AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pink Leopard: ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಪರೂಪದ ಗುಲಾಬಿ ಚಿರತೆ!

Viral News: ಉದಯಪುರ ಮೂಲದ ವ್ಯನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಅವರು ನಾಲ್ಕು ದಿನದ ಹುಡುಕಾಟದ ನಂತರ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ.

Pink Leopard: ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಪರೂಪದ ಗುಲಾಬಿ ಚಿರತೆ!
ಗುಲಾಬಿ ಚಿರತೆ
Follow us
TV9 Web
| Updated By: shruti hegde

Updated on: Nov 12, 2021 | 9:47 AM

ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಸ್ಥಾನದ ಪಾಳಿ ಜಿಲ್ಲೆಯ ರಣಕ್​ಪುರ ಪ್ರದೇಶದಲ್ಲಿ ಸ್ಥಳೀಯರು ಅಪರೂಪದ ಗುಲಾಬಿ ಚಿರತೆಯನ್ನು ಗುರಿತಿಸಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಗುಲಾಬಿ ಚಿರತೆ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಚಿರತೆ ಸಾಮಾನ್ಯವಾಗಿ ಮಸುಕಾದ ಹಳದಿ ಬಣ್ಣ ಅಥವಾ ಹಳದಿ- ಕಂದು ಬಣ್ಣವನ್ನು ಹೊಂದಿರುತ್ತದೆ. ಪತ್ತೆಯಾದ ಗುಲಾಬಿ ಚಿರತೆ ಕೆಂಪು ಕಂದು ಮಿಶ್ರಿತ ಚರ್ಮವನ್ನು ಹೊಂದಿದೆ. 

ರಣಕ್​ಪುರ ಮತ್ತು ಕುಂಭಲ್​ಗಢದ ಸ್ಥಳೀಯರು ಈ ಹಿಂದೆ ಈ ಚಿರತೆಯನ್ನು ನೋಡಿರುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ. ಉದಯಪುರ ಮೂಲದ ವ್ಯನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಮೋಟ್ವಾನಿ ಅವರು ನಾಲ್ಕು ದಿನದ ಹುಡುಕಾಟದ ನಂತರ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ. ಚಿರತೆಯ ವಯಸ್ಸು ಐದರಿಂದ ಆರು ವರ್ಷವಿರಬಹುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕುಂಭಲ್​ಗಢ ಅರಣ್ಯ ಪ್ರದೇಶವು ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯಲ್ಲಿದೆ. ಇದು 600 ಚದರ ಕಿಲೋಮೀಟರ್​ಗಳಷ್ಟು ವ್ಯಾಪಿಸಿದೆ. ಭಾರತೀಯ ಚಿರತೆ, ತೋಳ, ಪಟ್ಟೆ ಕತ್ತೆಕಿರುಬ, ಗೋಲ್ಡನ್ ನರಿ ಹೀಗೆ ವಿವಿಧ ಜಾತಿಯ ಪ್ರಾಣಿಗಳ ವಾಸನೆಲೆಯಾಗಿದೆ. ಇದೇ ಮೊದಲಿ ಬಾರಿಗೆ ಭಾರತದಲ್ಲಿ ಗುಲಾಬಿ ಚಿರತೆ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 2012ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಗುಲಾಬಿ ಬಣ್ಣದ ಕೋಟ್​ನಲ್ಲಿ ಚುಕ್ಕೆಗಳಿರುವ ಚಿರತೆ ಕಾಣಿಸಿಕೊಂಡಿರುವುದು ವರದಿಯಾಗಿತ್ತು.

ಇದನ್ನೂ ಓದಿ:

Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Viral News: 47 ಲಕ್ಷ ರೂ. ಜೊತೆ ಆಟೋ ಚಾಲಕನೊಂದಿಗೆ ಕೋಟ್ಯಧಿಪತಿಯ ಹೆಂಡತಿ ಪರಾರಿ!

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ