರು ಕಾಡಿನಲ್ಲಿ ಬೇಹನ್ ಮುಟ್ಲು ಎಂದು ಆತನ ಹೆಸರನ್ನು ಜೋರಾಗಿ ಕೂಗಿದಾಗ ನಾನಿಲ್ಲೇ ಇದ್ದೇನೆ ಎಂದು ಈತ ಹೇಳಿದ್ದಾರೆ. ಆಗ ನಾಪತ್ತೆಯಾಗಿದ್ದು ತಾನೇ ಎಂದು ಆತನಿಗೆ ಗೊತ್ತಾಗಿದೆ!

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!
ಕಾಡಿನಲ್ಲಿ ಹುಡುಕಾಟದ ದೃಶ್ಯ
Follow us
| Updated By: ಸುಷ್ಮಾ ಚಕ್ರೆ

Updated on:Oct 01, 2021 | 8:16 PM

ಕುಡಿದ ಅಮಲಿನಲ್ಲಿ ಬಹುತೇಕರಿಗೆ ತಾವು ಏನು ಮಾಡುತ್ತಿದ್ದೇವೆ ಎಂಬುದೇ ಗೊತ್ತಿರುವುದಿಲ್ಲ. ಅದರಂತೆ ಇಲ್ಲೊಬ್ಬ ಕುಡುಕ ತನ್ನ ಜೊತೆಗಿದ್ದವರೆಲ್ಲರೂ ತನ್ನನ್ನೇ ಹುಡುಕುತ್ತಿದ್ದಾರೆ ಎಂಬುದೇ ಗೊತ್ತಿಲ್ಲದೆ ಅವರೊಂದಿಗೆ ಸೇರಿ ತಾನೂ ಹುಡುಕಾಟ ನಡೆಸಿದ್ದಾರೆ. ಈ ರೀತಿಯ ಘಟನೆ ಟರ್ಕಿಯಲ್ಲಿ ನಡೆದಿದೆ. ಟರ್ಕಿಷ್ ವ್ಯಕ್ತಿಯೊಬ್ಬ ತನ್ನ ಗೆಳೆಯರ ಜೊತೆ ಕಾಡಿನಲ್ಲಿ ಪಾರ್ಟಿ ಮಾಡಲು ಹೋಗಿದ್ದರು. ಆದರೆ, ಬೆಳಗಿನ ಜಾವವಾದರೂ ಆತ ಬರದೇ ಇದ್ದಾಗ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಆ ಕಾಡಿನ ಬಳಿಯಿದ್ದ ಸ್ಥಳೀಯರಿಗೆ ಕಾಣೆಯಾಗಿದ್ದವನ ಮಾಹಿತಿ ನೀಡಿ ಹುಡುಕಲು ಹೇಳಿದ್ದರು. ಅದರಂತೆ ಹುಡುಕಲು ಹೋದಾಗ ಅಲ್ಲಿ ಕುಡಿಯುತ್ತಾ ಕುಳಿತಿದ್ದವರು ಕೂಡ ಸ್ಥಳೀಯರೊಂದಿಗೆ ಸೇರಿ ಹುಡುಕಲು ತೊಡಗಿದ್ದರು. ಆ ಗುಂಪಿನಲ್ಲೇ ಸೇರಿಕೊಂಡ ಆ ವ್ಯಕ್ತಿ ಅವರೆಲ್ಲರೂ ತನ್ನನ್ನೇ ಹುಡುಕುತ್ತಿದ್ದಾರೆಂದು ಗೊತ್ತಾಗದೆ ತಾನೂ ಅವರೊಂದಿಗೆ ಹುಡುಕಾಟ ಶುರು ಮಾಡಿದ್ದರು.

50 ವರ್ಷದ ಟರ್ಕಿಷ್ ವ್ಯಕ್ತಿ ಗೆಳೆಯರ ಜೊತೆ ಹೊರಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ರಾತ್ರಿಯಿಂದ ಮನೆಯವರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಆ ದಟ್ಟ ಕಾಡಿನಲ್ಲೇ ಆತ ಸಿಲುಕಿರಬಹುದು ಎಂದು ಅವರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆ ಕಾಡಿನ ಬಳಿಯಿದ್ದ ಸ್ವಯಂಸೇವಕರು ಹಾಗೂ ಸ್ಥಳೀಯರು ಆತನಿಗಾಗಿ ಹುಡುಕಾಟ ನಡೆಸಿದ್ದರು. ವಿಷಯವೇನೆಂದು ತಿಳಿಯದೆ ಆ ಟರ್ಕಿಷ್ ವ್ಯಕ್ತಿ ಕೂಡ ಅವರೊಂದಿಗೆ ಕಾಡಿನಲ್ಲಿ ಅಲೆದು ಹುಡುಕಾಟ ನಡೆಸಿದ್ದಾರೆ. ಆ ಗುಂಪಿನವರಿಗೂ ತಾವು ಹುಡುಕುತ್ತಿರುವ ವ್ಯಕ್ತಿ ತಮ್ಮ ಜೊತೆಗೇ ಇದ್ದಾನೆಂದು ಗೊತ್ತಾಗಿಲ್ಲ.

ಕೊನೆಗೆ ಆ ಗುಂಪಿನವರು ಕಾಡಿನಲ್ಲಿ ಬೇಹನ್ ಮುಟ್ಲು ಎಂದು ಆತನ ಹೆಸರನ್ನು ಜೋರಾಗಿ ಕೂಗಿದಾಗ ನಾನಿಲ್ಲೇ ಇದ್ದೇನೆ ಎಂದು ಈತ ಹೇಳಿದ್ದಾರೆ. ಅದನ್ನು ಕೇಳಿ ಆ ಗುಂಪಿನವರು ಕೋಪಗೊಂಡು ಇಷ್ಟು ಹೊತ್ತು ಯಾಕೆ ನೀನೇ ಅವನು ಎಂದು ಹೇಳಲಿಲ್ಲ ಎಂದು ಗಲಾಟೆ ಮಾಡಿದ್ದಾರೆ. ನೀವು ಯಾರನ್ನು ಹುಡುಕುತ್ತಿದ್ದೀರೆಂದು ನನಗೆ ಗೊತ್ತಿರಲಿಲ್ಲ ಎಂದು ಆತ ಹೇಳಿದ್ದಾರೆ. ಬಳಿಕ ಆತನನ್ನು ಅಲ್ಲಿಂದ ಕರೆದುಕೊಂಡು ಹೋಗಿ ಮನೆಯವರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ: Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Published On - 8:15 pm, Fri, 1 October 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ