AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬಸ್ಸಿನಲ್ಲಿ ಗರ್ಭಿಣಿ, ವೃದ್ಧ, ದಿವ್ಯಾಂಗ, ಮಕ್ಕಳು ಯಾರಿಗೆ ಸೀಟು ಬೀಡಬೇಕು? IAS ಅಧಿಕಾರಿ ಪ್ರಶ್ನೆ ವೈರಲ್

ಮನುಷ್ಯರಾಗಿ ನಾವು ಪ್ರತಿದಿನವೂ ನಮ್ಮನ್ನು ಪರೀಕ್ಷಿಸುವ ನೈತಿಕ ಇಕ್ಕಟ್ಟುಗಳನ್ನು ಎದುರಿಸುತ್ತಿರುತ್ತೇವೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಅಂತಹದ್ದೆ ನೈತಿಕ ಸಂದಿಗ್ಧತೆಯ ಫೋಟೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

Viral News: ಬಸ್ಸಿನಲ್ಲಿ ಗರ್ಭಿಣಿ, ವೃದ್ಧ, ದಿವ್ಯಾಂಗ, ಮಕ್ಕಳು ಯಾರಿಗೆ ಸೀಟು ಬೀಡಬೇಕು? IAS ಅಧಿಕಾರಿ ಪ್ರಶ್ನೆ ವೈರಲ್
Viral News
TV9 Web
| Edited By: |

Updated on: Mar 08, 2023 | 2:22 PM

Share

ನೈತಿಕ ಸಂದಿಗ್ಧತೆಗಳು ನಮ್ಮ ಜೀವನದಲ್ಲಿ ಬಂದೇ ಬರುತ್ತದೆ ಮತ್ತು ಮನುಷ್ಯರಾಗಿ ನಾವು ಪ್ರತಿದಿನವೂ ನಮ್ಮನ್ನು ಪರೀಕ್ಷಿಸುವ ನೈತಿಕ ಇಕ್ಕಟ್ಟುಗಳನ್ನು ಎದುರಿಸುತ್ತಿರುತ್ತೇವೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಅಂತಹದ್ದೆ ನೈತಿಕ ಸಂದಿಗ್ಧತೆಯ ಫೋಟೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಮತ್ತು ಅದಕ್ಕೆ ಪ್ರತಿಕ್ರಿಯೆ ನೀಡಲು ಟ್ವಿಟರ್ ಬಳಕೆದಾದರನ್ನು ಕೇಳಿದ್ದಾರೆ. ನಾವು ಒಬ್ಬ ಅಸಹಾಯಕ ವ್ಯಕ್ತಿಯನ್ನು ರಸ್ತೆ ದಾಟಿಸುವುದಾಗಿರಲಿ, ಹಸಿದ ಬೀದಿ ಬದಿಯ ಪ್ರಾಣಿಗಳಿಗೆ ಊಟ ಹಾಕುವುದಾಗಿರಲಿ ಅಥವಾ ಬಸ್‌ನಲ್ಲಿ ಪ್ರಯಾಣಿಸುವಾಗ ವಯಸ್ಸಾದವರಿಗೆ ಸೀಟ್ ಬಿಟ್ಟು ಕೊಡುವುದಾಗಲಿ ಇವೆಲ್ಲ ನಮ್ಮ ನೈತಿಕ ಹಾಗೂ ಮಾನವೀಯ ಮೌಲ್ಯಗಳಾಗಿವೆ. ಕೆಲವೊಂದು ಬಾರಿ ನೈತಿಕ ಸಂದಿಗ್ಧತೆಗಳನ್ನು ಎದುರಿಸುತ್ತೇವೆ. ಯಾರಿಗೆ ಸಹಾಯ ಮಾಡಿದರೆ ಉತ್ತಮ ಎಂಬ ಗೊಂದಲ ನಮ್ಮಲ್ಲಿ ಮೂಡುತ್ತದೆ. ಅಂತಹದ್ದೆ ನೈತಿಕ ಸಂದಿಗ್ಧತೆಯ ಕುರಿತ ಫೋಟೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು ಇದಕ್ಕೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಿ ಎಂದು ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಹೇಳಿದ್ದಾರೆ.

ಅವರು ಟ್ವಿಟರ್‌ನಲ್ಲಿ ಶೇರ್ ಮಾಡಿರುವ ಫೋಟೊದಲ್ಲಿ ಒಬ್ಬ ಯುವಕ ಬಸ್ ಸೀಟ್‌ನಲ್ಲಿ ಕುಳಿತಿರುತ್ತಾನೆ. ಹಾಗೂ ಅದೇ ಬಸ್‌ನಲ್ಲಿ ಆ ಯುವಕನ ಕಣ್ಣ ಮುಂದೆ ಒಬ್ಬ ಮುದುಕಿ, ಮಗುವನ್ನು ಎತ್ತಿಕೊಂಡ ಮಹಿಳೆ, ಕಾಲಿಗೆ ಗಾಯಗೊಂಡ ಕಾಲಿಗೆ ಪ್ಲಾಸ್ಟರ್ ಹಾಕಿದ ವ್ಯಕ್ತಿ, ದೈಹಿಕವಾಗಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ವ್ಯಕ್ತಿ ಸೀಟ್ ಇಲ್ಲದೆ ನಿಂತಿರುತ್ತಾರೆ. ಮತ್ತು ಅವರು ಯಾರು ಆ ಸೀಟ್‌ನಲ್ಲಿ ಕುಳಿತುಕೊಳ್ಳಲು ಅರ್ಹರು ಮತ್ತು ಏಕೆ? ಎಂಬ ಪ್ರಶ್ನೆಯನ್ನು ಟ್ವಿಟರ್ ಬಳಕೆದಾರರಲ್ಲಿ ಕೇಳಿದ್ದಾರೆ.

ಇದನ್ನೂ ಓದಿ: Viral News: ಈ ದೇಶದಲ್ಲಿ ಅರ್ಧದಷ್ಟು ಹೆಣ್ಣುಮಕ್ಳು ಮದುವೆಯಾಗದೇ ತಾಯಿಯಾಗ್ತಾರೆ: 10ರಲ್ಲಿ 8 ಮದುವೆಗಳು ವಿಚ್ಛೇದನಲ್ಲಿ ಕೊನೆಗೊಳ್ಳುತ್ತಂತೆ!

ಹೆಚ್ಚಿನ ಬಳಕೆದಾರರು ತಮ್ಮ ಅಭಿಪ್ರಾಯಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ಒಬ್ಬ ಬಳಕೆದಾದರು ನನ್ನ ಅಭಿಪ್ರಾಯದ ಪ್ರಕಾರ ಗಾಯಗೊಂಡಿರುವು ವ್ಯಕ್ತಿಗೆ ಸೀಟ್ ಬಿಟ್ಟುಕೊಡುವುದು ಉತ್ತಮ. ಏಕೆಂದರೆ ಅವನಿಗೆ ಹೆಚ್ಚು ಹೊತ್ತು ನಿಲ್ಲುವುದು ಕಷ್ಟ ಎಂದು ಹೇಳಿದರು. ಇನ್ನೊಬ್ಬ ಬಳಕೆದಾರರು ಇದಕ್ಕೆ ಸ್ಪಷ್ಟ ಉತ್ತರವಿಲ್ಲ. ಪ್ರತಿಯೊಂದು ಆಯ್ಕೆಯು ತನ್ನದೇ ಆದ ಅರ್ಹತೆಯನ್ನು ಹೊಂದಿದೆ. ಅದಾಗ್ಯೂ ಮಗುವನ್ನು ಹೊತ್ತ ಮಹಿಳೆಗೆ ಸೀಟ್ ನೀಡಬೇಕು ಏಕೆಂದರೆ ಅಲ್ಲಿ ಇಬ್ಬರಿಗೆ ಆಸನದ ವ್ಯವಸ್ಥೆ ಸಿಕ್ಕಂತಾಗುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇನ್ನೊಬ್ಬ ಬಳಕೆದಾರರು ಅಂಹತ ಸಂದಿಗ್ಧ ಸಂದರ್ಭದಲ್ಲಿ ದಿಲ್ಲಿಯ ಮೆಟ್ರೋ ಪ್ರಯಾಣಿಕರಂತೆ ಕಣ್ಣು ಮುಚ್ಚಿ ನಿದ್ದೆ ಮಾಡುವಂತೆ ವರ್ತಿಸಬೇಕು ಎಂದು ಹೇಳಿದ್ದಾರೆ.

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ