AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಂದ್ರನ ಬಳಿ ಸಿಲುಕಿಕೊಂಡಿದ್ದೇನೆ’; ಇದು ನಮ್ಮ ಅಧಿಕಾರ ವ್ಯಾಪ್ತಿಯಲ್ಲಿಲ್ಲ ಎಂದ ಮುಂಬೈ ಪೊಲೀಸರು

Mumbai Police : ಚಂದ್ರನ ಬಳಿ ಹೋದಮೇಲೆಯೂ ನಮ್ಮ ಮೇಲೆ ನಂಬಿಕೆ ಇರಿಸಿಕೊಂಡಿದ್ದೀರಲ್ಲ, ಸಂತೋಷ! ಎಂದು ಪೊಲೀಸರು ಉತ್ತರಿಸಿದ್ದಾರೆ. ನೆಟ್ಟಿಗರು ಮುಂಬೈ ಪೊಲೀಸರ ಉತ್ತಮ ಅಭಿರುಚಿಯ ಹಾಸ್ಯಪ್ರಜ್ಞೆಯನ್ನು ಕೊಂಡಾಡುತ್ತಿದ್ಧಾರೆ.

‘ಚಂದ್ರನ ಬಳಿ ಸಿಲುಕಿಕೊಂಡಿದ್ದೇನೆ’; ಇದು ನಮ್ಮ ಅಧಿಕಾರ ವ್ಯಾಪ್ತಿಯಲ್ಲಿಲ್ಲ ಎಂದ ಮುಂಬೈ ಪೊಲೀಸರು
ಮುಂಬೈ ಪೊಲೀಸರ್ ಟ್ವೀಟ್​ಗೆ ಸಾರ್ವಜನಿಕರೊಬ್ಬರ ಫೋಟೋ ಟ್ವೀಟ್​
TV9 Web
| Updated By: ಶ್ರೀದೇವಿ ಕಳಸದ|

Updated on:Jan 31, 2023 | 1:15 PM

Share

Viral News : ನೀವು ಯಾವುದೇ ರೀತಿಯ ತೊಂದರೆ ಎದುರಿಸಿದಲ್ಲಿ ನಾವಿದ್ದೇವೆ! Dial 100 ಎಂದು ಮುಂಬೈ ಪೊಲೀಸರು ಇತ್ತೀಚೆಗೆ ಟ್ವೀಟ್ ಮಾಡಿದ್ದರು. ಸಾಕಷ್ಟು ಪ್ರತಿಕ್ರಿಯೆಗಳ ಮಹಾಪೂರ ಈ ಪೋಸ್ಟ್​ಗೆ ದೊರೆತಿತ್ತು. ಅದರಲ್ಲಿ ಒಂದು ಫೋಟೋ ಟ್ವೀಟ್​ಗೆ ಪೊಲೀಸರು ಉತ್ತರಿಸಿದ್ದಾರೆ. ಈ ಫೋಟೋದಲ್ಲಿ ಚಂದ್ರನ ಮೇಲಿರುವ ಗಗನಯಾನಿಯ ಚಿತ್ರವಿದ್ದು, ‘ನಾನಿಲ್ಲಿ ಸಿಲುಕಿಕೊಂಡಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪೊಲೀಸರು, ‘ಇದು ನಮ್ಮ ವ್ಯಾಪ್ತಿಯಲ್ಲಿ ಬರಲಾರದು’ ಎಂದಿದ್ದಾರೆ.

ಸಾರ್ವಜನಿಕರಲ್ಲಿ ಸಾಕಷ್ಟು ವಿಷಯಗಳ ಬಗ್ಗೆ ಅರಿವು ಮೂಡಿಸಲು ಮುಂಬೈ ಪೊಲೀಸರು ಆಗಾಗ ಇಂಥ ಮೀಮ್​ಗಳನ್ನು ಟ್ವೀಟ್ ಮಾಡುತ್ತಿರುತ್ತಾರೆ. ‘ನೀವು ಯಾವುದೇ ರೀತಿಯ ತೊಂದರೆಗೆ ಒಳಗಾದರೆ ಕಾಯಬೇಡಿ, Dial100’ ಎಂದು ಸೋಮವಾರದಂದು ವಿಡಿಯೋ ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ನೆಟ್ಟಿಗರೊಬ್ಬರು ಹೀಗೆ ಚಂದ್ರನ ಮೇಲಿರುವ ಗಗನಯಾತ್ರಿಯ ಫೋಟೋ ಟ್ವೀಟ್ ಮಾಡಿ ‘ನಾನಿಲ್ಲಿ ಸಿಲುಕಿಕೊಂಡಿದ್ದೇನೆ’ ಎಂದು ಟ್ಯಾಗ್ ಮಾಡಿದರು. ತಕ್ಷಣವೇ ಪೊಲೀಸರು ಇದು ನಮ್ಮ ಅಧಿಕಾರ ವ್ಯಾಪ್ತಿಗೆ ಒಳಪಟ್ಟಿಲ್ಲ ಎಂದು ತಮಾಷೆಯಾಗಿಯೇ ಉತ್ತರಿಸಿದರು.

ಇದನ್ನೂ ಓದಿ : ವೃದ್ಧರೊಬ್ಬರು ಕೋತಿಗೆ ರೊಟ್ಟಿ ಕೊಡಲು ಪ್ರಯತ್ನಿಸುತ್ತಿರುವ ಆಪ್ತವಾದ ವಿಡಿಯೋ ವೈರಲ್

ಆದರೆ, ನೀವು ಚಂದ್ರನ ಬಳಿ ಹೋದಮೇಲೆಯೂ ನಮ್ಮ ಮೇಲೆ ನಂಬಿಕೆ ಇರಿಸಿಕೊಂಡಿದ್ದೀರಲ್ಲ ಇದು ಸಂತೋಷದ ವಿಷಯ ಎಂದು ಪೊಲೀಸರು ಮತ್ತೊಂದು ಪ್ರತಿಕ್ರಿಯೆ ನೀಡಿದರು. ಇದೆಲ್ಲವನ್ನೂ ಗಮನಿಸುತ್ತಿದ್ದ ನೆಟ್ಟಿಗರು ಪೊಲೀಸರ ಉತ್ತಮ ಅಭಿರುಚಿಯ ಪ್ರತಿಕ್ರಿಯೆಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ಪುಟ್ಟಾ, ನಾವೇ ಹೀಗೆ ನಿಧಾನಕ್ಕೆ ರಸ್ತೆ ದಾಟಬೇಕು; ಆನೆಯಮ್ಮನ ಪ್ರಾತ್ಯಕ್ಷಿಕೆ ವಿಡಿಯೋ ವೈರಲ್

ಈ ಹಿಂದೆ ಶಾರುಖ್ ಖಾನ್​ ಅಭಿಮಾನಿಯೊಬ್ಬರು ಒನ್​ ಟೈಮ್ ಪಾಸ್​ವರ್ಡ್​ (OTP) ಕೇಳಿದಾಗ, ಮುಂಬೈ ಪೊಲೀಸರು, 100 ಎಂದು ಉತ್ತರಿಸಿದ್ದರು! ಆಗಲೂ ನೆಟ್ಟಿಗರು, ಮುಂಬೈ ಪೊಲೀಸರ ಈ ನವಿರಾದ ಹಾಸ್ಯಪ್ರಜ್ಞೆ ನಿಜಕ್ಕೂ ಅವರ ಬಗ್ಗೆ ಇನ್ನಷ್ಟು ಗೌರವ ಮತ್ತು ಸ್ನೇಹಭಾವ ತಂದಿದೆ ಎಂದಿದ್ದರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ ಓದಲು ಕ್ಲಿಕ್ ಮಾಡಿ

Published On - 1:12 pm, Tue, 31 January 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?