AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ರಸ್ತೆ ಮಧ್ಯೆ ಅಡ್ಡ ನಿಂತ ಆನೆ; ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ!

ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕಾಡಾನೆಯೊಂದು ಘಾಟ್ ರಸ್ತೆಯನ್ನು ನಿರ್ಬಂಧಿಸಿದ ಕಾರಣ 24 ವರ್ಷದ ಬುಡಕಟ್ಟು ಮಹಿಳೆ ಆಂಬ್ಯುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

Viral News: ರಸ್ತೆ ಮಧ್ಯೆ ಅಡ್ಡ ನಿಂತ ಆನೆ; ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ!
ಆನೆ
TV9 Web
| Edited By: |

Updated on: Apr 29, 2022 | 7:20 PM

Share

ಈರೋಡ್: ಹಳ್ಳಿಯೊಂದರ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆ್ಯಂಬುಲೆನ್ಸ್​ನಲ್ಲಿ (Ambulance) ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ರಸ್ತೆಯ ಮಧ್ಯೆ ಆನೆಯೊಂದು ಆ್ಯಂಬುಲೆನ್ಸ್​ಗೆ ಅಡ್ಡ ಬಂದಿದ್ದರಿಂದ ಆ್ಯಂಬುಲೆನ್ಸ್​ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಈ ವೇಳೆ ಆ ಮಹಿಳೆಗೆ ಆ್ಯಂಬುಲೆನ್ಸ್​ನಲ್ಲಿಯೇ ಹೆರಿಗೆಯಾಗಿದೆ. ಆನೆ ರಸ್ತೆಯಿಂದ ದೂರ ಹೋದ ಬಳಿಕ ಆ ಮಹಿಳೆ ಮತ್ತು ಮಗುವನ್ನು ಆಸ್ಪತ್ರೆಗೆ ಸೇರಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕಾಡಾನೆಯೊಂದು ಘಾಟ್ ರಸ್ತೆಯನ್ನು ನಿರ್ಬಂಧಿಸಿದ ಕಾರಣ 24 ವರ್ಷದ ಬುಡಕಟ್ಟು ಮಹಿಳೆ ಆಂಬ್ಯುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಆರೋಗ್ಯ ಅಧಿಕಾರಿಗಳ ಪ್ರಕಾರ, ಗುರುವಾರ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಕೆಯ ಸಂಬಂಧಿಕರು ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ, ಆನೆಯು ಕಾಡಿನಿಂದ ಹೊರಬಂದು ಘಾಟ್ ರಸ್ತೆಯ ಮಧ್ಯದಲ್ಲಿ ನಿಂತಿದ್ದರಿಂದ ಆ್ಯಂಬುಲೆನ್ಸ್​ ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಆಂಬ್ಯುಲೆನ್ಸ್‌ನ ಚಾಲಕ ವಾಹನವನ್ನು ನಿಲ್ಲಿಸಿ ಅರ್ಧ ಗಂಟೆಗೂ ಹೆಚ್ಚು ಕಾಲ ಕಾಯುತ್ತಿದ್ದರೂ ಆನೆ ಮುಂದೆ ಚಲಿಸಲಿಲ್ಲ.

ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

ಇದೇ ವೇಳೆ ಮಹಿಳೆಗೆ ಹೆರಿಗೆ ನೋವು ಜೋರಾಗಿದ್ದು, ಆಂಬ್ಯುಲೆನ್ಸ್‌ನಲ್ಲಿದ್ದ ತಂಡ ಅದೇ ವಾಹನದಲ್ಲಿ ಆ ಮಹಿಳೆಗೆ ಹೆರಿಗೆ ಮಾಡಲು ಸಹಾಯ ಮಾಡಿದೆ. ಆಕೆ ಆ್ಯಂಬುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕೆಲವು ನಿಮಿಷಗಳ ನಂತರ ಆನೆ ರಸ್ತೆಯಿಂದ ಹೊರಟುಹೋಯಿತು. ಬಳಿಕ, ಆರೋಗ್ಯ ಅಧಿಕಾರಿಗಳು ಮಹಿಳೆ ಮತ್ತು ಮಗುವನ್ನು ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ತಾಯಿ- ಮಗಳ ಆರೋಗ್ಯ ಚೆನ್ನಾಗಿದೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ