AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಂದಿಗೆ ನರ್ಸ್​​​​ ಸುಮಾರು ಒಂದು ವರ್ಷದಿಂದ ನಿರಂತರ ಲೈಂಗಿಕ ಸಂಪರ್ಕದಲ್ಲಿದ್ದರು. ಆದರೆ ಇತ್ತೀಚೆಗಷ್ಟೇ ಲೈಂಗಿಕ ಸಂಭೋಗ ನಡೆಸುತ್ತಿರುವಾಗ ರೋಗಿ ಸಾವನ್ನಪ್ಪಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Jun 25, 2024 | 4:18 PM

Share

ರೋಗಿಗಳ ಶೂಶ್ರಷೆಯಲ್ಲಿ ತೊಡಗಿಸಿಕೊಳ್ಳುವ ದಾದಿಯರನ್ನು ತಾಯಿಯ ರೂಪವಾಗಿ ಅಥವಾ ದೇವರ ರೂಪವಾಗಿ ನೋಡಲಾಗುತ್ತದೆ. ಆದರೆ ಇಲೊಬ್ಬಳು ನರ್ಸ್​ ಈ ಕೆಲಸಕ್ಕೆ ಕಳಂಕ ತಂದಿದ್ದಾಳೆ. ಹೌದು ತಾನು ಆರೈಕೆ ಮಾಡಬೇಕಾದ ರೋಗಿಯೊಂದಿಗೆ ಸುಮಾರು ಒಂದು ವರ್ಷದಿಂದ ನಿರಂತರ ಲೈಂಗಿಕ ಸಂಪರ್ಕದಲ್ಲಿದ್ದು, ಇತ್ತೀಚೆಗಷ್ಟೇ ಲೈಂಗಿಕ ಸಂಭೋಗದ ವೇಳೆ ರೋಗಿ ಸಾವನ್ನಪ್ಪಿದ್ದು, ಘಟನೆ ಬೆಳಕಿಗೆ ಬಂದಿದೆ. ಇದೀಗಾಗಲೇ ನರ್ಸ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದೆ.

ಯುನೈಟೆಡ್ ಕಿಂಗ್‌ಡಮ್‌ನ ವೇಲ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ನರ್ಸ್​ ಪೆನೆಲೋಪ್ ವಿಲಿಯಮ್ಸ್(42) ಎಂದು ಗುರುತಿಸಲಾಗಿದೆ. ರೋಗಿಯು ವೇಲ್ಸ್‌ನ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ನರ್ಸ್​ ಜೊತೆ ಸಂಭೋಗದ ಸಮಯದಲ್ಲಿ ಕುಸಿದು ಬಿದ್ದದ್ದು, ವಿಷಯ ತಿಳಿದ ವೈದ್ಯಕೀಯ ಸಿಬ್ಬಂದಿಗಳು ಸ್ಥಳಕ್ಕೆ ಬಂದಾಗ ರೋಗಿಯು ಭಾಗಶಃ ಬೆತ್ತಲೆಯಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ: ವಿಭಿನ್ನವಾಗಿ ಫೋಟೊ ತೆಗೆಸಿಕೊಳ್ಳಲು ಯುವತಿಯ ಸಾಹಸ, ಕೈ ಬಿಟ್ಟ ಪ್ರಿಯಕರ ಆಕೆಯ ಸ್ಥಿತಿ ಏನಾಯ್ತು ನೋಡಿ

ಆರಂಭಿಕ ಸುಳ್ಳುಗಳು:

ಫಾಕ್ಸ್ ನ್ಯೂಸ್‌ನ ಪ್ರಕಾರ , ವಿಲಿಯಮ್ಸ್ ಆರಂಭದಲ್ಲಿ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಲು ರೋಗಿಯನ್ನು ಭೇಟಿಯಾಗಲು ಹೋಗಿದ್ದೆ. ತಾನು ಕಾರಿನ ಹಿಂಭಾಗದಲ್ಲಿ ಕೇವಲ 30 ರಿಂದ 45 ನಿಮಿಷಗಳು ಮಾತನಾಡುತ್ತಿದ್ದೆವು ಎಂದು ನರ್ಸ್ ಹೇಳಿಕೊಂಡಿದ್ದಾಳೆ. ನಂತರದ ವಿಚಾರಣೆಯ ಸಮಯದಲ್ಲಿ ತನ್ನ ಸಂಬಂಧವನ್ನು ಒಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ವಿಚಾರಣೆಗಳು ನಡೆಯುತ್ತಿದ್ದು, ಇದೀಗಾಗಲೇ ನರ್ಸ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:14 pm, Tue, 25 June 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ