AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pink Leopard: ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಪರೂಪದ ಗುಲಾಬಿ ಚಿರತೆ!

Viral News: ಉದಯಪುರ ಮೂಲದ ವ್ಯನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಅವರು ನಾಲ್ಕು ದಿನದ ಹುಡುಕಾಟದ ನಂತರ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ.

Pink Leopard: ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಪರೂಪದ ಗುಲಾಬಿ ಚಿರತೆ!
ಗುಲಾಬಿ ಚಿರತೆ
TV9 Web
| Edited By: |

Updated on: Nov 12, 2021 | 9:47 AM

Share

ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಸ್ಥಾನದ ಪಾಳಿ ಜಿಲ್ಲೆಯ ರಣಕ್​ಪುರ ಪ್ರದೇಶದಲ್ಲಿ ಸ್ಥಳೀಯರು ಅಪರೂಪದ ಗುಲಾಬಿ ಚಿರತೆಯನ್ನು ಗುರಿತಿಸಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಗುಲಾಬಿ ಚಿರತೆ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಚಿರತೆ ಸಾಮಾನ್ಯವಾಗಿ ಮಸುಕಾದ ಹಳದಿ ಬಣ್ಣ ಅಥವಾ ಹಳದಿ- ಕಂದು ಬಣ್ಣವನ್ನು ಹೊಂದಿರುತ್ತದೆ. ಪತ್ತೆಯಾದ ಗುಲಾಬಿ ಚಿರತೆ ಕೆಂಪು ಕಂದು ಮಿಶ್ರಿತ ಚರ್ಮವನ್ನು ಹೊಂದಿದೆ. 

ರಣಕ್​ಪುರ ಮತ್ತು ಕುಂಭಲ್​ಗಢದ ಸ್ಥಳೀಯರು ಈ ಹಿಂದೆ ಈ ಚಿರತೆಯನ್ನು ನೋಡಿರುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ. ಉದಯಪುರ ಮೂಲದ ವ್ಯನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಮೋಟ್ವಾನಿ ಅವರು ನಾಲ್ಕು ದಿನದ ಹುಡುಕಾಟದ ನಂತರ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ. ಚಿರತೆಯ ವಯಸ್ಸು ಐದರಿಂದ ಆರು ವರ್ಷವಿರಬಹುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕುಂಭಲ್​ಗಢ ಅರಣ್ಯ ಪ್ರದೇಶವು ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯಲ್ಲಿದೆ. ಇದು 600 ಚದರ ಕಿಲೋಮೀಟರ್​ಗಳಷ್ಟು ವ್ಯಾಪಿಸಿದೆ. ಭಾರತೀಯ ಚಿರತೆ, ತೋಳ, ಪಟ್ಟೆ ಕತ್ತೆಕಿರುಬ, ಗೋಲ್ಡನ್ ನರಿ ಹೀಗೆ ವಿವಿಧ ಜಾತಿಯ ಪ್ರಾಣಿಗಳ ವಾಸನೆಲೆಯಾಗಿದೆ. ಇದೇ ಮೊದಲಿ ಬಾರಿಗೆ ಭಾರತದಲ್ಲಿ ಗುಲಾಬಿ ಚಿರತೆ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 2012ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಗುಲಾಬಿ ಬಣ್ಣದ ಕೋಟ್​ನಲ್ಲಿ ಚುಕ್ಕೆಗಳಿರುವ ಚಿರತೆ ಕಾಣಿಸಿಕೊಂಡಿರುವುದು ವರದಿಯಾಗಿತ್ತು.

ಇದನ್ನೂ ಓದಿ:

Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Viral News: 47 ಲಕ್ಷ ರೂ. ಜೊತೆ ಆಟೋ ಚಾಲಕನೊಂದಿಗೆ ಕೋಟ್ಯಧಿಪತಿಯ ಹೆಂಡತಿ ಪರಾರಿ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ