AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಅದ್ದೂರಿಯಾಗಿ ಕರುವಿನ ನಾಮಕರಣ ಮಾಡಿ ಸಂಭ್ರಮಿಸಿದ ಕುಟುಂಬ

ಕರೀಂನಗರದ ಗೌರಿಶೆಟ್ಟಿ ಮುನೀಂದರ್ ಮತ್ತು ಅನುರಾಧ ದಂಪತಿಗೆ ಹಸುಗಳೆಂದರೆ ಬಹಳ ಪ್ರೀತಿ. ಇತ್ತೀಚೆಗೆ ಅವರು ಸಾಕಿದ್ದ ಹಸು ಕರುವಿಗೆ ಜನ್ಮ ನೀಡಿದೆ. ಇದೀಗ ಕರು ಹುಟ್ಟಿದ 21 ದಿನಗಳ ನಂತರ ಅದ್ಧೂರಿಯಾಗಿ ನಾಮಕರಣ ಕಾರ್ಯಕ್ರಮ ನೆರವೇರಿಸಿದ್ದಾರೆ.

Viral News: ಅದ್ದೂರಿಯಾಗಿ ಕರುವಿನ ನಾಮಕರಣ ಮಾಡಿ ಸಂಭ್ರಮಿಸಿದ ಕುಟುಂಬ
ಕರುವಿನ ನಾಮಕರಣ ಕಾರ್ಯಕ್ರಮ
ಅಕ್ಷತಾ ವರ್ಕಾಡಿ
|

Updated on: Mar 28, 2024 | 3:13 PM

Share

ತೆಲಂಗಾಣ:  ಕರೀಂನಗರ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಅದ್ದೂರಿಯಾಗಿ ನಾಮಕರಣ ಕಾರ್ಯಕ್ರಮವೊಂದು ನೆರವೇರಿದೆ. ಆದ್ರೆ ನಾಮಕರಣ ಕಾರ್ಯಕ್ರಮ ಸುದ್ದಿಯಾಗುವಷ್ಟು ವಿಶೇಷತೆ ಏನಿದೆ ಅಂತಾ ನೀವು ಅಂದುಕೊಂಡಿರಬಹುದು. ಹೌದು ಈ ಕಾರ್ಯಕ್ರಮದಲ್ಲಿ ವಿಶೇಷತೆಯಿದೆ. ಯಾಕೆಂದರೆ ಕುಟುಂಬವೊಂದು ತಮ್ಮ ಮನೆಯಲ್ಲಿ ಜನಿಸಿದ ಕರುವೊಂದರ ನಾಮಕರಣ ಕಾರ್ಯಕ್ರಮವನ್ನು ತಮ್ಮ ಮನೆಯ ಮಗುವಿನ ನಾಮಕರಣದಂತೆ ಅದ್ದೂರಿಯಾಗಿ ಮಾಡಿದ್ದಾರೆ.

ಕರೀಂನಗರದ ಗೌರಿಶೆಟ್ಟಿ ಮುನೀಂದರ್ ಮತ್ತು ಅನುರಾಧ ದಂಪತಿಗೆ ಹಸುಗಳೆಂದರೆ ಬಹಳ ಪ್ರೀತಿ. ಇತ್ತೀಚೆಗೆ ಅವರು ಸಾಕಿದ್ದ ಹಸು ಕರುವಿಗೆ ಜನ್ಮ ನೀಡಿದೆ. ಇದೀಗ ಕರು ಹುಟ್ಟಿದ 21 ದಿನಗಳ ನಂತರ ಅದ್ಧೂರಿಯಾಗಿ ನಾಮಕರಣ ಕಾರ್ಯಕ್ರಮ ನೆರವೇರಿಸಿದ್ದಾರೆ.

ನಾಮಕರಣ ಕಾರ್ಯಕ್ರಮದಲ್ಲಿ ಸುಮಾರು 500 ಜನರು ಭಾಗಿಯಾಗಿದ್ದು, ಕರುವನ್ನು ಸುಂದರವಾಗಿ ಅಲಂಕರಿಸಿದ ತೊಟ್ಟಿಲಲ್ಲಿ ಕೂರಿಸಿ ದೇವರ ಹಾಡುಗಳನ್ನು ಹಾಡುತ್ತಾ ಸಂಭ್ರಮಿಸಲಾಗಿದೆ. ಇದಲ್ಲದೇ ಅತಿಥಿಗಳಿಗೆ ಭರ್ಜರಿ ಔತಣ ಕೂಟವನ್ನು ಆಯೋಜಿಸಲಾಗಿತ್ತು.ಕರುವಿನ ನಾಮಕರಣ ಕಾರ್ಯಕ್ರಮವನ್ನು ಕಂಡು ಸ್ಥಳೀಯರು ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: ಶಾಲೆಗೆ ಕುಡಿದು ಬಂದ ಶಿಕ್ಷಕನನ್ನು ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು

ಕರುವಿಗೆ ರಾಧಾರಾಣಿ ಎಂದು ನಾಮಕರಣ ಮಾಡಿದ್ದು,ಗೋ ಮಾತೆಯನ್ನು ಕೂಡ ಹೊಸ ಬಟ್ಟೆ ಹಾಗೂ ಅರಿಶಿನ ಕುಂಕುಮವಿಟ್ಟು ಅಲಂಕರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಿಗೆ ತುಳಸಿ ಗಿಡಗಳನ್ನು ಉಡುಗೊರೆಯಾಗಿ ನೀಡಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?