Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬಸ್ಸಿನಲ್ಲಿ ಗರ್ಭಿಣಿ, ವೃದ್ಧ, ದಿವ್ಯಾಂಗ, ಮಕ್ಕಳು ಯಾರಿಗೆ ಸೀಟು ಬೀಡಬೇಕು? IAS ಅಧಿಕಾರಿ ಪ್ರಶ್ನೆ ವೈರಲ್

ಮನುಷ್ಯರಾಗಿ ನಾವು ಪ್ರತಿದಿನವೂ ನಮ್ಮನ್ನು ಪರೀಕ್ಷಿಸುವ ನೈತಿಕ ಇಕ್ಕಟ್ಟುಗಳನ್ನು ಎದುರಿಸುತ್ತಿರುತ್ತೇವೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಅಂತಹದ್ದೆ ನೈತಿಕ ಸಂದಿಗ್ಧತೆಯ ಫೋಟೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

Viral News: ಬಸ್ಸಿನಲ್ಲಿ ಗರ್ಭಿಣಿ, ವೃದ್ಧ, ದಿವ್ಯಾಂಗ, ಮಕ್ಕಳು ಯಾರಿಗೆ ಸೀಟು ಬೀಡಬೇಕು? IAS ಅಧಿಕಾರಿ ಪ್ರಶ್ನೆ ವೈರಲ್
Viral News
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 08, 2023 | 2:22 PM

ನೈತಿಕ ಸಂದಿಗ್ಧತೆಗಳು ನಮ್ಮ ಜೀವನದಲ್ಲಿ ಬಂದೇ ಬರುತ್ತದೆ ಮತ್ತು ಮನುಷ್ಯರಾಗಿ ನಾವು ಪ್ರತಿದಿನವೂ ನಮ್ಮನ್ನು ಪರೀಕ್ಷಿಸುವ ನೈತಿಕ ಇಕ್ಕಟ್ಟುಗಳನ್ನು ಎದುರಿಸುತ್ತಿರುತ್ತೇವೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಅಂತಹದ್ದೆ ನೈತಿಕ ಸಂದಿಗ್ಧತೆಯ ಫೋಟೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಮತ್ತು ಅದಕ್ಕೆ ಪ್ರತಿಕ್ರಿಯೆ ನೀಡಲು ಟ್ವಿಟರ್ ಬಳಕೆದಾದರನ್ನು ಕೇಳಿದ್ದಾರೆ. ನಾವು ಒಬ್ಬ ಅಸಹಾಯಕ ವ್ಯಕ್ತಿಯನ್ನು ರಸ್ತೆ ದಾಟಿಸುವುದಾಗಿರಲಿ, ಹಸಿದ ಬೀದಿ ಬದಿಯ ಪ್ರಾಣಿಗಳಿಗೆ ಊಟ ಹಾಕುವುದಾಗಿರಲಿ ಅಥವಾ ಬಸ್‌ನಲ್ಲಿ ಪ್ರಯಾಣಿಸುವಾಗ ವಯಸ್ಸಾದವರಿಗೆ ಸೀಟ್ ಬಿಟ್ಟು ಕೊಡುವುದಾಗಲಿ ಇವೆಲ್ಲ ನಮ್ಮ ನೈತಿಕ ಹಾಗೂ ಮಾನವೀಯ ಮೌಲ್ಯಗಳಾಗಿವೆ. ಕೆಲವೊಂದು ಬಾರಿ ನೈತಿಕ ಸಂದಿಗ್ಧತೆಗಳನ್ನು ಎದುರಿಸುತ್ತೇವೆ. ಯಾರಿಗೆ ಸಹಾಯ ಮಾಡಿದರೆ ಉತ್ತಮ ಎಂಬ ಗೊಂದಲ ನಮ್ಮಲ್ಲಿ ಮೂಡುತ್ತದೆ. ಅಂತಹದ್ದೆ ನೈತಿಕ ಸಂದಿಗ್ಧತೆಯ ಕುರಿತ ಫೋಟೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು ಇದಕ್ಕೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಿ ಎಂದು ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಹೇಳಿದ್ದಾರೆ.

ಅವರು ಟ್ವಿಟರ್‌ನಲ್ಲಿ ಶೇರ್ ಮಾಡಿರುವ ಫೋಟೊದಲ್ಲಿ ಒಬ್ಬ ಯುವಕ ಬಸ್ ಸೀಟ್‌ನಲ್ಲಿ ಕುಳಿತಿರುತ್ತಾನೆ. ಹಾಗೂ ಅದೇ ಬಸ್‌ನಲ್ಲಿ ಆ ಯುವಕನ ಕಣ್ಣ ಮುಂದೆ ಒಬ್ಬ ಮುದುಕಿ, ಮಗುವನ್ನು ಎತ್ತಿಕೊಂಡ ಮಹಿಳೆ, ಕಾಲಿಗೆ ಗಾಯಗೊಂಡ ಕಾಲಿಗೆ ಪ್ಲಾಸ್ಟರ್ ಹಾಕಿದ ವ್ಯಕ್ತಿ, ದೈಹಿಕವಾಗಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ವ್ಯಕ್ತಿ ಸೀಟ್ ಇಲ್ಲದೆ ನಿಂತಿರುತ್ತಾರೆ. ಮತ್ತು ಅವರು ಯಾರು ಆ ಸೀಟ್‌ನಲ್ಲಿ ಕುಳಿತುಕೊಳ್ಳಲು ಅರ್ಹರು ಮತ್ತು ಏಕೆ? ಎಂಬ ಪ್ರಶ್ನೆಯನ್ನು ಟ್ವಿಟರ್ ಬಳಕೆದಾರರಲ್ಲಿ ಕೇಳಿದ್ದಾರೆ.

ಇದನ್ನೂ ಓದಿ: Viral News: ಈ ದೇಶದಲ್ಲಿ ಅರ್ಧದಷ್ಟು ಹೆಣ್ಣುಮಕ್ಳು ಮದುವೆಯಾಗದೇ ತಾಯಿಯಾಗ್ತಾರೆ: 10ರಲ್ಲಿ 8 ಮದುವೆಗಳು ವಿಚ್ಛೇದನಲ್ಲಿ ಕೊನೆಗೊಳ್ಳುತ್ತಂತೆ!

ಹೆಚ್ಚಿನ ಬಳಕೆದಾರರು ತಮ್ಮ ಅಭಿಪ್ರಾಯಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ಒಬ್ಬ ಬಳಕೆದಾದರು ನನ್ನ ಅಭಿಪ್ರಾಯದ ಪ್ರಕಾರ ಗಾಯಗೊಂಡಿರುವು ವ್ಯಕ್ತಿಗೆ ಸೀಟ್ ಬಿಟ್ಟುಕೊಡುವುದು ಉತ್ತಮ. ಏಕೆಂದರೆ ಅವನಿಗೆ ಹೆಚ್ಚು ಹೊತ್ತು ನಿಲ್ಲುವುದು ಕಷ್ಟ ಎಂದು ಹೇಳಿದರು. ಇನ್ನೊಬ್ಬ ಬಳಕೆದಾರರು ಇದಕ್ಕೆ ಸ್ಪಷ್ಟ ಉತ್ತರವಿಲ್ಲ. ಪ್ರತಿಯೊಂದು ಆಯ್ಕೆಯು ತನ್ನದೇ ಆದ ಅರ್ಹತೆಯನ್ನು ಹೊಂದಿದೆ. ಅದಾಗ್ಯೂ ಮಗುವನ್ನು ಹೊತ್ತ ಮಹಿಳೆಗೆ ಸೀಟ್ ನೀಡಬೇಕು ಏಕೆಂದರೆ ಅಲ್ಲಿ ಇಬ್ಬರಿಗೆ ಆಸನದ ವ್ಯವಸ್ಥೆ ಸಿಕ್ಕಂತಾಗುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇನ್ನೊಬ್ಬ ಬಳಕೆದಾರರು ಅಂಹತ ಸಂದಿಗ್ಧ ಸಂದರ್ಭದಲ್ಲಿ ದಿಲ್ಲಿಯ ಮೆಟ್ರೋ ಪ್ರಯಾಣಿಕರಂತೆ ಕಣ್ಣು ಮುಚ್ಚಿ ನಿದ್ದೆ ಮಾಡುವಂತೆ ವರ್ತಿಸಬೇಕು ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು