AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೃದಯಕ್ಕೆ ಚುಚ್ಚಿದ್ದ ಕಬ್ಬಿಣದ ರಾಡ್​​​ನ್ನು ಯಶಸ್ವಿಯಾಗಿ ಹೊರತೆಗೆದ ವೈದ್ಯರು

ವ್ಯಕ್ತಿಯ ಹೃದಯಕ್ಕೆ ಚುಚ್ಚಿಕೊಂಡಿದ್ದ ಕಬ್ಬಿಣದ ರಾಡ್ ಅನ್ನು ಹೊರ ತೆಗೆದು ಆತನ ಪ್ರಾಣ ಕಾಪಾಡುವಲ್ಲಿ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ (ಕೆಜಿಎಂಯು) ವೈದ್ಯರು ಯಶಸ್ವಿಯಾಗಿದ್ದಾರೆ. ವ್ಯಕ್ತಿಯ ಜೀವ ಉಳಿಸಿದ ವೈದ್ಯಕೀಯ ಸಿಬ್ಬಂದಿಗಳಿಗೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ. 

Viral News: ಹೃದಯಕ್ಕೆ ಚುಚ್ಚಿದ್ದ ಕಬ್ಬಿಣದ ರಾಡ್​​​ನ್ನು ಯಶಸ್ವಿಯಾಗಿ ಹೊರತೆಗೆದ ವೈದ್ಯರು
ಮುನ್ನೆ ಲಾಲ್ ಶರ್ಮಾ(54)
ಅಕ್ಷತಾ ವರ್ಕಾಡಿ
|

Updated on: Apr 10, 2024 | 3:15 PM

Share

ಲಕ್ನೋ: ಮನೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶೌಚಾಲಯದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮೇಲ್ಛಾವಣಿ ಕುಸಿದಿದ್ದು, ಪರಿಣಾಮ 75 ಸೆಂಮೀ ಉದ್ದದ ಕಬ್ಬಿಣದ ರಾಡ್ ಒಂದು 54 ವರ್ಷದ ವ್ಯಕ್ತಿಯ ಹೃದಯಕ್ಕೆ ಚುಚ್ಚಿದೆ. ಮಾರ್ಚ್ 27, ಸುಲ್ತಾನ್‌ಪುರ ಜಿಲ್ಲೆಯ ದುರ್ಗಾಪುರದಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಕ್ತಿಯ ಹೃದಯದ ಕವಾಟುಗಳಿಗೆ ಚುಚ್ಚಿಕೊಂಡಿದ್ದ ಕಬ್ಬಿಣದ ರಾಡ್ ಅನ್ನು ಹೊರ ತೆಗೆದು ಆತನ ಪ್ರಾಣ ಕಾಪಾಡುವಲ್ಲಿ  ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ (ಕೆಜಿಎಂಯು) ವೈದ್ಯರು ಯಶಸ್ವಿಯಾಗಿದ್ದಾರೆ. ಇಂತಹ ಸ್ಥಿತಿಯಲ್ಲೂ ವ್ಯಕ್ತಿಯ ಜೀವ ಉಳಿಸಿದ ವೈದ್ಯಕೀಯ ಸಿಬ್ಬಂದಿಗಳಿಗೆ ಶ್ಲಾಘನೆ ವ್ಯಕ್ತವಾಗಿದೆ.

‘ಮುನ್ನೆ ಲಾಲ್ ಶರ್ಮಾ(54) ಅವರನ್ನು ಕೆಜಿಎಂಯು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಇದಾದ ಬಳಿಕ ಆಪರೇಷನ್​​ ವೇಳೆ 75 ಸೆಂಮೀ ಉದ್ದದ ಕಬ್ಬಿಣದ ರಾಡ್​​ನಲ್ಲಿ 45 ಸೆಂ.ಮೀ ಕತ್ತರಿಸಿ ತೆಗೆಯಲಾಗಿದೆ. ಪರ್ಸ್-ಸ್ಟ್ರಿಂಗ್ ಹೊಲಿಗೆ ವಿಧಾನದ ಮೂಲಕ ಚಿಕಿತ್ಸೆ ನಡೆಸಿದ್ದು, ಹೃದಯದಿಂದ ಹೆಚ್ಚಿನ ರಕ್ತಸ್ರಾವವಾಗದಂತೆ ಯಶಸ್ವಿಯಾಗಿ ಹೊರತೆಗೆದು ಹಾನಿಗೊಳಗಾದ ಹೃದಯ ಮತ್ತು ಶ್ವಾಸಕೋಶವನ್ನು ಸರಿಪಡಿಸಲಾಗಿದೆ ‘ ಎಂದು ಡಾ ಯದ್ವೇಂದ್ರ ಧೀರ್ ಹೇಳಿದ್ದಾರೆ.

ಇದನ್ನೂ ಓದಿ: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ

ವರದಿಯ ಪ್ರಕಾರ, ರಾಡ್ 75 ಸೆಂ.ಮೀ ಉದ್ದವಿದ್ದು, 45 ಸೆಂ.ಮೀ ಉದ್ದವನ್ನು ವೈದ್ಯರು ಕತ್ತರಿಸಿ, ನಂತರ ಹಾನಿಗೊಳಗಾದ ಹೃದಯ ಮತ್ತು ಶ್ವಾಸಕೋಶವನ್ನು ಸರಿಪಡಿಸಲು ಮುಂದಾದರು. ಇದೀಗ ಮುನ್ನೆ ಲಾಲ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ