AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ರಸ್ತೆ ಮಧ್ಯೆ ಅಡ್ಡ ನಿಂತ ಆನೆ; ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ!

ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕಾಡಾನೆಯೊಂದು ಘಾಟ್ ರಸ್ತೆಯನ್ನು ನಿರ್ಬಂಧಿಸಿದ ಕಾರಣ 24 ವರ್ಷದ ಬುಡಕಟ್ಟು ಮಹಿಳೆ ಆಂಬ್ಯುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

Viral News: ರಸ್ತೆ ಮಧ್ಯೆ ಅಡ್ಡ ನಿಂತ ಆನೆ; ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ!
ಆನೆ
TV9 Web
| Edited By: |

Updated on: Apr 29, 2022 | 7:20 PM

Share

ಈರೋಡ್: ಹಳ್ಳಿಯೊಂದರ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆ್ಯಂಬುಲೆನ್ಸ್​ನಲ್ಲಿ (Ambulance) ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ರಸ್ತೆಯ ಮಧ್ಯೆ ಆನೆಯೊಂದು ಆ್ಯಂಬುಲೆನ್ಸ್​ಗೆ ಅಡ್ಡ ಬಂದಿದ್ದರಿಂದ ಆ್ಯಂಬುಲೆನ್ಸ್​ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಈ ವೇಳೆ ಆ ಮಹಿಳೆಗೆ ಆ್ಯಂಬುಲೆನ್ಸ್​ನಲ್ಲಿಯೇ ಹೆರಿಗೆಯಾಗಿದೆ. ಆನೆ ರಸ್ತೆಯಿಂದ ದೂರ ಹೋದ ಬಳಿಕ ಆ ಮಹಿಳೆ ಮತ್ತು ಮಗುವನ್ನು ಆಸ್ಪತ್ರೆಗೆ ಸೇರಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕಾಡಾನೆಯೊಂದು ಘಾಟ್ ರಸ್ತೆಯನ್ನು ನಿರ್ಬಂಧಿಸಿದ ಕಾರಣ 24 ವರ್ಷದ ಬುಡಕಟ್ಟು ಮಹಿಳೆ ಆಂಬ್ಯುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಆರೋಗ್ಯ ಅಧಿಕಾರಿಗಳ ಪ್ರಕಾರ, ಗುರುವಾರ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಕೆಯ ಸಂಬಂಧಿಕರು ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ, ಆನೆಯು ಕಾಡಿನಿಂದ ಹೊರಬಂದು ಘಾಟ್ ರಸ್ತೆಯ ಮಧ್ಯದಲ್ಲಿ ನಿಂತಿದ್ದರಿಂದ ಆ್ಯಂಬುಲೆನ್ಸ್​ ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಆಂಬ್ಯುಲೆನ್ಸ್‌ನ ಚಾಲಕ ವಾಹನವನ್ನು ನಿಲ್ಲಿಸಿ ಅರ್ಧ ಗಂಟೆಗೂ ಹೆಚ್ಚು ಕಾಲ ಕಾಯುತ್ತಿದ್ದರೂ ಆನೆ ಮುಂದೆ ಚಲಿಸಲಿಲ್ಲ.

ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

ಇದೇ ವೇಳೆ ಮಹಿಳೆಗೆ ಹೆರಿಗೆ ನೋವು ಜೋರಾಗಿದ್ದು, ಆಂಬ್ಯುಲೆನ್ಸ್‌ನಲ್ಲಿದ್ದ ತಂಡ ಅದೇ ವಾಹನದಲ್ಲಿ ಆ ಮಹಿಳೆಗೆ ಹೆರಿಗೆ ಮಾಡಲು ಸಹಾಯ ಮಾಡಿದೆ. ಆಕೆ ಆ್ಯಂಬುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕೆಲವು ನಿಮಿಷಗಳ ನಂತರ ಆನೆ ರಸ್ತೆಯಿಂದ ಹೊರಟುಹೋಯಿತು. ಬಳಿಕ, ಆರೋಗ್ಯ ಅಧಿಕಾರಿಗಳು ಮಹಿಳೆ ಮತ್ತು ಮಗುವನ್ನು ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ತಾಯಿ- ಮಗಳ ಆರೋಗ್ಯ ಚೆನ್ನಾಗಿದೆ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್