Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೃದಯಕ್ಕೆ ಚುಚ್ಚಿದ್ದ ಕಬ್ಬಿಣದ ರಾಡ್​​​ನ್ನು ಯಶಸ್ವಿಯಾಗಿ ಹೊರತೆಗೆದ ವೈದ್ಯರು

ವ್ಯಕ್ತಿಯ ಹೃದಯಕ್ಕೆ ಚುಚ್ಚಿಕೊಂಡಿದ್ದ ಕಬ್ಬಿಣದ ರಾಡ್ ಅನ್ನು ಹೊರ ತೆಗೆದು ಆತನ ಪ್ರಾಣ ಕಾಪಾಡುವಲ್ಲಿ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ (ಕೆಜಿಎಂಯು) ವೈದ್ಯರು ಯಶಸ್ವಿಯಾಗಿದ್ದಾರೆ. ವ್ಯಕ್ತಿಯ ಜೀವ ಉಳಿಸಿದ ವೈದ್ಯಕೀಯ ಸಿಬ್ಬಂದಿಗಳಿಗೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ. 

Viral News: ಹೃದಯಕ್ಕೆ ಚುಚ್ಚಿದ್ದ ಕಬ್ಬಿಣದ ರಾಡ್​​​ನ್ನು ಯಶಸ್ವಿಯಾಗಿ ಹೊರತೆಗೆದ ವೈದ್ಯರು
ಮುನ್ನೆ ಲಾಲ್ ಶರ್ಮಾ(54)
Follow us
ಅಕ್ಷತಾ ವರ್ಕಾಡಿ
|

Updated on: Apr 10, 2024 | 3:15 PM

ಲಕ್ನೋ: ಮನೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶೌಚಾಲಯದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮೇಲ್ಛಾವಣಿ ಕುಸಿದಿದ್ದು, ಪರಿಣಾಮ 75 ಸೆಂಮೀ ಉದ್ದದ ಕಬ್ಬಿಣದ ರಾಡ್ ಒಂದು 54 ವರ್ಷದ ವ್ಯಕ್ತಿಯ ಹೃದಯಕ್ಕೆ ಚುಚ್ಚಿದೆ. ಮಾರ್ಚ್ 27, ಸುಲ್ತಾನ್‌ಪುರ ಜಿಲ್ಲೆಯ ದುರ್ಗಾಪುರದಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಕ್ತಿಯ ಹೃದಯದ ಕವಾಟುಗಳಿಗೆ ಚುಚ್ಚಿಕೊಂಡಿದ್ದ ಕಬ್ಬಿಣದ ರಾಡ್ ಅನ್ನು ಹೊರ ತೆಗೆದು ಆತನ ಪ್ರಾಣ ಕಾಪಾಡುವಲ್ಲಿ  ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ (ಕೆಜಿಎಂಯು) ವೈದ್ಯರು ಯಶಸ್ವಿಯಾಗಿದ್ದಾರೆ. ಇಂತಹ ಸ್ಥಿತಿಯಲ್ಲೂ ವ್ಯಕ್ತಿಯ ಜೀವ ಉಳಿಸಿದ ವೈದ್ಯಕೀಯ ಸಿಬ್ಬಂದಿಗಳಿಗೆ ಶ್ಲಾಘನೆ ವ್ಯಕ್ತವಾಗಿದೆ.

‘ಮುನ್ನೆ ಲಾಲ್ ಶರ್ಮಾ(54) ಅವರನ್ನು ಕೆಜಿಎಂಯು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಇದಾದ ಬಳಿಕ ಆಪರೇಷನ್​​ ವೇಳೆ 75 ಸೆಂಮೀ ಉದ್ದದ ಕಬ್ಬಿಣದ ರಾಡ್​​ನಲ್ಲಿ 45 ಸೆಂ.ಮೀ ಕತ್ತರಿಸಿ ತೆಗೆಯಲಾಗಿದೆ. ಪರ್ಸ್-ಸ್ಟ್ರಿಂಗ್ ಹೊಲಿಗೆ ವಿಧಾನದ ಮೂಲಕ ಚಿಕಿತ್ಸೆ ನಡೆಸಿದ್ದು, ಹೃದಯದಿಂದ ಹೆಚ್ಚಿನ ರಕ್ತಸ್ರಾವವಾಗದಂತೆ ಯಶಸ್ವಿಯಾಗಿ ಹೊರತೆಗೆದು ಹಾನಿಗೊಳಗಾದ ಹೃದಯ ಮತ್ತು ಶ್ವಾಸಕೋಶವನ್ನು ಸರಿಪಡಿಸಲಾಗಿದೆ ‘ ಎಂದು ಡಾ ಯದ್ವೇಂದ್ರ ಧೀರ್ ಹೇಳಿದ್ದಾರೆ.

ಇದನ್ನೂ ಓದಿ: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ

ವರದಿಯ ಪ್ರಕಾರ, ರಾಡ್ 75 ಸೆಂ.ಮೀ ಉದ್ದವಿದ್ದು, 45 ಸೆಂ.ಮೀ ಉದ್ದವನ್ನು ವೈದ್ಯರು ಕತ್ತರಿಸಿ, ನಂತರ ಹಾನಿಗೊಳಗಾದ ಹೃದಯ ಮತ್ತು ಶ್ವಾಸಕೋಶವನ್ನು ಸರಿಪಡಿಸಲು ಮುಂದಾದರು. ಇದೀಗ ಮುನ್ನೆ ಲಾಲ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ